Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳದಲ್ಲಿ ಹಾರಿಸಿದ್ದು ಪಾಕಿಸ್ತಾನದ...

ಭಟ್ಕಳದಲ್ಲಿ ಹಾರಿಸಿದ್ದು ಪಾಕಿಸ್ತಾನದ ಧ್ವಜವಲ್ಲ: ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ

13 May 2023 4:48 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಭಟ್ಕಳದಲ್ಲಿ ಹಾರಿಸಿದ್ದು ಪಾಕಿಸ್ತಾನದ ಧ್ವಜವಲ್ಲ: ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ

ಭಟ್ಕಳ: ಭಟ್ಕಳ-ಹೊನ್ನಾವರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಗೆಲುವನ್ನು ಸಂಭ್ರಮಿಸಲು ಕಾಂಗ್ರೆಸ್ ಬೆಂಬಲಿಗರು ಭಟ್ಕಳ ಶಂಶುದ್ದೀನ್ ವೃತ್ತದ ಬಳಿ ಹಸಿರು ಹಾಗೂ ಕೇಸರಿ ಧ್ವಜಗಳನ್ನು ಹಿಡಿದುಕೊಂಡು ನೆರೆದಿದ್ದರು. 

ಆದರೆ, ಆ ಘಟನೆಯ ಚಿತ್ರಗಳು ಕೂಡಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, "ಕಾಂಗ್ರೆಸ್ ಬೆಂಬಲಿಗರು 'ಮುಸ್ಲಿಂ ಧ್ವಜ' ಹಿಡಿದುಕೊಂಡಿದ್ದರು" ಎಂದು ಕೆಲವರು ಹೇಳಿದರೆ , ಮತ್ತೆ ಕೆಲವರು "ಪಾಕಿಸ್ತಾನ ಧ್ವಜ ಹಿಡಿದುಕೊಂಡಿದ್ದರು" ಎಂದೂ ವಾದಿಸಿದ್ದರು.

ಈ ಕುರಿತು ಸ್ಪಷ್ಟೀಕರಣ ನೀಡಿರುವ ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಎನ್., ಕಾಂಗ್ರೆಸ್ ಬೆಂಬಲಿಗರು ಬಳಸಿದ್ದು ಪಾಕಿಸ್ತಾನ ಧ್ವಜವಲ್ಲ.  ಅದು ಕೆಲವು ವ್ಯಕ್ತಿಗಳು ವೈಯಕ್ತಿಕವಾಗಿ ಪ್ರದರ್ಶಿಸಿದ್ದ ಧಾರ್ಮಿಕ ಧ್ವಜವಾಗಿತ್ತು ಎಂದು ಹೇಳಿದ್ದಾರೆ. ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ಅದು ಪಾಕಿಸ್ತಾನ ಧ್ವಜವಲ್ಲ ಎಂದು ದೃಢಪಡಿಸಿರುವುದರಿಂದ ಯಾವುದೇ ದೂರನ್ನು ದಾಖಲಿಸಿಕೊಳ್ಳಲಾಗಿಲ್ಲ ಅಥವಾ ಕ್ರಮವನ್ನು ಕೈಗೊಳ್ಳಲಾಗಿಲ್ಲ ಎಂದೂ ತಿಳಿಸಿದ್ದಾರೆ.

ವಾರ್ತಾಭಾರತಿಯೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳನ್ನು ಹರಡಬಾರದು  ಹಾಗೂ ಈ ಭಾಗದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಸಾಕ್ಷ್ಯಾಧಾರವಿಲ್ಲದ ಸೂಕ್ಷ್ಮ ಮಾಹಿತಿಗಳನ್ನು ಹಂಚಿಕೊಳ್ಳಬಾರದು  ಎಂದು ಮನವಿ ಮಾಡಿದ್ದಾರೆ. 

