ಕರ್ನಾಟಕ ಚುನಾವಣಾ ಫಲಿತಾಂಶ: 'ಭರವಸೆಗಳನ್ನು ಪೂರ್ಣಗೊಳಿಸಲು ಬದ್ಧ' ಎಂದ ಪ್ರಿಯಾಂಕಾ ಗಾಂಧಿ
ಹೊಸದಿಲ್ಲಿ: ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ತಂದುಕೊಟ್ಟದಕ್ಕೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕರ್ನಾಟಕದ ಜನರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಕನ್ನಡದಲ್ಲೇ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, “ಕಾಂಗ್ರೆಸ್ ಪಕ್ಷದ ಪರ ಐತಿಹಾಸಿಕ ತೀರ್ಪು ನೀಡಿದ ಕರ್ನಾಟಕದ ಜನತೆಗೆ ತುಂಬು ಹೃದಯದ ಧನ್ಯವಾದಗಳು!. ಭ್ರಷ್ಟಾಚಾರ, ಕೋಮುವಾದ, ಬೆಲೆ ಏರಿಕೆ ವಿರುದ್ಧ ಕನ್ನಡಿಗರು ಕೈ ಏರಿಸಿದ್ದಾರೆ ಮತ್ತು ನಮ್ಮ ರಾಷ್ಟ್ರವನ್ನು ಒಗ್ಗೂಡಿಸುವುದಕ್ಕಾಗಿ ಕರ್ನಾಟಕದ ಜನತೆ ಕಾಂಗ್ರೆಸ್ ಕೈ ಹಿಡಿದಿದ್ದಾರೆ.” ಎಂದು ಹೇಳಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಕರ್ನಾಟಕ ಕಾಂಗ್ರೆಸ್ನ ನಾಯಕರಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಶ್ರಮಕ್ಕೆ ಪ್ರತಿಫಲ ಸಿಕ್ಕಿದೆ ಎಂದ ಅವರು, ಕರ್ನಾಟಕದ ಜನತೆಗೆ ಕಾಂಗ್ರೆಸ್ ಪಕ್ಷವು ನೀಡಿದ್ದ ಭರವಸೆಗಳನ್ನು ಪೂರ್ಣಗೊಳಿಸಲು ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಪರ ಐತಿಹಾಸಿಕ ತೀರ್ಪು ನೀಡಿದ ಕರ್ನಾಟಕದ ಜನತೆಗೆ ತುಂಬು ಹೃದಯದ ಧನ್ಯವಾದಗಳು!
— Priyanka Gandhi Vadra (@priyankagandhi) May 13, 2023
ಭ್ರಷ್ಟಾಚಾರ, ಕೋಮುವಾದ, ಬೆಲೆ ಏರಿಕೆ ವಿರುದ್ಧ ಕನ್ನಡಿಗರು ಕೈ ಏರಿಸಿದ್ದಾರೆ ಮತ್ತು ನಮ್ಮ ರಾಷ್ಟ್ರವನ್ನು ಒಗ್ಗೂಡಿಸುವುದಕ್ಕಾಗಿ ಕರ್ನಾಟಕದ ಜನತೆ ಕಾಂಗ್ರೆಸ್ ಕೈ ಹಿಡಿದಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತು ಕರ್ನಾಟಕ…