Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಕ್ರೇನ್‌ನಲ್ಲಿ ಗೆದ್ದರೆ ಮಾತ್ರ...

ಉಕ್ರೇನ್‌ನಲ್ಲಿ ಗೆದ್ದರೆ ಮಾತ್ರ ರಶ್ಯಕ್ಕೆ ಉಳಿಗಾಲ: ಪುಟಿನ್

9 May 2023 10:30 PM IST
share
ಉಕ್ರೇನ್‌ನಲ್ಲಿ ಗೆದ್ದರೆ ಮಾತ್ರ ರಶ್ಯಕ್ಕೆ ಉಳಿಗಾಲ: ಪುಟಿನ್

ಮಾಸ್ಕೋ, ಮೇ 9:  ಜಗತ್ತು ಪರಿವರ್ತನೆಯ ಕೇಂದ್ರಬಿಂದುವಿನಲ್ಲಿ ಇದೆ. ರಶ್ಯದ ವಿರುದ್ಧ ಹೇರಲಾಗಿರುವ ಈ ಯುದ್ಧದಲ್ಲಿ ನಾವು ಗೆದ್ದರೆ ಮಾತ್ರ ನಮ್ಮ ಭವಿಷ್ಯ ಸುರಕ್ಷಿತವಾಗಿರಲಿದೆ ಎಂದು ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೇಳಿದ್ದಾರೆ.

ಎರಡನೇ ವಿಶ್ವಯುದ್ಧದಲ್ಲಿ ಜರ್ಮನಿಯ ವಿರುದ್ಧ ರಶ್ಯದ ಗೆಲುವಿನ ವಾರ್ಷಿಕೋತ್ಸವದ ಅಂಗವಾಗಿ ಮಾಸ್ಕೋದ ಕೆಂಪುಚೌಕದಲ್ಲಿ ನಡೆದ ವಿಜಯ ದಿನ ಪಥಸಂಚಲನದ ಗೌರವ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

ಬಿಗಿ ಭದ್ರತೆಯ ಮಧ್ಯೆ, ಸಾಂಪ್ರದಾಯಿಕ ಸೋವಿಯತ್ ಶೈಲಿಯಲ್ಲಿ ಈ ವಿಜಯ ದಿನಾಚರಣೆ ನಡೆದಿದ್ದು ರಶ್ಯ ಸೇನೆಯ ಹಿರಿಯ ಅಧಿಕಾರಿಗಳು, ಸೇನಾಧಿಕಾರಿಗಳು, ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಹೋರಾಡುತ್ತಿರುವ ಯೋಧರು  ಪಾಲ್ಗೊಂಡಿದ್ದರು. ಯುದ್ಧದಲ್ಲಿ ರಶ್ಯದ ಗೆಲುವಿಗೆ ಪ್ರತಿಜ್ಞೆ ಮಾಡಿದ ಪುಟಿನ್, ರಶ್ಯದ ಭವಿಷ್ಯವು  ಉಕ್ರೇನ್ನಲ್ಲಿ ಹೋರಾಡುತ್ತಿರುವ ರಶ್ಯದ ಯೋಧರ ಕೈಯಲ್ಲಿದೆ ಎಂದರು.

ನಮ್ಮ ಮಾತೃಭೂಮಿಯ ವಿರುದ್ಧ ಯುದ್ಧವನ್ನು ಪ್ರಾರಂಭಿಸಲಾಗಿದೆ. ಇದರಲ್ಲಿ ರಶ್ಯ ವಿಜಯಶಾಲಿಯಾಗಬೇಕಿದ್ದು ಅದಕ್ಕಾಗಿ ನಮ್ಮ ಯೋಧರನ್ನು ಹುರಿದುಂಬಿಸಬೇಕಾಗಿದೆ . ಉಕ್ರೇನ್ನಲ್ಲಿ ಅಸ್ತಿತ್ವವಾದದ ಸಂಘರ್ಷ ನಡೆಯುತ್ತಿದ್ದು ಉಕ್ರೇನ್ ಸರಕಾರವನ್ನು ಬೆಂಬಲಿಸುವ ಮೂಲಕ ಪಾಶ್ಚಿಮಾತ್ಯರು ಈ ಬೆಂಕಿಗೆ ತುಪ್ಪ ಸುರಿಯುತ್ತಿದ್ದಾರೆ ಎಂದು ಪುಟಿನ್ ಹೇಳಿದರು.

ಪಾಶ್ಚಾತ್ಯ ಜಾಗತಿಕ ಗಣ್ಯರು ವಿಶ್ವದೆಲ್ಲೆಡೆ ಬಿಕ್ಕಟ್ಟು, ಅಂತರ್ಯುದ್ಧದ ಬೀಜ ಬಿತ್ತಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಅವರ ಉದ್ದೇಶದಲ್ಲಿ ಹೊಸತೇನಿಲ್ಲ, ನಮ್ಮ ದೇಶ ನಾಶಗೊಳ್ಳುವುದನ್ನು ಅವರು ಬಯಸುತ್ತಿದ್ದಾರೆ. ಆದರೆ ರಶ್ಯ ಈ ಷಡ್ಯಂತ್ರವನ್ನು ಮೆಟ್ಟಿ ನಿಲ್ಲಲಿದೆ. ಅಂತರಾಷ್ಟ್ರೀಯ ಭಯೋತ್ಪಾದನೆಯನ್ನು ನಾವು ಹಿಮ್ಮೆಟ್ಟಿಸಲಿದ್ದೇವೆ, ನಮ್ಮ ಭದ್ರತೆಯನ್ನು ಖಾತರಿ ಪಡಿಸಲಿದ್ದೇವೆ ಎಂದು ಪುಟಿನ್ ಹೇಳಿದ್ದಾರೆ.

share
Next Story
X