Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 16 ಮತಗಳಿಂದ ಗೆದ್ದು ಸೋತ ಸೌಮ್ಯಾರೆಡ್ಡಿ;...

16 ಮತಗಳಿಂದ ಗೆದ್ದು ಸೋತ ಸೌಮ್ಯಾರೆಡ್ಡಿ; ಅದೇ ಹೆಸರಿನ ಪಕ್ಷೇತರ ಅಭ್ಯರ್ಥಿಗೆ ಸಿಕ್ಕ ಮತಗಳೆಷ್ಟು ಗೊತ್ತೇ?

15 May 2023 4:55 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
16 ಮತಗಳಿಂದ ಗೆದ್ದು ಸೋತ ಸೌಮ್ಯಾರೆಡ್ಡಿ; ಅದೇ ಹೆಸರಿನ ಪಕ್ಷೇತರ ಅಭ್ಯರ್ಥಿಗೆ ಸಿಕ್ಕ ಮತಗಳೆಷ್ಟು ಗೊತ್ತೇ?

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕೇವಲ 16 ಮತಗಳ ಅಂತರದಿಂದ ಬಿಜೆಪಿ ವಿರುದ್ಧ ಸೋಲು ಅನುಭವಿಸಿದ ಸೌಮ್ಯಾರೆಡ್ಡಿಯವರ ಹೆಸರಿನ ಪಕ್ಷೇತರ ಅಭ್ಯರ್ಥಿ ಕ್ಷೇತ್ರದಲ್ಲಿ 320 ಮತಗಳನ್ನು ಪಡೆದಿರುವ ಸ್ವಾರಸ್ಯಕರ ಸಂಗತಿ ಬೆಳಕಿಗೆ ಬಂದಿದೆ.

"ಮತದಾರರಲ್ಲಿ ಗೊಂದಲ ಮೂಡಿಸುವ ಸಲುವಾಗಿ ಮತ್ತು ಪುತ್ರಿಯ ರಾಜಕೀಯ ಅವಕಾಶ ಹಾಳುಗೆಡವುವ ಉದ್ದೇಶದಲ್ಲಿ ಬಿಜೆಪಿ ಈ ಕ್ಷೇತ್ರದಲ್ಲಿ ಸೌಮ್ಯಾ ಎ ರೆಡ್ಡಿ ಎಂಬುವವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿತ್ತು" ಎಂದು ಸೌಮ್ಯಾರೆಡ್ಡಿಯವರ ತಂದೆ ಹಾಗೂ ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾರೆಡ್ಡಿ ಆಪಾದಿಸಿದ್ದಾರೆ.

"ನಾನು ಆನೇಕಲ್ ತಾಲೂಕು ಇಂದ್ಲವಾಡಿ ಗ್ರಾಮದಲ್ಲಿ ಬಿಜೆಪಿ ಬೆಂಬಲಿತ ಪಂಚಾಯ್ತಿ ಸದಸ್ಯೆ" ಎಂದು ಪಕ್ಷೇತರ ಅಭ್ಯರ್ಥಿಯಾಗಿದ್ದ ಸೌಮ್ಯಾ ಎ. ರೆಡ್ಡಿ ಹೇಳಿದ್ದಾರೆ. ಆದರೆ ಬಿಜೆಪಿ ಅಭ್ಯರ್ಥಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಕಣಕ್ಕೆ ಇಳಿಸಲಾಗಿದೆ ಎಂಬ ಆರೋಪವನ್ನು ಅವರು ತಳ್ಳಿಹಾಕಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಿದರೆ ಹೇಗಿರುತ್ತದೆ ಎಂಬ ಅನುಭವ ಗಳಿಸುವ ಉದ್ದೇಶದಿಂದ ತಾವು ಸ್ವ ಇಚ್ಛೆಯಿದ ಕಣಕ್ಕೆ ಇಳಿದದ್ದಾಗಿ ಅವರು ಸಮುಜಾಯಿಷಿ ನೀಡಿದ್ದಾರೆ.

"ನಾನು ಹುಟ್ಟಿಬೆಳೆದ ಆನೇಕಲ್ ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಕ್ಷೇತ್ರ. ಅಲ್ಲಿ ನಾನು ಸ್ಪರ್ಧಿಸುವಂತಿಲ್ಲ. ಆದ್ದರಿಂದ ನಾನು ಜಯನಗರಕ್ಕೆ ಬಂದೆ. ನಾನು ಗೆಲ್ಲುವುದಿಲ್ಲ ಎಂದು ಗೊತ್ತಿತ್ತು. ನಾನು ಪ್ರಚಾರವೂ ಮಾಡಲಿಲ್ಲ ಅಥವಾ ಎಣಿಕೆ ದಿನ ಎಣಿಕೆ ಕೇಂದ್ರಕ್ಕೂ ಹೋಗಿರಲಿಲ್ಲ. ಮನೆಯಲ್ಲೇ ಆನ್‌ಲೈನ್‌ನಲ್ಲಿ ಫಲಿತಾಂಶ ವೀಕ್ಷಿಸುತ್ತಿದ್ದೆ" ಎಂದು ಯುವ ತರಬೇತುದಾರರಾಗಿರುವ ಮತ್ತು ಈವೆಂಟ್ ಮ್ಯಾನೇಜರ್ ಆಗಿರುವ ರೆಡ್ಡಿ ವಿವರಿಸಿದರು.

ಚುನಾವಣಾ ಆಯೋಗದ ಅಂಕಿ ಅಂಶಗಳ ಪ್ರಕಾರ ಸೌಮ್ಯಾರೆಡ್ಡಿ 190 ಅಂಚೆ ಮತಗಳು ಸೇರಿದಂತೆ 57781 ಮತ ಪಡೆದಿದ್ದರೆ, ಬಿಜೆಪಿ 500 ಅಂಚೆ ಮತ ಸೇರಿ 57797 ಮತ ಪಡೆದಿದೆ. ತುರುಸಿನ ಪೈಪೋಟಿ ಇದ್ದ ಕ್ಷೇತ್ರದಲ್ಲಿ ಹಲವು ಬಾರಿ ಮರು ಎಣಿಕೆ ನಡೆಸಲಾಯಿತು. ಎಣಿಕೆಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿವೆ ಎಂದು ರಾಮಲಿಂಗಾರೆಡ್ಡಿ ಆಪಾದಿಸಿದ್ದಾರೆ.

"ವೀಕ್ಷಕರು ಬಂದು ಏಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಜತೆ ಮಾತನಾಡಬೇಕಿತ್ತು? ಸೂರ್ಯ ಎಣಿಕೆ ಕೇಂದ್ರಕ್ಕೆ ಆಗಮಿಸುವ ಯಾವ ಅಗತ್ಯವೂ ಇರಲಿಲ್ಲ. ಎಣಿಕೆ ನಡೆಸಿದ ವಿಷಯದಲ್ಲಿ ಹಲವು ವಿವಾದಗಳಿವೆ. ಎಣಿಕೆಯ ವೇಳೆ ಇವಿಎಂ ಡಾಟ ಪ್ರತಿಗಳನ್ನು ಪರಿಶೀಲನೆಗಾಗಿ ನಮಗೆ ನೀಡಿಲ್ಲ. ಈ ಬಗ್ಗೆ ಚುನಾವಣಾ ಆಯೋಗಕ್ಕೂ ದೂರು ನೀಡಲಾಗಿದೆ. ನ್ಯಾಯಾಲಯದ ರಜೆ ಅವಧಿ ಮುಗಿದ ಬಳಿಕ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿದ್ದೇವೆ" ಎಂದು ಸ್ಪಷ್ಟಪಡಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X