ಒಬ್ಬರನ್ನೊಬ್ಬರು ರಕ್ಷಿಸುವ ಪ್ರಯತ್ನದಲ್ಲಿ ಐವರು ಹದಿಹರೆಯದವರು ಕೆರೆಯಲ್ಲಿ ಮುಳುಗಿ ಮೃತ್ಯು
ಬೊಟಾಡ್ (ಗುಜರಾತ್) : ಒಬ್ಬರನ್ನೊಬ್ಬರು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಗುಜರಾತ್ನ ಬೊಟಾಡ್ ಪಟ್ಟಣದ ಕೃಷ್ಣ ಸಾಗರ ಸರೋವರದಲ್ಲಿ ಮುಳುಗಿ ಐವರು ಹದಿಹರೆಯದವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಇಬ್ಬರು ಬಾಲಕರು ಕೃಷ್ಣ ಸಾಗರ ಕೆರೆಯಲ್ಲಿ ಮಧ್ಯಾಹ್ನ ಈಜುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳದಲ್ಲಿದ್ದ ಇತರ ಮೂವರು ನೀರಿನಲ್ಲಿ ಮುಳುಗುತ್ತಿದ್ದ ಇಬ್ಬರನ್ನು ರಕ್ಷಿಸಲು ನೀರಿಗೆ ಹಾರಿದರು. ಆದರೆ ಅವರೆಲ್ಲರೂ ನೀರಿನಲ್ಲಿ ಮುಳುಗಿದರು.
"ಬೋಟಾಡ್ ಪಟ್ಟಣದ ಹೊರಗಿರುವ ಕೃಷ್ಣ ಸಾಗರ ಕೆರೆಯಲ್ಲಿ ಮುಳುಗಿ ಐವರು ಬಾಲಕರು ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಮಧ್ಯಾಹ್ನ ಈಜುತ್ತಿದ್ದಾಗ ನೀರಿನಲ್ಲಿ ಮುಳುಗಿದ್ದರು. ಸ್ಥಳದಲ್ಲಿದ್ದ ಇತರ ಮೂವರು ಅವರನ್ನು ರಕ್ಷಿಸಲು ನೀರಿಗೆ ಹಾರಿದರು. ಆದರೆ ಅವರೂ ಮುಳುಗಿದರು. ಮೃತಪಟ್ಟವರು 16-17 ವರ್ಷದವರಾಗಿದ್ದರು " ಎಂದು ಬಟೋಡ್ ಎಸ್ಪಿ ಕಿಶೋರ್ ಬಲೋಲಿಯಾ ತಿಳಿಸಿದ್ದಾರೆ.
Next Story