Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆದಿವಾಸಿಗಳಲ್ಲದವರು 5ನೇ ಶೆಡ್ಯೂಲ್‌...

ಆದಿವಾಸಿಗಳಲ್ಲದವರು 5ನೇ ಶೆಡ್ಯೂಲ್‌ ಪ್ರದೇಶಗಳಲ್ಲಿ ವಾಸಿಸಬಹುದು, ಮತ ಚಲಾಯಿಸಬಹುದು: ಸುಪ್ರೀಂ ಕೋರ್ಟ್‌

15 May 2023 3:42 PM IST
share
ಆದಿವಾಸಿಗಳಲ್ಲದವರು 5ನೇ ಶೆಡ್ಯೂಲ್‌ ಪ್ರದೇಶಗಳಲ್ಲಿ ವಾಸಿಸಬಹುದು, ಮತ ಚಲಾಯಿಸಬಹುದು: ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಪರಿಶಿಷ್ಟ ಪಂಗಡಗಳಿಗೆ ಸೇರದ ನಾಗರಿಕರು ಕೆಲವೊಂದು ನಿರ್ಬಂಧಗಳಿಗೆ ಒಳಪಟ್ಟು ಸಂವಿಧಾನದ ಐದನೇ ಶೆಡ್ಯೂಲ್‌ನಡಿ ಬರುವ ಸ್ಥಳಗಳಲ್ಲಿ ವಾಸಿಸಬಹುದಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಇಂತಹ ನಾಗರಿಕರಿಗೆ ಐದನೇ ಶೆಡ್ಯೂಲ್‌ ಪ್ರದೇಶಗಳಲ್ಲಿ ಮತದಾನದ ಹಕ್ಕು ಕೂಡ ಇರುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಪರಿಶಿಷ್ಟ ಪಂಗಡಗಳ ಆರ್ಥಿಕ ಮತ್ತು ಸಾಂಸ್ಕೃತಿಕ ಹಿತಾಸಕ್ತಿಗಳನ್ನು ರಕ್ಷಿಸಲು ಪ್ರದೇಶಗಳನ್ನು ಗುರುತು ಮಾಡುವ ಅಧಿಕಾರವನ್ನು ರಾಷ್ಟ್ರಪತಿಗಳಿಗೆ ಐದನೇ ಶೆಡ್ಯೂಲ್‌ ನೀಡುತ್ತದೆ.

ಪ್ರಸ್ತುತ ದೇಶದ ಹತ್ತು ರಾಜ್ಯಗಳು- ಆಂಧ್ರ ಪ್ರದೇಶ, ಛತ್ತೀಸಗಢ, ಗುಜರಾತ್‌, ಹಿಮಾಚಲ ಪ್ರದೇಶ, ಜಾರ್ಖಂಡ್‌, ಮಧ್ಯ ಪ್ರದೇಶ, ಮಹಾರಾಷ್ಟ್ರ, ಒಡಿಶಾ, ರಾಜಸ್ಥಾನ ಮತ್ತು ತೆಲಂಗಾಣ ಐದನೇ ಶೆಡ್ಯೂಲ್‌ ಪ್ರದೇಶಗಳನ್ನು ಹೊಂದಿದೆ.

ಆದಿವಾಸೀಸ್‌ ಫಾರ್‌ ಸೋಶಿಯಲ್‌ ಎಂಡ್‌ ಹ್ಯೂಮನ್‌ ರೈಟ್ಸ್‌ ಆಕ್ಷನ್‌ ಎಂಬ ಸಂಘಟನೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಸುಪ್ರೀಂ ಕೋರ್ಟ್‌ ಮೇಲಿನಂತೆ ಹೇಳಿದೆ. ಆದಿವಾಸಿಗಳಲ್ಲದ ನಾಗರಿಕರಿಗೆ ಶೆಡ್ಯೂಲ್ಡ್‌ ಪ್ರದೇಶಗಳಲ್ಲಿ ವಾಸಿಸುವ ಹಕ್ಕಿದೆ ಎಂದು ಒಡಿಶಾ ಹೈಕೋರ್ಟ್‌ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಈ ಸಂಘಟನೆ ಸುಪ್ರೀಂ ಕೋರ್ಟಿನ ಮೊರೆ ಹೋಗಿತ್ತು.

1977ರಿಂದ ಶೆಡ್ಯೂಲ್ಡ್‌ ಪ್ರದೇಶವಾಗಿರುವ ಸುಂದರಘರ್‌ ಜಿಲ್ಲೆಗೆ ಸಂಬಂಧಿಸಿದಂತೆ ಒಡಿಶಾ ಹೈಕೋರ್ಟ್‌ ಆದೇಶ ಬಂದಿತ್ತು.

ಐದನೇ ಶೆಡ್ಯೂಲ್‌ ಸಂಸತ್ತು ಅಂಗೀಕರಿಸಿದ ಕಾನೂನು ಎಂಬ ಸಂಘಟನೆಯ ವಾದವನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ. ಇದೊಂದು ಕಾನೂನು ಎಂದು ತಿಳಿದರೂ, ಸಂವಿಧಾನದ ವಿಧಿ 19(1) ಅಡಿ ಪ್ರದತ್ತವಾದ ಮೂಲಭೂತ ಹಕ್ಕುಗಳನ್ನು ಚಲಾಯಿಸಲು ಅದು ನಿರ್ಬಂಧಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಪೀಠ ಹೇಳಿದೆ.

ಐದನೇ ಶೆಡ್ಯೂಲ್‌ಗೆ ಸಂಬಂಧಿಸಿದಂತೆ ರಾಜ್ಯಪಾಲರ ಅಧಿಕಾರ ಸೀಮಿತವಾಗಿದೆ ಹಾಗೂ ಒಂದು ನಿರ್ದಿಷ್ಟ ಕಾನೂನು ಒಂದು ಶೆಡ್ಯೂಲ್ಡ್‌ ಪ್ರದೇಶಕ್ಕೆ ಅನ್ವಯಿಸುವುದಿಲ್ಲ ಅಥವಾ ಮಾರ್ಪಾಡುಗಳೊಂದಿಗೆ ಅನ್ವಯಿಸುತ್ತದೆ ಎದು ಸೂಚಿಸುವುದಕ್ಕೆ ಸೀಮಿತವಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಆದಿವಾಸೀಸ್‌ ಫಾರ್‌ ಸೋಶಿಯಲ್‌ ಎಂಡ್‌ ಹ್ಯೂಮನ್‌ ರೈಟ್ಸ್‌ ಆಕ್ಷನ್‌ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್‌, ಈ ಸಂಘಟನೆ ಆದಿವಾಸಿಗಳ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ ಎಂದು ಹೇಳುತ್ತಿರುವುದರಿಂದ ಅದಕ್ಕೆ ದಂಡ ವಿಧಿಸಿಲ್ಲ ಎಂದು ಹೇಳಿದೆ.

share
Next Story
X