Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉತ್ತರಾಧಿಕಾರಿ ಪ್ರಮಾಣಪತ್ರ ಹಕ್ಕುಗಳನ್ನು...

ಉತ್ತರಾಧಿಕಾರಿ ಪ್ರಮಾಣಪತ್ರ ಹಕ್ಕುಗಳನ್ನು ನಿರ್ಧರಿಸುವುದಕ್ಕೆ ಮಾನದಂಡವಲ್ಲ: ಹೈಕೋರ್ಟ್

11 May 2023 10:18 PM IST
share
ಉತ್ತರಾಧಿಕಾರಿ ಪ್ರಮಾಣಪತ್ರ ಹಕ್ಕುಗಳನ್ನು ನಿರ್ಧರಿಸುವುದಕ್ಕೆ ಮಾನದಂಡವಲ್ಲ: ಹೈಕೋರ್ಟ್

ಬೆಂಗಳೂರು, ಮೇ 11: ಉತ್ತರಾಧಿಕಾರಿ ಪ್ರಮಾಣಪತ್ರ ಮಂಜೂರು ಮಾಡಿರುವುದು ಹಕ್ಕುಗಳನ್ನು ನಿರ್ಧರಿಸುವುದಕ್ಕೆ ಮಾನದಂಡವಾಗುವುದಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. 

ಕಲಬುರಗಿಯ ಮೃತ ನಾಗಪ್ಪ ಸವಡಿಯ ವೃದ್ಧ ತಂದೆ ತಾಯಿಗಳಾದ ಗಂಗಮ್ಮ ಮತ್ತು ಗುರುಪಾದಪ್ಪ ಸವಡಿ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ಮೃತ ವ್ಯಕ್ತಿಯ ಸೇವಾ ಭತ್ಯೆಗಳನ್ನು ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಈ ಆದೇಶ ನೀಡಿದೆ. 

ಅಲ್ಲದೆ, ಉತ್ತರದಾಯಿತ್ವ ಪ್ರಮಾಣಪತ್ರ ವಿತರಣೆ ವ್ಯಕ್ತಿಯ ಸಾವಿನ ನಂತರದ ಭತ್ಯೆ ಮತ್ತು ಸಾಲಗಳನ್ನು ಯಾರಿಗೆ ನೀಡಬೇಕು ಎಂಬ ಬಗ್ಗೆ ಗುರುತಿಸಲು ಮಾತ್ರ. ಆದರೆ ಅದನ್ನೇ ಮುಂದಿಟ್ಟುಕೊಂಡು ಹಕ್ಕು ಮಂಡಿಸಲಾಗದು ಎಂದು ಪೀಠ ತಿಳಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಎರಡೂ ಅಧೀನ ಕೋರ್ಟ್‍ಗಳು ಪೋಷಕರನ್ನು ಒಂದನೇ ದರ್ಜೆ ಉತ್ತರದಾಯಿಗಳೆಂದು ಒಪ್ಪಿಕೊಂಡಿದೆ. ಹೀಗಾಗಿ, ಉತ್ತರದಾಯಿತ್ವ ಪ್ರಮಾಣಪತ್ರವನ್ನು ಜಂಟಿ ಹೆಸರಿನಲ್ಲಿ ನೀಡಬೇಕಾಗಿತ್ತು ಮತ್ತು ಅದರಲ್ಲಿ ಸೇವಾ ಭತ್ಯೆಯಲ್ಲಿ ಯಾರ್ಯಾರಿಗೆ ಎಷ್ಟೆಷ್ಟು ಪಾಲು ಎಂಬುದನ್ನು ನಿರ್ಧರಿಸುವ ವಿಚಾರ ಪೋಷಕರು ಮತ್ತು ಪತ್ನಿ ಹಾಗೂ ಮಗುವಿಗೆ ಬಿಡಬೇಕಾಗಿತ್ತು ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು.

ಪ್ರಕರಣವೇನು?: ನಾಗಪ್ಪ, ಸಂಗಮೇಶ್ವರ ಆಸ್ಪತ್ರೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಪೆÇೀಷಕರು ನಾಗಪ್ಪ ಜತೆ ಪ್ರತ್ಯೇಕ ಮನೆಯಲ್ಲಿ ವಾಸ ಮಾಡುತ್ತಿದ್ದರು. 2008ರಲ್ಲಿ ನ.7ರಂದು ನಾಗಪ್ಪ ನಿಧನದ ನಂತರ ಅವರು ಪೆÇಷಕರು ನಾವೇ ಮೊದಲ ದರ್ಜೆ ಉತ್ತರದಾಯಿಗಳು ಹಾಗೂ ತಮ್ಮ ಮೃತ ಪುತ್ರನ ಎಲ್ಲ ಸೇವಾ ಭತ್ಯೆಗಳು ತಮಗೆ ಬರಬೇಕು ಎಂದು ಕೋರಿದ್ದರು.

ಈ ಮಧ್ಯೆ, ನಾಗಪ್ಪ ಪತ್ನಿ ಪ್ರತಿಭಾ ಹಾಗೂ ಪುತ್ರ ಪ್ರತೀಕ್ ಸಹ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿ, ಸಿವಿಲ್ ಕೋರ್ಟ್‍ನಿಂದ ಉತ್ತರದಾಯಿತ್ವ(ಸಕ್ಸಸನ್) ಸರ್ಟಿಫಿಕೇಟ್ ಪಡೆದುಕೊಂಡಿದ್ದರು. ಆದರೆ ಆ ಪ್ರಮಾಣಪತ್ರದಲ್ಲಿ, ನಾಗಪ್ಪ ಅವರ ತಂದೆ ತಾಯಿಗಳಿಗೆ ಸೇವಾ ಭತ್ಯೆಯನ್ನು ಪಡೆಯುವಲ್ಲಿ ಯಾವುದೇ ಪಾಲು ಇಲ್ಲ ಎಂಬ ಅಂಶವನ್ನು ಉಲ್ಲೇಖಿಸಿರಲಿಲ್ಲ. 

ಈ ಬಗ್ಗೆ ಸಲ್ಲಿಸಿದ ಮೇಲ್ಮನವಿಯನ್ನು ಆಲಿಸಿದ ಜಿಲ್ಲಾ ನ್ಯಾಯಾಲಯ ವಿಚಾರಣಾ ನ್ಯಾಯಾಲಯದ ಆದೇಶವನ್ನು ಕಾಯಂಗೊಳಿಸಿ, ನಾಗಪ್ಪ ಅವರ ಪೋಷಕರು ತಮ್ಮ ಅಹವಾಲುಗಳನ್ನು ಆಲಿಸಲು ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಆದೇಶ ನೀಡಿತ್ತು. ಆ ಆದೇಶದ ವಿರುದ್ಧ ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದರು.

share
Next Story
X