Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಾತಿ ತಾರತಮ್ಯ ನಿಷೇಧ ಮಸೂದೆಯನ್ನು...

ಜಾತಿ ತಾರತಮ್ಯ ನಿಷೇಧ ಮಸೂದೆಯನ್ನು ಅಂಗೀಕರಿಸಿದ ಕ್ಯಾಲಿಫೋರ್ನಿಯಾ ಸ್ಟೇಟ್ ಸೆನೆಟ್

12 May 2023 11:50 AM IST
share
ಜಾತಿ ತಾರತಮ್ಯ ನಿಷೇಧ ಮಸೂದೆಯನ್ನು ಅಂಗೀಕರಿಸಿದ ಕ್ಯಾಲಿಫೋರ್ನಿಯಾ ಸ್ಟೇಟ್ ಸೆನೆಟ್

ಕ್ಯಾಲಿಫೋರ್ನಿಯಾ: ಚಾರಿತ್ರಿಕ ನಡೆಯೊಂದರಲ್ಲಿ ಕ್ಯಾಲಿಫೋರ್ನಿಯಾ ಸ್ಟೇಟ್ ಸೆನೆಟ್ ಜಾತಿ ತಾರತಮ್ಯ ನಿಷೇಧ ಮಸೂದೆಯನ್ನು ಗುರುವಾರ ಅಂಗೀಕರಿಸಿದೆ ಎಂದು news18.com ವರದಿ ಮಾಡಿದೆ.

ಅಮೆರಿಕಾದಲ್ಲಿರುವ ತಾರತಮ್ಯ ನಿಷೇಧ ಕಾಯ್ದೆಗಳ ಪೈಕಿ ಜಾತಿಯನ್ನು ರಕ್ಷಿತ ಪ್ರವರ್ಗಕ್ಕೆ ಸೇರಿಸಿರುವ SB-403 ಮಸೂದೆಯನ್ನು 34-1 ಮತಗಳ ಅಂತರದಲ್ಲಿ ಅಂಗೀಕರಿಸಿರುವ ಕ್ಯಾಲಿಫೋರ್ನಿಯಾ ಸ್ಟೇಟ್ ಸೆನೆಟ್, ಆ ಮೂಲಕ ಅಮೆರಿಕಾದಲ್ಲಿ ಜಾತಿ ತಾರತಮ್ಯ ನಿಷೇಧ ಕಾಯ್ದೆಯನ್ನು ಅಳವಡಿಸಿಕೊಂಡ ಮೊತ್ತಮೊದಲ ರಾಜ್ಯವಾಗಿದೆ. ಲಾಭರಹಿತ ಸಮಾನತೆ ಪ್ರಯೋಗಾಲಯದ ನೇತೃತ್ವದಲ್ಲಿ ಮಸೂದೆಯನ್ನು ಮಂಡಿಸಿರುವ ಅನುಮೋದಕರ ಪ್ರಕಾರ, ಈ ಮಸೂದೆಯನ್ಮು ಶಾಸನವಾಗಿ ಅಂಗೀಕರಿಸಲು ರಾಜ್ಯಪಾಲರ ಸಹಿಗೆ ರವಾನಿಸುವ ಮುನ್ನ ಇಂತಹುದೇ ಮಸೂದೆಯನ್ನು ಜನ ಪ್ರತಿನಿಧಿಗಳ ರಾಜ್ಯ ಸದನದಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.

ಕ್ಯಾಲಿಫೋರ್ನಿಯಾ ಸೆನೆಟರ್ ಐಶಾ ವಹಾಬ್ SB-403 ಮಸೂದೆಯನ್ನು ಮಂಡಿಸಿದ್ದು, ಈ ಮಸೂದೆಯ ಪ್ರಕಾರ ಜಾತಿಯನ್ನು ಸಂರಕ್ಷಿತ ಪ್ರವರ್ಗವನ್ನಾಗಿ ಈಗಾಗಲೇ ಅಸ್ತಿತ್ವದಲ್ಲಿರುವ ಕಾನೂನಿಗೆ ಸೇರ್ಪಡೆ ಮಾಡಲಾಗುತ್ತದೆ. ಇದರಿಂದ ಕ್ಯಾಲಿಫೋರ್ನಿಯಾ ರಾಜ್ಯದ ಎಲ್ಲ ಜನರೂ ಸಂಪೂರ್ಣ ಹಾಗೂ ಸಮಾನ ವಸತಿ, ಲಾಭಗಳು, ಸೌಲಭ್ಯಗಳು, ಹಕ್ಕುಗಳು ಅಥವಾ ಸೇವೆಗಳನ್ನು ಎಲ್ಲ ಬಗೆಯ ವ್ಯಾವಹಾರಿಕ ಸಂಸ್ಥೆಗಳಲ್ಲಿ ಪಡೆಯಲು ಅರ್ಹರಾಗಿರುತ್ತಾರೆ.

ಜಾತಿ ಪಕ್ಷಪಾತ ಹಾಗೂ ಪೂರ್ವಗ್ರಹದಿಂದ ವ್ಯವಸ್ಥಿತವಾಗಿ ಹಾನಿಗೊಳಗಾಗಿರುವವರಿಗೆ SB-403 ಮಸೂದೆಯು ವಿಶೇಷ ಸುರಕ್ಷತೆ ಒದಗಿಸಲಿದೆ. ಜಾತಿ ತಾರತಮ್ಯ ಹಾಗೂ ಜಾತಿ ಆಧಾರಿತ ಹಿಂಸಾಚಾರದಲ್ಲಿ ಭಾಗಿಯಾಗಿರುವವರಿಗೆ ಅಥವಾ ಅವಕಾಶ ನೀಡಿ, ಅದರ ಹೊಣೆಯಿಂದ ನುಣುಚಿಕೊಳ್ಳುವವರು ಅಥವಾ ವಿಭಜಿಸುವವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಈ ಮಸೂದೆ ಒಳಗೊಂಡಿದೆ.

ಎಪ್ರಿಲ್ ತಿಂಗಳಲ್ಲಿ ಕ್ಯಾಲಿಫೋರ್ನಿಯಾ ನ್ಯಾಯಾಂಗ ಸಮಿತಿಯು ಸರ್ವಾನುಮತದಿಂದ SB-403 ಮಸೂದೆಗೆ ಅನುಮೋದನೆ ನೀಡಿದ ವಾರಗಳ ನಂತರ ಈ ಮೈಲಿಗಲ್ಲು ಮಸೂದೆ ಅಂಗೀಕಾರಗೊಂಡಿದೆ.

share
Next Story
X