Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮುರುಡೇಶ್ವರ - ಯಶವಂತಪುರ ನಡುವೆ ಬೇಸಿಗೆ...

ಮುರುಡೇಶ್ವರ - ಯಶವಂತಪುರ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ

9 May 2023 7:38 PM IST
share
ಮುರುಡೇಶ್ವರ - ಯಶವಂತಪುರ ನಡುವೆ ಬೇಸಿಗೆ ವಿಶೇಷ ರೈಲು ಸಂಚಾರ

ಉಡುಪಿ, ಮೇ 9: ನೈರುತ್ಯ ರೈಲ್ವೆಯ ಸಹಯೋಗದೊಂದಿಗೆ ಕೊಂಕಣ ರೈಲ್ವೆಯು ಯಶವಂತಪುರ (ಬೆಂಗಳೂರು) ಹಾಗೂ ಮುರುಡೇಶ್ವರ ನಡುವೆ ಬೇಸಿಗೆ ವಿಶೇಷ ರೈಲನ್ನು ಓಡಿಸಲು ನಿರ್ಧರಿಸಿದೆ.

ರೈಲು ನಂ.06587 ಯಶವಂತಪುರ-ಮುರುಡೇಶ್ವರ ಬೇಸಿಗೆ ವಿಶೇಷ ರೈಲು ಇಂದು ಮಧ್ಯರಾತ್ರಿ 11:55ಕ್ಕೆ ಯಶವಂತಪುರದಿಂದ ನಿರ್ಗಮಿಸಲಿದ್ದು, ನಾಳೆ ಅಪರಾಹ್ನ 12:55ಕ್ಕೆ ಮುರುಡೇಶ್ವರ ತಲುಪಲಿದೆ. ಅದೇ ರೀತಿ ರೈಲು ನಂ.06588 ಮುರುಡೇಶ್ವರ- ಯಶವಂತಪುರ ರೈಲು ಮೇ 10ರಂದು ಅಪರಾಹ್ನ 1:30ಕ್ಕೆ ಮುರುಡೇಶ್ವರದಿಂದ ಪ್ರಯಾಣ ಬೆಳೆಸಲಿದ್ದು,  ಮರುದಿನ ಬೆಳಗಿನ ಜಾವ 4 ಗಂಟೆಗೆ ಯಶವಂತಪುರ ತಲುಪಲಿದೆ.

ಈ ರೈಲಿಗೆ ಚಿಕ್ಕಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚೆನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರಕೂರು, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು ಹಾಗೂ ಭಟ್ಕಳಗಳಲ್ಲಿ ನಿಲುಗಡೆ ಇರುತ್ತದೆ. ರೈಲು ಒಟ್ಟು 2 ತ್ರಿಟಯರ್ ಎಸಿ ಸೇರಿದಂತೆ ಒಟ್ಟು 14 ಕೋಚ್‌ಗಳನ್ನು ಹೊಂದಿರುತ್ತದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

ಇಂದೋರ್-ಮಂಗಳೂರು ಜಂಕ್ಷನ್: ಇದೇ ರೀತಿ ಇಂದೋರ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ಏಕಮಾರ್ಗ ಸ್ಪೆಷಲ್ ರೈಲನ್ನು ಪಶ್ಚಿಮ ರೈಲ್ವೆಯ ಸಹಯೋಗದೊಂದಿಗೆ ಓಡಿಸಲು ಕೊಂಕಣ ರೈಲ್ವೆ ನಿರ್ಧರಿಸಿದೆ.
ರೈಲು ನಂ.09302 ಇಂದೋರ್- ಮಂಗಳೂರು ಜಂಕ್ಷನ್ ಓನ್‌ವೇ ವಿಶೇಷ ರೈಲು ಮೇ 11ರ ಗುರುವಾರ ಬೆಳಗ್ಗೆ 11:15ಕ್ಕೆ ಇಂದೋರ್‌ನಿಂದ ನಿರ್ಗಮಿಸಲಿದ್ದು, ಶುಕ್ರವಾರ ಸಂಜೆ 4:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.

ಈ ರೈಲಿಗೆ ದಿವಾಸ್, ಉಜ್ಜೈನಿ ಜಂಕ್ಷನ್, ನಾಗ್ಡ ಜಂಕ್ಷನ್, ಸೂರತ್, ವಲ್ಸಾಡ್,ವಾಪಿ, ಪಾಲ್ಗಾರ್, ವಾಸೈ ರೋಡ್, ಪನ್ವೇಲ್, ರೋಹಾ, ರತ್ನಗಿರಿ, ರಾಯಪುರ ರೋಡ್, ಕುಡಾಲ, ಥೀವಿಂ ಕರ್ಮಾಲಿ, ಮಡಗಾಂವ್ ಜಂಕ್ಷನ್, ಕಾರವಾರ ಹಾಗೂ ಉಡುಪಿ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ. ಈ ರೈಲು ಒಟ್ಟು 21 ಕೋಚ್‌ಗಳನ್ನು ಹೊಂದಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಬೆಂಗಳೂರು ಸಿಟಿ-ಕಾರವಾರ ರೈಲಿಗೆ ಹೆಚ್ಚುವರಿ ಬೋಗಿ: ಕೆಎಸ್‌ಆರ್ ಬೆಂಗಳೂರು ಸಿಟಿ ಹಾಗೂ ಕಾರವಾರ ನಡುವೆ ಸಂಚರಿಸುವ ದೈನಂದಿನ ಎಕ್ಸ್‌ಪ್ರೆಸ್ ರೈಲು ಇಂದು ಮತ್ತು ನಾಳೆ ಒಂದು ಹೆಚ್ಚುವರಿ ಸ್ಲೀಪರ್ ಕೋಚ್ ನೊಂದಿಗೆ ಸಂಚರಿಸಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

share
Next Story
X