Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಸಿನಿಮಾವನ್ನು ಸಂದೇಶ ನೀಡಲು ಬಳಸಬೇಕೆ...

ಸಿನಿಮಾವನ್ನು ಸಂದೇಶ ನೀಡಲು ಬಳಸಬೇಕೆ ಹೊರತು ದುರ್ಬಳಕೆ ಮಾಡಬಾರದು: 'ದಿ ಕೇರಳ ಸ್ಟೋರಿ' ಬಗ್ಗೆ ನಟ ಟೊವಿನೊ ಥಾಮಸ್

10 May 2023 8:58 PM IST
share
ಸಿನಿಮಾವನ್ನು ಸಂದೇಶ ನೀಡಲು ಬಳಸಬೇಕೆ ಹೊರತು ದುರ್ಬಳಕೆ ಮಾಡಬಾರದು: ದಿ ಕೇರಳ ಸ್ಟೋರಿ ಬಗ್ಗೆ ನಟ ಟೊವಿನೊ ಥಾಮಸ್

ಮುಂಬೈ: 2018ರಲ್ಲಿ ಸಂಭವಿಸಿದ ಕೇರಳ ಪ್ರವಾಹ ಕುರಿತು ನಿರ್ಮಾಣವಾಗಿರುವ '2018' ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ ಟೊವಿನೊ ಥಾಮಸ್, ಈ ಸಿನಿಮಾವನ್ನು ಕೇರಳದ ಸತ್ಯ ಕತೆ ಎಂದು ಜನರು ಹೇಳುತ್ತಿರುವ ಬಗ್ಗೆ ನಿಮಗೇನನ್ನಿಸುತ್ತದೆ ಹಾಗೂ 'ದಿ ಕೇರಳ ಸ್ಟೋರಿ' ರಾಜ್ಯವನ್ನು ಬೇರೆಯದೇ ಬಣ್ಣದಲ್ಲಿ ತೋರಿಸಿರುವುದಕ್ಕೆ ನಿಮಗೆ ನೋವಾಗಿದೆಯೇ ಎಂಬ ಪ್ರಶ್ನೆಗಳಿಗೆ ಉತ್ತರಿಸಿರುವ ಟೋವಿನ್ ಥಾಮಸ್‌, ಕೇವಲ ಮೂವರು ವ್ಯಕ್ತಿಗಳನ್ನು ಮಾತ್ರ ಉಲ್ಲೇಖಿಸಿ ಇಡೀ ಕೇರಳದ ಕತೆ ಎಂದು ಸಾರ್ವತ್ರೀಕರಣಗೊಳಿಸಲಾಗುವುದಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.

