ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಟಿ.ಡಿ.ರಾಜೇಗೌಡಗೆ ರೋಚಕ ಗೆಲುವು
ಜಿಲ್ಲೆಯ 5ಕ್ಕೆ 5 ಕ್ಷೇತ್ರಗಳಲ್ಲೂ 'ಕೈ' ಮೇಲುಗೈ

ಜಿಲ್ಲೆಯ 5ಕ್ಕೆ 5 ಕ್ಷೇತ್ರಗಳಲ್ಲೂ 'ಕೈ' ಮೇಲುಗೈ
ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದಲ್ಲಿ ಮತ ಎಣಿಕೆಯ 18ನೇ ಸುತ್ತಿನಲ್ಲಿ ಬಿಜೆಪಿಯ ಡಿ.ಎನ್.ಜೀವರಾಜ್ ವಿರುದ್ಧ 154 ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ.
ಇಲ್ಲಿ ಜೆಡಿಎಸ್ ನ ಸುಧಾಕರ್ ಶೆಟ್ಟಿ 18,946 ಮತಗಳನ್ನು ಪಡೆದುಕೊಂಡಿದ್ದಾರೆ. ಅಲ್ಪ ಮತಗಳ ಅಂತರದಲ್ಲಿ ಪರಾಭವಗೊಂಡಿರುವ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಮರು ಮತ ಎಣಿಕೆ ನಡೆಸುವಂತೆ ಚುನಾವಣಾಧಿಕಾರಿಗೆ ಮನವಿ ಮಾಡಿದ್ದಾರೆನ್ನಲಾಗಿದೆ.
ಮೂಡಿಗೆರೆ, ತರೀಕೆರೆ, ಚಿಕ್ಕಮಗಳೂರು, ಕಡೂರಿನಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳೇ ಮೇಲುಗೈ ಸಾಧಿಸಿದ್ದು, ಜಿಲ್ಲೆಯಲ್ಲಿ ಪಾರುಪತ್ಯ ಸಾಧಿಸಿದೆ.
Next Story





