Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಕಲಿ ಮತದಾನ ಆರೋಪ | ಮಿಯ್ಯಾರಿನಲ್ಲಿ...

ನಕಲಿ ಮತದಾನ ಆರೋಪ | ಮಿಯ್ಯಾರಿನಲ್ಲಿ ಪೊಲೀಸ್-ಕಾಂಗ್ರೆಸ್ ಮಧ್ಯೆ ವಾಗ್ವಾದ: ಸುನೀಲ್ ಕುಮಾರ್ ವಿರುದ್ಧ ಘೋಷಣೆ

11 May 2023 11:19 AM IST
share
ನಕಲಿ ಮತದಾನ ಆರೋಪ | ಮಿಯ್ಯಾರಿನಲ್ಲಿ ಪೊಲೀಸ್-ಕಾಂಗ್ರೆಸ್ ಮಧ್ಯೆ ವಾಗ್ವಾದ: ಸುನೀಲ್ ಕುಮಾರ್ ವಿರುದ್ಧ ಘೋಷಣೆ

ಕಾರ್ಕಳ, ಮೇ 11: ಕಾರ್ಕಳ ವಿಧಾನಸಭಾ ಕ್ಷೇತ್ರದ ಮಿಯ್ಯಾರು ಗ್ರಾಮದ ಸಮಾಜ ಮಂದಿರ ಮತಗಟ್ಟೆಯಲ್ಲಿ ನಕಲಿ ಮತದಾನ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮಾ.10ರಂದು ರಾತ್ರಿ ವೇಳೆ ಮತಗಟ್ಟೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು.

 ದುಬೈಯಲ್ಲಿರುವ ಸುಹಾಸ್ ಎಂಬ ಮತದಾರ ಹೆಸರಿನಲ್ಲಿ 18 ವರ್ಷ ತುಂಬಿರದ ಅಪ್ರಾಪ್ತ ವಯಸ್ಸಿನ ಧೀರಜ್ ಎಂಬಾತ ಮತದಾನ ಮಾಡಿರುವುದಾಗಿ ದೂರಲಾಗಿದೆ. ಈ ಮಾಹಿತಿ ಹರಡುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತಗಟ್ಟೆ ಮುಂದೆ ಜಮಾಯಿಸಿ, ಸಚಿವ ಸುನೀಲ್ ಕುಮಾರ್ ವಿರುದ್ಧ ಘೋಷಣೆ ಕೂಗಿದರು.

ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ಪೊಲೀಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಮತಯಂತ್ರ ಸಾಗಿಸುವ ಬಸ್ ಮುಂದೆ ಸಾಗದಂತೆ ತಡೆಯಲಾಯಿತು. ಈ ಸಂದರ್ಭ ಪೊಲೀಸರು ಲಾಠಿ ಬೀಸಿ ಕಾಂಗ್ರೆಸ್ ಕಾರ್ಯಕರ್ತ ರನ್ನು ಚದುರಿಸಿದರು.

ಸ್ಥಳಕ್ಕೆ ಆಗಮಿಸಿದ ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ ಶೆಟ್ಟಿ ಕಾಯಕರ್ತರನ್ನು ಸಮಾಧಾನಪಡಿಸಿ ವಾಪಸ್ ಕಳುಹಿಸಿದರು. ಈ ವೇಳೆ ಮಾತನಾಡಿದ ಅವರು, ಈ ಸಂಬಂಧ ನಾವು ಪೊಲೀಸರಿಗೆ ದೂರು ಕೊಟ್ಟಿದ್ದೇವೆ. ನಕಲಿ ಮತದಾನ ಮಾಡಿರುವ ಬಾಲಕನನ್ನು ಪೊಲೀಸ್ ವಶಕ್ಕೆ ನೀಡಲಾಗಿದೆ. ಈ ಗಂಭೀರ ಪ್ರಕರಣದ ಬಗ್ಗೆ ಪೊಲೀಸರು ಸೂಕ್ತ ಕಾನೂನು ಕ್ರಮ ಜರುಗಿಸುವ ವಿಶ್ವಾಸ ನಮಗೆ ಇದೆ. ಸತ್ಯಕ್ಕೆ ಜಯ ಸಿಗಲಿದೆ ಎಂದರು.

ಬಿಎಲ್‌ಓ ಚೀಟಿ ಬದಲು ಕೈಯಲ್ಲಿ ಬರೆದ ಚೀಟಿ ನೋಡಿ ಮತಗಟ್ಟೆ ಒಳಗೆ ಬಿಟ್ಟಿದ್ದಾರೆ. ಇದು ಒಂದು ನಕಲಿ ಮತದಾನ ಅಲ್ಲ, ಕ್ಷೇತ್ರದ ಎಲ್ಲ 209 ಮತಗಟ್ಟೆಯಲ್ಲೂ ಅಕ್ರಮ ಮತದಾನ ಆಗಿರುವ ಬಗ್ಗೆ ನಮಗೆ ಸಂಶಯ ಕಾಡುತ್ತಿದೆ. ಇಂತಹ ಕೆಟ್ಟ ಪರಿಸ್ಥಿತಿ ನಮ್ಮ ಕಾರ್ಕಳದಲ್ಲಿದ್ದರೆ ಇನ್ನು ದೇಶದ ಪರಿಸ್ಥಿತಿ ಹೇಗಿರಬಹುದು. ಇಲ್ಲಿ ಗಲಾಟೆ ಆಗಲು ನೇರವಾಗಿ ಸಚಿವ ಸುನೀಲ್ ಕುಮಾರ್ ಅವರೇ ಕಾರಣ. ಅವರ ಕುಮ್ಮಕ್ಕಿನಿಂದಲೇ ಇದು ನಡೆದಿದೆ. ಮೂರು ಬಾರಿ ಶಾಸಕರಾದವರು, ಸಚಿವರಾದ ಇವರಿಗೆ ಈ ರೀತಿ ಅಕ್ರಮ ಮತದಾನ ಮಾಡಿ ಗೆಲ್ಲಬೇಕೆ. ನಾನು ಒಬ್ಬ ಸಾಮಾನ್ಯ ಕಾರ್ಯಕರ್ತ. ನಮ್ಮ ಬಗ್ಗೆ ಇವರಿಗೆ ಯಾಕೆ ಭಯ ಎಂದು ಅವರು ಟೀಕಿಸಿದರು.

share
Next Story
X