Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು | ದಲಿತರಿಬ್ಬರ ಕೊಲೆಗೆ ಖಂಡನೆ;...

ಬೆಂಗಳೂರು | ದಲಿತರಿಬ್ಬರ ಕೊಲೆಗೆ ಖಂಡನೆ; ಆರೋಪಿಗಳನ್ನು ಬಂಧಿಸಿ, ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯ

12 May 2023 10:14 PM IST
share
ಬೆಂಗಳೂರು | ದಲಿತರಿಬ್ಬರ ಕೊಲೆಗೆ ಖಂಡನೆ; ಆರೋಪಿಗಳನ್ನು ಬಂಧಿಸಿ, ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಒತ್ತಾಯ

ಬೆಂಗಳೂರು, ಮೇ 12: ‘ಕ್ಷುಲ್ಲಕ ವಿಚಾರಕ್ಕೆ ರಾಜಾನಕುಂಟೆ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಮೇ 11ರಂದು ಸವರ್ಣೀಯರಿಂದ ದಲಿತ ಯುವಕರಿಬ್ಬರ ಕೊಲೆ ಮಾಡಲಾಗಿದ್ದು, ಇದು ಖಂಡನೀಯ. ತುರ್ತಾಗಿ ಪೊಲೀಸರು ಪ್ರಕರಣದ ವಿಚಾರಣೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು’ ಎಂದು ಬಹುತ್ವ ಕರ್ನಾಟಕ ಸಂಘಟನೆ ಒತ್ತಾಯಿಸಿದೆ.

ಶುಕ್ರವಾರ ಮಾಧ್ಯಮ ಪ್ರಕಟನೆ ನೀಡಿರುವ ಸಂಘಟನೆ, ಹೋಟೆಲ್‍ವೊಂದರಲ್ಲಿ ನೀರು ಕುಡಿದ ವಿಚಾರಕ್ಕೆ ನಡೆದ ಗಲಾಟೆಯನ್ನೇ ಮುಂದಿಟ್ಟುಕೊಂಡು ಸವರ್ಣೀಯ ಸಮುದಾಯಗಳಿಗೆ ಸೇರಿದ ಭರತ್, ವಿನಯ್ ಹಾಗು ನಿಶಾಂತ್ ಎಂಬುವವರು ತಮ್ಮ ಕಾರನ್ನು ಅತಿವೇಗವಾಗಿ ಓಡಿಸಿ, ರಾಮಯ್ಯ, ಗೋಪಾಲ್ ಹಾಗು ನಾಗರಾಜು ಅವರು ಇದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು, ರಾಮಯ್ಯ ಹಾಗು ನಾಗರಾಜು ಅವರ ಸಾವಿಗೆ ಕಾರಣರಾಗಿದ್ದಾರೆ. ಇನ್ನು ಘಟನೆಯಲ್ಲಿ ಗೋಪಾಲ್ ಗಾಯಗೊಂಡಿದ್ದು, ಇದೊಂದು ಉದ್ದೇಶಪೂರ್ವಕ ಕೃತ್ಯ ಎಂದು ಸಂಘಟನೆ ದೂರಿದೆ.

ಮೃತರ ಕುಟುಂಬಕ್ಕೆ ಸರಕಾರದಿಂದ 50 ಲಕ್ಷ ರೂ.ಪರಿಹಾರ, ಹಾಗೂ ಪುನರ್ವಸತಿಗೆ ಜಮೀನು, ಉದ್ಯೋಗ ಸೇರಿ ಕಾನೂನಾಧರಿತ ಸೌಲಭ್ಯಗಳನ್ನೆಲ್ಲಾ ನೀಡಬೇಕು. ಗಾಯಗೊಂಡ ಗೋಪಾಲರವರ ಸಂಪೂರ್ಣ ಚಿಕತ್ಸೆ ವೆಚ್ಚವನ್ನು ಸರಕಾರವೇ ಭರಿಸಬೇಕು. ಅಲ್ಲದೆ ಅವರಿಗೂ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಮುಂಬರುವ ಸರಕಾರ ಅಸ್ಪೃಶ್ಯತೆಯ ವಿರುದ್ಧ ಹಾಗು ಜಾತಿವಾದಿ ಅಪರಾಧಗಳ ವಿರುದ್ಧ ಪರಿಣಾಮಕಾರಿ, ಪಾರದರ್ಶಕ ಹಾಗು ತುರ್ತು ಕ್ರಮ ತೆಗೆದುಕೊಳ್ಳಬೇಕು. ಸವರ್ಣೀಯ ಸಮುದಾಯದ ಮಠಾಧೀಶರು, ಅಸ್ಪøಶ್ಯತೆಯನ್ನು ತೊಲಗಿಸುವಂತೆ ಅವರ ಸಮುದಾಯಗಳಿಗೆ ಕರೆ ನೀಡಬೇಕು ಎಂದು ಸಂಘಟನೆ ತಿಳಿಸಿದೆ.

