Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್: ಮುಂಬೈ ಇಂಡಿಯನ್ಸ್‌ಗೆ 200 ರನ್...

ಐಪಿಎಲ್: ಮುಂಬೈ ಇಂಡಿಯನ್ಸ್‌ಗೆ 200 ರನ್ ಗುರಿ ನೀಡಿದ ಆರ್‌ಸಿಬಿ

ಮ್ಯಾಕ್ಸ್‌ವೆಲ್, ಪ್ಲೆಸಿಸ್ ಅರ್ಧಶತಕ

9 May 2023 9:31 PM IST
share
ಐಪಿಎಲ್: ಮುಂಬೈ ಇಂಡಿಯನ್ಸ್‌ಗೆ 200 ರನ್ ಗುರಿ ನೀಡಿದ ಆರ್‌ಸಿಬಿ
ಮ್ಯಾಕ್ಸ್‌ವೆಲ್, ಪ್ಲೆಸಿಸ್ ಅರ್ಧಶತಕ

  ಮುಂಬೈ, ಮೇ 9: ನಾಯಕ ಎಫ್ ಡು ಪ್ಲೆಸಿಸ್(65 ರನ್, 41 ಎಸೆತ) ಹಾಗೂ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್(68 ರನ್, 33 ಎಸೆತ)ಅರ್ಧಶತಕದ ಕೊಡುಗೆಯ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್‌ಗೆ ಐಪಿಎಲ್‌ನ 54ನೇ ಪಂದ್ಯದ ಗೆಲುವಿಗೆ 200 ರನ್ ಗುರಿ ನೀಡಿದೆ.

ಮಂಗಳವಾರ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿತು.

ಆರ್‌ಸಿಬಿಯ ಆರಂಭ ಉತ್ತಮವಾಗಿರಲಿಲ್ಲ. ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ(1 ರನ್)ಇನಿಂಗ್ಸ್‌ನ 5ನೇ ಎಸೆತದಲ್ಲಿ ಜೇಸನ್ ಬೆಹ್ರೆನ್‌ಡಾರ್ಫ್‌ಗೆ ವಿಕೆಟ್ ಒಪ್ಪಿಸಿದರು. 3ನೇ ಕ್ರಮಾಂಕದ ಆಟಗಾರ ಅನುಜ್ ರಾವತ್(6 ರನ್)ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಆಗ ಜೊತೆಯಾದ ಪ್ಲೆಸಿಸ್(65 ರನ್, 41 ಎಸೆತ, 5 ಬೌಂಡರಿ, 3 ಸಿಕ್ಸರ್) ಹಾಗೂ ಮ್ಯಾಕ್ಸ್‌ವೆಲ್(68 ರನ್, 33 ಎಸೆತ, 8 ಬೌಂಡರಿ, 4 ಸಿಕ್ಸರ್)ಮೂರನೇ ವಿಕೆಟ್‌ಗೆ 120 ರನ್ ಜೊತೆಯಾಟ ನಡೆಸಿ ತಂಡವನ್ನು ಆಧರಿಸಿದರು.

ದಿನೇಶ್ ಕಾರ್ತಿಕ್(30 ರನ್, 18 ಎಸೆತ) ಹಾಗೂ ಕೇದಾರ್ ಜಾಧವ್(ಔಟಾಗದೆ 12, 10 ಎಸೆತ) 6ನೇ ವಿಕೆಟ್‌ಗೆ 39 ರನ್ ಸೇರಿಸಿ ತಂಡವನ್ನು ಉತ್ತಮ ಮೊತ್ತದತ್ತ ಮುನ್ನಡೆಸಿದರು. ವನಿಂದು ಹಸರಂಗ(12)ಔಟಾಗದೆ ಉಳಿದರು.

ಕೊನೆಯ ಓವರ್‌ನಲ್ಲಿ ಕೇವಲ 6 ರನ್ ಬಿಟ್ಟುಕೊಟ್ಟ ಆಕಾಶ್ ಮಧ್ವಾನ್ ಆರ್‌ಸಿಬಿಯನ್ನು 200 ರನ್‌ನೊಳಗೆ ನಿಯಂತ್ರಿಸಿದರು. ಆತಿಥೇಯ ಮುಂಬೈ ಪರ ಎಡಗೈ ವೇಗದ ಬೌಲರ್ ಜೇಸನ್ ಬೆಹ್ರೆನ್‌ಡಾರ್ಫ್(3-36)ಯಶಸ್ವಿ ಪ್ರದರ್ಶನ ನೀಡಿದರು. ಕ್ಯಾಮರೂನ್ ಗ್ರೀನ್(1-15), ಕುಮಾರ್ ಕಾರ್ತಿಕೇಯ(1-35) ಹಾಗೂ ಕ್ರಿಸ್ ಜೋರ್ಡನ್(1-48) ತಲಾ ಒಂದು ವಿಕೆಟ್ ಪಡೆದರು.
 

share
Next Story
X