ಕರ್ನಾಟಕ ಚುನಾವಣೆ: ಭರ್ಜರಿ ಜಯಗಳಿಸಿದ ಕಾಂಗ್ರೆಸ್ಗೆ ಪ್ರಧಾನಿ ಮೋದಿ ಅಭಿನಂದನೆ
ಹೊಸದಿಲ್ಲಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಅವರು, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸಲಿ, ಅವರಿಗೆ ನನ್ನ ಶುಭಾಶಯಗಳು ಎಂದು ಬರೆದಿದ್ದಾರೆ.
ಬಿಜೆಪಿಗೆ ಬೆಂಬಲ ನೀಡಿದವರಿಗೆ ಧನ್ಯವಾದ ತಿಳಿಸಿರುವ ಅವರು, ಕರ್ನಾಟಕ ಚುನಾವಣೆಯಲ್ಲಿ ನಮಗೆ ಬೆಂಬಲ ನೀಡಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. ಬಿಜೆಪಿ ಕಾರ್ಯಕರ್ತರ ಶ್ರಮವನ್ನು ನಾನು ಪ್ರಶಂಸಿಸುತ್ತೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹುರುಪಿನಿಂದ ಕರ್ನಾಟಕಕ್ಕೆ ಸೇವೆ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.
Congratulations to the Congress Party for their victory in the Karnataka Assembly polls. My best wishes to them in fulfilling people’s aspirations.
— Narendra Modi (@narendramodi) May 13, 2023
I thank all those who have supported us in the Karnataka elections. I appreciate the hardwork of BJP Karyakartas. We shall serve Karnataka with even more vigour in the times to come.
— Narendra Modi (@narendramodi) May 13, 2023