ಈ ಭೀಕರ ಕೊಲೆ ಅಸ್ಪøಷ್ಯತೆಯ ಹಿಂದಿನ ಹುನ್ನಾರ. ಸುಮಾರು 20 ದಿವಸದ ಕೆಳಗೆ ಹೆಸರುಘಟ್ಟದ ಹೋಟೆಲ್‍ನಲ್ಲಿ ನಾಗರಾಜು ಅವರು ನೀರು ಕುಡಿಯಬೇಕಾದರೆ, ಭರತ್ ಎಂಬಾತನು ಬಂದು ಜಾತಿ ನಿಂದನೆಗಳನ್ನು ಮಾಡಿ, ನಾಗರಾಜು ಅವರಿಗೆ ಅವಮಾನಿಸಿ, ಚುನಾವಣೆಯ ನಂತರ ಅವರ ಕೊಲೆ ಮಾಡುವುದಾಗಿ ಬೆದರಿಸಿದ್ದರು. ಅದ ಪರಿಣಾಮವಾಗಿ ಇಬ್ಬರು ದಲಿತರನ್ನು ಕೊಲೆಗೈಯ್ಯಲಾಗಿದೆ. ದಲಿತ ಸಮುದಾಯದವರಾಗಲೀ ಇನ್ನು ಯಾರೇ ಆಗಲಿ, ಸಾರ್ವಜನಿಕ ಸ್ಥಳದಲ್ಲಿ ನೀರು ಕುಡಿಯುವುದು ತಪ್ಪೆಂದು ಹೇಳುವುದು ಕಾನೂನುಬಾಹಿರ ಮಾತ್ರವಲ್ಲ, ತೀರ ಅಮಾನವೀಯವೂ ಎಂದು ಸಂಘಟನೆ ತಿಳಿಸಿದೆ.

ಕೆಲವು ತಿಂಗಳ ಹಿಂದೆ ಕೋಲಾರದಲ್ಲಿ ಬೈಕ್ ಅಲ್ಲಿ ಸವರ್ಣೀಯರನ್ನು ಓವರ್ ಟೇಕ್ ಮಾಡಿದ್ದ ಕಾರಣ ಉದಯ್ ಕಿರಣ್ ಅವರನ್ನು ಮರಕ್ಕೆ ಕಟ್ಟಿ, ಥಳಿಸಿ, ಅವಮಾನಿಸಿ ಕೊಲ್ಲಲಾಯಿತು. ಈಗ ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ.  ಸಂವಿಧಾನದ ಅನುಚ್ಚೇಧ 17 ಅಸ್ಪೃಶ್ಯತೆಯನ್ನು ನಿಷೇಧಿಸಿ ಅಪರಾಧವೆಂದು ಹೇಳುತ್ತದೆ. ಅನುಚ್ಚೇಧ 15(2) ಯಾರಿಗೂ ಜಾತಿ, ಧರ್ಮ, ಲಿಂಗ, ಭಾಷೆ ಮೊದಲಾದ ಯಾವುದೇ ಅಸ್ಮಿತೆಯ ಆಧಾರದ ಮೇಲೆ ಸಾರ್ವಜನಿಕ ಸ್ಥಳಗಳಿಗೆ ನಿಷೇಧ ಮಾಡಬಾರದೆಂದು ತಿಳಿದಿದೆ. ಆದರೂ ಈ ರೀತಿಯ ಘಟನೆಗಳು ನಿರಂತರ ನಡೆಯುತ್ತಿವೆಯೆಂದರೆ ಸವರ್ಣೀಯ ಸಮುದಾಯಗಳ ಬಹುತೇಕರಲ್ಲಿ ಇನ್ನೂ ಮನುಸ್ಮೃತಿಯೆ ತುಂಬಿದೆ ಎಂಬುದು ಖಚಿತವಾಗಿದೆ ಎಂದು ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ.

share
Next Story
X