“ಅದೊಂದು ಧಾರ್ಮಿಕ ಧ್ವಜವಾಗಿದೆ ಮತ್ತು ಪಾಕಿಸ್ತಾನ ಧ್ವಜವಲ್ಲ. ನಾವಿದನ್ನು ದೃಢಪಡಿಸಿದ್ದು, ಯಾವುದೇ ಬಗೆಯ ಕೋಮು ಪ್ರಕ್ಷುಬ್ಧತೆಯನ್ನು ಸೃಷ್ಟಿಸುವ ತಪ್ಪು ದಾರಿಗೆಳೆಯುವ ಮಾಹಿತಿಯನ್ನು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಕೂಡದು ಎಂದು ಮನವಿ ಮಾಡುತ್ತೇವೆ” ಎಂದೂ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಭಟ್ಕಳ ಮಜ್ಲಿಸ್-ಎ-ಇಸ್ಲಾಹ್  ವ ತಂಝೀಮ್‍ನ ರಾಜಕೀಯ ಘಟಕದ ಸಂಚಾಲಕ ಇಮ್ರಾನ್ ಲಂಕಾ, " ಕೆಲವು ಪಕ್ಷ ಸಂಘಟನೆಗಳಿಗೆ ಧ್ವಜಗಳಿರುತ್ತವೆ.ಆದರೆ ಇಸ್ಲಾಮ್ ಧರ್ಮಕ್ಕೆ ಯಾವುದೇ ಧ್ವಜ ಇಲ್ಲ. ಹಾಗೆಯೇ ಮುಸ್ಲಿಮ್  ಸಮಾಜಕ್ಕೂ ಯಾವುದೇ ಧ್ವಜ ಇಲ್ಲ. ಆದ್ದರಿಂದ ಯಾವುದೇ ನಿರ್ದಿಷ್ಟ ಧ್ವಜವನ್ನು ಇಸ್ಲಾಮ್ ಧರ್ಮದ ಧ್ವಜ ಅಥವಾ ಮುಸ್ಲಿಮ್  ಸಮಾಜದ ಧ್ವಜ ಎಂದು ಕರೆಯುವುದು ತಪ್ಪು ಮತ್ತ್ತು ಖಂಡನೀಯ. ಸುಳ್ಳನ್ನು ಹರಡುವ ಮೂಲಕ ಕೆಲವು ಕಿಡಿಗೇಡಿ ಶಕ್ತಿಗಳು ಆ ಸಂದರ್ಭಕ್ಕೆ ಕೋಮುವಾದಿ ತಿರುವು ನೀಡಲು ಪ್ರಯತ್ನಿಸುತ್ತಿವೆ " ಎಂದು ಸ್ಪಷ್ಟಪಡಿಸಿದ್ದಾರೆ.

ಸ್ಥಳೀಯರ  ಪ್ರಕಾರ, ಕಾಂಗ್ರೆಸ್ ಗೆಲುವಿನಲ್ಲಿ  ಹಿಂದೂ ಹಾಗೂ ಮುಸ್ಲಿಂ ಒಗ್ಗಟ್ಟನ್ನು ಪ್ರದರ್ಶಿಸಲು ಸಮಾವೇಶಕ್ಕೆ ಮುಸ್ಲಿಂ ಬೆಂಬಲಿಗರು ಹಸಿರು ಧ್ವಜ ಹಾಗೂ ಹಿಂದೂ ಬೆಂಬಲಿಗರು ಕೇಸರಿ ಧ್ವಜ ತಂದಿದ್ದಾರೆ. ವಾಸ್ತವವಾಗಿ  ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿನಲ್ಲಿ ಎರಡು ಸಮುದಾಯಗಳೂ ಸಮಾನ ಪಾತ್ರ ನಿರ್ವಹಿಸಿವೆ ಎಂದು ತೋರಿಸಲು ಹಾಗೆ ಮಾಡಲಾಗಿತ್ತು ಎಂದು ಸ್ಥಳೀಯರು ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X