ಫಲಿತಾಂಶ ಗೊಂದಲ: ಜಯನಗರ ಮತ ಎಣಿಕೆ ಕೇಂದ್ರದ ಬಳಿ ಕಾಂಗ್ರೆಸ್ -ಬಿಜೆಪಿ ಕಾರ್ಯಕರ್ತರ ಹೈಡ್ರಾಮಾ
ಮತ ಕೇಂದ್ರದ ಬಳಿಯೇ ಕುಳಿತ ಕಾಂಗ್ರೆಸ್ ನಾಯಕರು

ಬೆಂಗಳೂರು, ಮೇ 13: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದರೂ, ಸಿಲಿಕಾನ್ ಸಿಟಿ ಜಯನಗರದಲ್ಲಿ ಗೆಲುವು ಯಾರದ್ದು ಎಂದೂಬ ಇನ್ನೂ ಅಂತಿಮವಾಗಿಲ್ಲ. ಈ ನಡುವೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಪೈಪೋಟಿ ಮುಂದುವರಿದಿದ್ದು, 3ನೇ ಬಾರಿಗೆ ಮರು ಎಣಿಕೆ ನಡೆಯುತ್ತಿದೆ.
ಬೆಳಗ್ಗೆ ಕಾಂಗ್ರೆಸ್ನ ಸೌಮ್ಯಾ ರೆಡ್ಡಿ 57591 ಮತಗಳನ್ನು ಪಡೆದರೆ, ಬಿಜೆಪಿಯ ಸಿ. ಕೆ. ರಾಮಮೂರ್ತಿ 57297 ಮತಗಳನ್ನು ಪಡೆದಿದ್ದರು.ಆದರೆ, ಸಿ. ಕೆ. ರಾಮಮೂರ್ತಿ ಕಡಿಮೆ ಮತಗಳ ಅಂತರದಲ್ಲಿ ಗೆದ್ದ ಕಾರಣ ಮರು ಎಣಿಕೆಗೆ ಮೊದಲ ಬಾರಿಗೆ ಮನವಿ ಮಾಡಲಾಯಿತು.
ಆನಂತರಮತ ಎಣಿಕೆಯಲ್ಲಿ ಸೌಮ್ಯಾ ರೆಡ್ಡಿ ಗೆಲುವಿನ ಅಂತರ ಕಡಿಮೆ ಆಯಿತು. ಆದ್ದರಿಂದ ಮತ್ತೊಮ್ಮೆ ಮರು ಎಣಿಕೆಗೆ ಮನವಿ ಮಾಡಲಾಯಿತು. ಇದನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಆಗ ಬಿಜೆಪಿಯ ಕಾರ್ಯಕರ್ತರು ಪ್ರತಿಭಟಿಸಿದರು. ಜಟಾಪಟಿ ನಡೆಯಿತು. ಇದಾದ ಬಳಿಕ 2ನೇ ಬಾರಿಯ ಮರು ಎಣಿಕೆಯಲ್ಲಿ ಸೌಮ್ಯಾ ರೆಡ್ಡಿ 119 ಮತಗಳ ಅಂತರದಲ್ಲಿ ಗೆದ್ದರು.
ಆದರೆ ಸೋಲುಕಂಡ ಸಿ. ಕೆ. ರಾಮಮೂರ್ತಿ ಮತ್ತೆ ಮರು ಎಣಿಕೆಗೆ ಮನವಿ ಮಾಡಿದರು. ಸೌಮ್ಯಾ ರೆಡ್ಡಿ ಗೆಲುವು ಸಾಧಿಸಿದ್ದರೂ ಸಹ ಮತ್ತೊಮ್ಮೆ ಮರು ಎಣಿಕೆಗೆ ಒಪ್ಪಿಗೆ ನೀಡಲಾಯಿತು. ಮೂರನೇ ಬಾರಿಗೆ ಮತ ಎಣಿಕೆ ಮಾಡಿದಾಗ ಸಿ. ಕೆ. ರಾಮಮೂರ್ತಿಗೆ 17 ಮತಗಳ ಮುನ್ನಡೆ ಸಿಕ್ಕಿದೆ. ಆದ್ದರಿಂದ ಮತ್ತೆ ಸೌಮ್ಯಾ ರೆಡ್ಡಿ ಮತ್ತೆ ಮರು ಎಣಿಕೆಗೆ ಮನವಿ ಮಾಡಿದ್ದಾರೆ.
ಇದೀಗ ಜಯನಗರದ ಎಸ್ಎಸ್ಎಂಆರ್ವಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಸಂಸದ ತೇಜಸ್ವಿಸೂರ್ಯ ಅವರು ಮತ ಎಣಿಕೆ ಕೇಂದ್ರಕ್ಕೆ ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯರ್ತರು ಆರೋಪ ಮಾಡಿ ಪ್ರತಿಭಟನೆ ನಡೆಸಿದರು.
ಸದ್ಯ ಎಣಿಕೆ ಕೇಂದ್ರದ ಮುಂದೆ ಡಿ.ಕೆ. ಶಿವಕುಮಾರ್, ರಾಮಲಿಂಗಾರೆಡ್ಡಿ, ಡಿಸಿಪಿ ಅನುಚೇತ್, ಹೆಚ್ಚುವರಿ ಪೊಲೀಸ್ ಆಯುಕ್ತ ಚಂದ್ರಶೇಖರ್ ಪ್ರತ್ಯೇಕ ಮಾತುಕತೆ ನಡೆಸುತ್ತಿದ್ದು,ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಮುನ್ನೆಚ್ಚರಿಕೆಯಿಂದ ಮತಎಣಿಕೆ ಕೇಂದ್ರದ ಬಳಿ ಭಾರಿ ಭದ್ರತೆ ಒದಗಿಸಲಾಗಿದೆ. ಸುತ್ತಲೂ ಬ್ಯಾರಿಕೇಡ್ಗಳನ್ನು ಹಾಕಿ ಪೊಲೀಸ್ ಸರ್ಪಗಾವಲು ನಿಯೋಜನೆ ಮಾಡಲಾಗಿದೆ.
ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಸೌಮ್ಯ ರೆಡ್ಡಿ ಅವರು ಗೆಲುವು ಸಾಧಿಸಿದ್ದರೂ ಮರುಎಣಿಕೆ ನೆಪದಲ್ಲಿ ಫಲಿತಾಂಶ ತಿರುಚಲು ಪ್ರಯತ್ನಿಸಿದ ಚುನಾವಣೆ ಅಧಿಕಾರಿಗಳ ನಡೆ ವಿರೋಧಿಸಿ ಮತ ಎಣಿಕೆ ಕೇಂದ್ರ ಜಯನಗರದ ಆರ್ ವಿ ಶಿಕ್ಷಣ ಸಂಸ್ಥೆ ಎದುರು ಧರಣಿ ನಡೆಸಿ, ಮತ ಎಣಿಕೆ ಕೇಂದ್ರದ ಒಳಗೆ ಏಜೆಂಟರಲ್ಲದ ಬಿಜೆಪಿ ಮುಖಂಡರಾದ ಆರ್… pic.twitter.com/9F9LGFwO05
— DK Shivakumar (@DKShivakumar) May 13, 2023