indian express.comಗೆ ನೀಡಿರುವ ಸಂದರ್ಶನದಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಟೋವಿನ್ ಥಾಮಸ್, "ನಾನು ಈವರೆಗೆ 'ದಿ ಕೇರಳ ಸ್ಟೋರಿ' ಸಿನಿಮಾವನ್ನು ವೀಕ್ಷಿಸಿಲ್ಲ. ಆ ಚಿತ್ರವನ್ನು ವೀಕ್ಷಿಸಿರುವ ಯಾರೊಂದಿಗೂ ನಾನು ಮಾತನಾಡಿಲ್ಲ. ನಾನು ಟ್ರೇಲರ್ ಮಾತ್ರ ವೀಕ್ಷಿಸಿದ್ದೇನೆ. ಮತ್ತದರ ನಿರ್ಮಾಪಕರು ತಾವೇತಾವಾಗಿ 32,000 ಸಂಖ್ಯೆಯಿಂದ 3 ಎಂದು ಮಾರ್ಪಾಡು ಮಾಡಿದ್ದಾರೆ. ಹಾಗೆಂದರೇನು? ನನಗೆ ತಿಳಿದಂತೆ ಕೇರಳದಲ್ಲಿ 35 ದಶಲಕ್ಷ ಜನರು ವಾಸಿಸುತ್ತಿದ್ದಾರೆ ಮತ್ತು ಕೇವಲ ಮೂರು ಘಟನೆಗಳನ್ನು ಉಲ್ಲೇಖಿಸಿ ಯಾರೂ ಅವನ್ನು ಸಾರ್ವತ್ರೀಕರಣಗೊಳಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಕೇರಳದಲ್ಲಿ ಇಂತಹ ಘಟನೆಗಳು ನಡೆದಿವೆ ಎಂಬ ವಾಸ್ತವವನ್ನು ನಾನು ಅಲ್ಲಗಳೆಯುವುದಿಲ್ಲ. ಆ ಬಗ್ಗೆ ನನಗೆ ವೈಯಕ್ತಿಕವಾಗಿ ಏನೂ ತಿಳಿದಿರದಿದ್ದರೂ ಸುದ್ದಿಗಳನ್ನು ಓದಿ ತಿಳಿದುಕೊಂಡಿದ್ದೇನೆ. ನಾವಿಂದು ಏನೆಲ್ಲ ನೋಡುತ್ತಿದ್ದೇವೆ ಅವೆಲ್ಲ ವಾಸ್ತವವಲ್ಲ, ಕೇವಲ ಅಭಿಪ್ರಾಯಗಳು. ಐದು ವಿಭಿನ್ನ ಸುದ್ದಿ ವಾಹಿನಿಗಳಲ್ಲಿ ಒಂದೇ ಸುದ್ದಿಯನ್ನು ಐದು ವಿಭಿನ್ನ ಆಯಾಮಗಳಲ್ಲಿ ನಾವು ನೋಡುತ್ತೇವೆ. ಹೀಗಾಗಿ ಯಾವುದು ಸರಿ, ಯಾವುದು ತಪ್ಪು ಎಂದು ನನಗೆ ತಿಳಿದಿಲ್ಲ. ಆದರೆ, ನಾನು ಇಂತಹ ಅಭಿಪ್ರಾಯಗಳನ್ನು ಕೇಳಿದ್ದೇನೆ. ಹೀಗಾಗಿ ಇಂತಹ ಘಟನೆಗಳು ನಡೆದಿವೆ ಎಂಬ ವಾಸ್ತವವನ್ನು ನಾನು ನಿರಾಕರಿಸುವುದಿಲ್ಲ. ಆದರೆ, 35  ದಶಲಕ್ಷ ಮಂದಿಯ ಪೈಕಿ ಮೂವರ ಉದಾಹರಣೆಯನ್ನು ಸಾರ್ವತ್ರೀಕರಣಗೊಳಿಸಲು ಸಾಧ್ಯವಿಲ್ಲ ಮತ್ತು ತಪ್ಪು ಮಾಹಿತಿ ನೀಡುವುದು ನಿಜಕ್ಕೂ ಕೆಟ್ಟದ್ದು" ಎಂದು ಹೇಳಿದ್ದಾರೆ.

ಜನರು ಕಾಲ್ಪನಿಕ ಕತೆಯನ್ನು ಸಿನಿಮಾದಲ್ಲಿ ತೋರಿಸಬಹುದಾಗಿದೆ. ಆದರೆ, ಸಿನಿಮಾಗೆ 'ದಿ ಕೇರಳ ಸ್ಟೋರಿ' ಎಂದು ಹೆಸರಿಟ್ಟಿರುವುದು ತಪ್ಪು ಎಂದೂ ಅವರು ಅಭಿಪ್ರಾಯ ಪಟ್ಟಿದ್ದಾರೆ.

ಸಿನಿಮಾ ಅತ್ಯಂತ ಬಲಶಾಲಿ ಮಾಧ್ಯಮವಾಗಿದ್ದು, ಅದನ್ನು ಸಂದೇಶ ನೀಡಲು ಬಳಸಿಕೊಳ್ಳಬೇಕೇ ಹೊರತು ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಟೋವಿನ್ ಥಾಮಸ್‌ ಕಿವಿಮಾತು ಹೇಳಿದ್ದಾರೆ.

ಸಿನಿಮಾ ಮೂಲಕ ನಾವು ಪ್ರೇಕ್ಷಕರಿಗೆ ಬಲವಾದ ಸಂದೇಶ ನೀಡಬಹುದಾಗಿದೆ. ನಾವದನ್ನು ಜವಾಬ್ದಾರಿಯನ್ನಾಗಿ ಸ್ವೀಕರಿಸಬೇಕಿದೆ. ಸಿನಿಮಾವು ಕಲೆಯ ಅತ್ಯಂತ ಪರಿಶುದ್ಧ ಮಾದರಿ. ಅದನ್ನು ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಕರೆ ನೀಡಿದ್ದಾರೆ.

share
Next Story
X