Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪರಿಶಿಷ್ಟ ಪಂಗಡ ಪಟ್ಟಿಯಲ್ಲಿ ಮಾರ್ಪಡಿಸಲು...

ಪರಿಶಿಷ್ಟ ಪಂಗಡ ಪಟ್ಟಿಯಲ್ಲಿ ಮಾರ್ಪಡಿಸಲು ಹೈಕೋರ್ಟ್‌ ಸೂಚಿಸುವಂತಿಲ್ಲ: ಸಿಜೆಐ ಚಂದ್ರಚೂಡ್‌

9 May 2023 2:43 PM IST
share
ಪರಿಶಿಷ್ಟ ಪಂಗಡ ಪಟ್ಟಿಯಲ್ಲಿ ಮಾರ್ಪಡಿಸಲು ಹೈಕೋರ್ಟ್‌ ಸೂಚಿಸುವಂತಿಲ್ಲ: ಸಿಜೆಐ ಚಂದ್ರಚೂಡ್‌

ಹೊಸದಿಲ್ಲಿ: ಯಾವುದೇ ನ್ಯಾಯಾಲಯ ಅಥವಾ ರಾಜ್ಯ ಸರ್ಕಾರಕ್ಕೆ  ಪರಿಶಿಷ್ಟ ಪಂಗಡ ಪಟ್ಟಿಗೆ ಸೇರ್ಪಡಿಸುವ, ಅದರಿಂದ ಹೊರತುಪಡಿಸುವ ಅಥವಾ ಅದನ್ನು ಮಾರ್ಪಡಿಸುವ ಅಧಿಕಾರವಿಲ್ಲ ಎಂಬ 23 ವರ್ಷ ಹಳೆಯ ಸಂವಿಧಾನಿಕ ಪೀಠದ ಆದೇಶವನ್ನು ಮಣಿಪುರ ಹೈಕೋರ್ಟಿಗೆ ಏಕೆ ತೋರಿಸಲಾಗಿಲ್ಲ ಎಂದು ರಾಜ್ಯದಲ್ಲಿ ಇತ್ತೀಚೆಗೆ ಭುಗಿಲೆದ್ದ ಹಿಂಸಾಚಾರದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಪ್ರತಿಕ್ರಿಯಿಸಿದ್ದಾರೆ ಎಂದು thehindu.com ವರದಿ ಮಾಡಿದೆ.

ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿ ಬದಲಾವಣೆಗಳನ್ನು ತರುವ ಕುರಿತಂತೆ ನಿರ್ದೇಶಿಸುವ ಅಧಿಕಾರವನ್ನು ಹೈಕೋರ್ಟ್‌ ಹೊಂದಿಲ್ಲ ಎಂದು ಮೌಖಿಕವಾಗಿ ಹೇಳಿದ ಜಸ್ಟಿಸ್‌ ಚಂದ್ರಚೂಡ್‌, “ಪರಿಶಿಷ್ಟ ಜಾತಿ ಅಥವಾ ಪಂಗಡಕ್ಕೆ ಸೇರಿಸುವ ಕುರಿತಾದ ಅಧಿಕಾರ ರಾಷ್ಟಪತಿಯದ್ದಾಗಿದೆ,” ಎಂದು ಹೇಳಿದರು.

ಮೀಟಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಅರ್ಜಿದಾರರು ಮಾಡಿದ ಕೋರಿಕೆ ಕುರಿತಾದ ಪ್ರಕರಣವನ್ನು ಶೀಘ್ರ, ಈ ಆದೇಶದ ಪ್ರತಿ ಸ್ವೀಕರಿಸಿದ ನಾಲ್ಕು ವಾರಗಳ ಅವಧಿಯೊಳಗೆ ಪರಿಗಣಿಸಬೇಕು ಎಂದು ಮಣಿಪುರ ಹೈಕೋರ್ಟ್‌ನ ಏಕಸದಸ್ಯ ಪೀಠ ತನ್ನ ಮಾರ್ಚ್‌ 27ರ ಆದೇಶದಲ್ಲಿ ಸೂಚಿಸಿದ ನಂತರದ ದಿನಗಳಲ್ಲಿ ರಾಜ್ಯದಲ್ಲಿ ಹಿಂಸಾಚಾರಗಳು ಸಂಭವಿಸಿ ಹಲವರನ್ನು ಬಲಿ ಪಡೆದು ಸಾಕಷ್ಟು ಆಸ್ತಿಪಾಸ್ತಿ ನಷ್ಟಕ್ಕೆ ಕಾರಣವಾಗಿದೆ.

ಸಂವಿಧಾನದ ವಿಧಿ 342 ಇದರ ನಿಬಂಧನೆ (1) ಅಡಿಯಲ್ಲಿ ನೀಡಲಾದ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಲಾದ ಪರಿಶಿಷ್ಟ ಪಂಗಡ ಪಟ್ಟಿಯಲ್ಲಿ ಮಾರ್ಪಡಿಸುವ, ತಿದ್ದುಪಡಿ ಮಾಡುವ ಅಥವಾ ಬದಲಾಯಿಸುವ ಅಧಿಕಾರ ರಾಜ್ಯ ಸರ್ಕಾರಗಳು, ನ್ಯಾಯಾಲಯಗಳು, ಟ್ರಿಬ್ಯುನಲ್‌ಗಳು ಅಥವಾ ಇತರ ಯಾವುದೇ ಪ್ರಾಧಿಕಾರಕ್ಕೆ ಇಲ್ಲ ಎಂದು ನವೆಂಬರ್‌ 2000 ರಲ್ಲಿ ಮಹಾರಾಷ್ಟ್ರ ಸರ್ಕಾರ ಹಾಗೂ ಮಿಲಿಂದ್‌ ನಡುವಿನ ಪ್ರಕರಣದಲ್ಲಿ ಸಂವಿಧಾನಿಕ ಪೀಠ ನೀಡಿದ ತೀರ್ಪಿನಲ್ಲಿ ಸೂಚಿಸಿತ್ತಲ್ಲದೆ  ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿ ಯಾವುದೇ ಮಾರ್ಪಾಡು ಮಾಡುವ ಅಧಿಕಾರವನ್ನು ಕಾನೂನಿನ ಮೂಲಕ ಸಂಸತ್ತು ಮಾತ್ರ ಹೊಂದಿದೆ ಎಂದು ಹೇಳಿತ್ತು.

ಜುಲೈ 2017ರಲ್ಲಿ ಸಿಎಂಡಿ, ಎಫ್‌ಸಿಐ ಹಾಗೂ ಜಗದೀಶ್‌ ಬಲರಾಂ ಬಹಿರಾ ಪ್ರಕರಣದಲ್ಲಿ ಆಗ ನ್ಯಾಯಮೂರ್ತಿಗಳಾಗಿದ್ದ ಚಂದ್ರಚೂಡ್‌ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ನೀಡಿದ ತೀರ್ಪಿನ ಸಂದರ್ಭವೂ ಉಲ್ಲೇಖಿಸಿತ್ತಲ್ಲದೆ ಪರಿಶಿಷ್ಟ ಪಂಗಡಗಳ ಕುರಿತಂತೆ ವಿಧಿ 342 ಅನ್ವಯದ ರಾಷ್ಟ್ರಪತಿಗಳ ಆದೇಶ ಯಾವತ್ತೂ ಅಂತಿಮ ಎಂದು ಹೇಳಿತ್ತು.

share
Next Story
X