ಪ್ರಾಥಮಿಕ ಶಿಕ್ಷಕರ ಹುದ್ದೆಗಳನ್ನು ರದ್ದುಗೊಳಿಸಿದ ನ್ಯಾಯಾಲಯದ ಆದೇಶ ಪ್ರಶ್ನಿಸಲಾಗುವುದು: ಮಮತಾ ಬ್ಯಾನರ್ಜಿ
ಕೋಲ್ಕತ್ತಾ: ರಾಜ್ಯ ಪ್ರಾಯೋಜಿತ ಹಾಗೂ ಅನುದಾನಿತ ