ಶ್ರೀಕರ ಭಟ್, ಡಾ.ಪಾದೆಕಲ್ಲು ವಿಷ್ಣು ಭಟ್ಗೆ ಯಕ್ಷಗಾನ ಕಲಾರಂಗದ ಅರ್ಥಧಾರಿ ಪ್ರಶಸ್ತಿ

ಉಡುಪಿ, ಮೇ 11: ಉಡುಪಿ ಯಕ್ಷಗಾನ ಕಲಾರಂಗವು ಸಹೃದಯಿ ಕಲಾ ಪೋಷಕ ಮಟ್ಟಿ ಮುರಲೀಧರ ರಾವ್ ಮತ್ತು ಅರ್ಥಧಾರಿ ಪಂಡಿತ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಅನುಕ್ರಮ ವಾಗಿ ಅರ್ಥಧಾರಿ, ಪತ್ರಕರ್ತ, ಲೇಖಕ, ವಿಮರ್ಶಕ, ಸಂಘಟಕ ಶ್ರೀಕರ ಭಟ್ ಹಾಗೂ ಅರ್ಥಧಾರಿ, ಸಂಶೋಧಕ, ಲೇಖಕ, ಪ್ರವಚನಕಾರ ಡಾ.ಪಾದೆಕಲ್ಲು ವಿಷ್ಣು ಭಟ್ ಆಯ್ಕೆಯಾಗಿದ್ದಾರೆ.
ಸಂಸ್ಥೆಯ ತಾಳಮದ್ದಲೆ ಸಪ್ತಾಹ ಮೇ 21ರಿಂದ 27ರವರೆಗೆ ನಡೆಯಲಿದ್ದು, ಮೇ 27 ಶನಿವಾರ ಸಂಜೆ 5:00 ಗಂಟೆಗೆ ಶಿರ್ವದ ಮಹಿಳಾ ಸೌಧದಲ್ಲಿ ನಡೆಯುವ ತಾಳಮದ್ದಲೆ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಶಸ್ತಿಯು ತಲಾ 20,000ರೂ. ನಗದು ಪುರಸ್ಕಾರವನ್ನು ಒಳಗೊಂಡಿದೆ.
Next Story





