Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 4 ಬಾರಿ ಸಿಎಂ, 2 ಬಾರಿ ಪ್ರಧಾನಿಯಾಗಿರುವ...

4 ಬಾರಿ ಸಿಎಂ, 2 ಬಾರಿ ಪ್ರಧಾನಿಯಾಗಿರುವ ಮೋದಿಯವರು ಅಧಿಕಾರ ಬಿಟ್ಟುಕೊಡುತ್ತಾರೆಯೇ?: ಜಗದೀಶ್ ಶೆಟ್ಟರ್

''ನನಗೆ ಟಿಕೆಟ್ ನೀಡದಿದ್ದರಿಂದ 15-20 ಕ್ಷೇತ್ರಗಳಲ್ಲಿ ಬಿಜೆಪಿ ಪರಿಣಾಮ ಎದುರಿಸಬೇಕಾಗಿದೆ''

11 May 2023 6:02 PM IST
share
4 ಬಾರಿ ಸಿಎಂ, 2 ಬಾರಿ ಪ್ರಧಾನಿಯಾಗಿರುವ ಮೋದಿಯವರು ಅಧಿಕಾರ ಬಿಟ್ಟುಕೊಡುತ್ತಾರೆಯೇ?: ಜಗದೀಶ್ ಶೆಟ್ಟರ್
''ನನಗೆ ಟಿಕೆಟ್ ನೀಡದಿದ್ದರಿಂದ 15-20 ಕ್ಷೇತ್ರಗಳಲ್ಲಿ ಬಿಜೆಪಿ ಪರಿಣಾಮ ಎದುರಿಸಬೇಕಾಗಿದೆ''

ಹುಬ್ಬಳ್ಳಿ: 'ನರೇಂದ್ರ ಮೋದಿಯವರು ನಾಲ್ಕು ಬಾರಿ ಮುಖ್ಯಮಂತ್ರಿ ಆಗಿದ್ದಾರೆ, ಎರಡು ಬಾರಿ ಪ್ರಧಾನಮಂತ್ರಿಗಳಾಗಿದ್ದಾರೆ. ಈ ಹಂತದಲ್ಲಿ ಅವರು ಅಧಿಕಾರ ಬಿಟ್ಟುಕೊಡುತ್ತಾರೆಯೇ?' ಎಂದು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪ್ರಶ್ನೆ ಮಾಡಿದ್ದಾರೆ. 

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  'ನಾನು ಯಾವುದೇ ಆಸೆಯಿಂದ ಕಾಂಗ್ರೆಸ್ ಸೇರಿಲ್ಲ. ಸಚಿವ ಸ್ಥಾನದ ಆಕಾಂಕ್ಷಿಯೂ ನಾನಲ್ಲ. ಬಿಜೆಪಿಯವರು ಮಾಡಿದ ಮೋಸಕ್ಕಾಗಿ ಕಾಂಗ್ರೆಸ್ ಪಕ್ಷ ಸೇರಿದೆ, ಶಾಸಕನಾಗಿದ್ದರೆ ಮನಸ್ಸಿಗೆ ಸಮಾಧಾನ ಆಗುತ್ತದೆ. ಜೋಶಿಯವರು 4 ಬಾರಿ ಸಂಸದ, ಮಂತ್ರಿಯಾಗಿದ್ದಾರೆ. ರಾಜಕಾರಣ ಬಿಡಲಿ. ಮೋದಿ ನಾಲ್ಕು ಬಾರಿ ಮುಖ್ಯಮಂತ್ರಿ, ಪ್ರಧಾನಿ ಆಗಿದ್ದಾರೆ. ಅವರು ರಾಜಕೀಯ ಬಿಡ್ತಾರಾ? ಅದು ಸಾಧ್ಯವಿಲ್ಲ. ಇನ್ನೊಮ್ಮೆ ಪ್ರಧಾನಿ ಆಗಲು ಪ್ರಯತ್ನ ಮಾಡ್ತಿದ್ದಾರೆ. ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿ ಇರಬೇಕೆಂಬುದು ನನ್ನ ನಿಲುವು' ಎಂದು ಹೇಳಿದರು. 

''ಬಿಜೆಪಿ ನನಗೆ ಟಿಕೆಟ್‌ ಕೊಡದೆ ಮೋಸ ಮಾಡಿದ್ದರಿಂದ ದೊಡ್ಡ ಪರಿಣಾಮ ಆಗುವುದು ಖಚಿತ. ನನಗೆ ಟಿಕೆಟ್‌ ಕೊಟ್ಟಿದ್ದರೆ ಎಲ್ಲವೂ ಸರಿ ಇರುತ್ತಿತ್ತು. ನನಗೆ ಟಿಕೆಟ್ ನೀಡದಿದ್ದರಿಂದ 15-20 ಕ್ಷೇತ್ರಗಳಲ್ಲಿ ಬಿಜೆಪಿ ಪರಿಣಾಮ ಎದುರಿಸಬೇಕಾಗಿದೆ'' ಎಂದು ತಿಳಿಸಿದರು.

''ಗೆಲುವಿನ ಅಂತರ ಹೆಚ್ಚಾಗಲಿದೆ''

'ಕ್ಷೇತ್ರದಲ್ಲಿ ನಾನು ಲೆಕ್ಕಾಚಾರ ಮಾಡಿದ್ದಕ್ಕಿಂತ ದ್ವಿಗುಣ ಬೆಂಬಲ ಸಿಕ್ಕಿದೆ. ಗೆಲುವಿನ ಅಂತರ ಕಳೆದ ಬಾರಿಗಿಂತ ಹೆಚ್ಚಾಗಲಿದೆ.‌ ನಾನು ಆರು ಎಲೆಕ್ಷನ್ ಮಾಡಿದ್ದೀನಿ, ಮತದಾರರಿಗೆ ದುಡ್ಡು ಹಂಚಿರಲಿಲ್ಲ. ಬೇರೆ ಬೇರೆ ಕ್ಷೇತ್ರಗಳಲ್ಲಿ ಹಣ, ಕುಕ್ಕರ್ ಕೊಡುತ್ತಾರೆ. ಆದರೆ ಬಿಜೆಪಿ ಹೆಸರು ಹೇಳಿಕೊಳ್ಳುವ ವ್ಯಕ್ತಿಗಳು ನಮ್ಮ ಕ್ಷೇತ್ರದಲ್ಲಿ ಹತಾಶರಾಗಿ ಹಣ ಹಂಚಿದ್ದಾರೆ.‌ ಸ್ಲಮ್‌ಗಳಲ್ಲಿ ಜನರಿಗೆ ಐದು‌ನೂರು, ಸಾವಿರ ಹಣ ಕೊಟ್ಟಿದ್ದಾರೆ. ಹಣದ ಬಲದ ಮೇಲೆ ಗೆಲ್ಲುವುದಾದರೆ ಬಹಳಷ್ಟು ಶ್ರೀಮಂತರೇ ಗೆಲ್ಲುತ್ತಿದ್ದರು. ನಮ್ಮ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಣ ಹಂಚುವುದು ಮಾಡಿದ್ದು ನನಗೆ ವೇದನೆಯಾಗಿದೆ' ಎಂದು ಅವರು ಹೇಳಿದರು.

share
Next Story
X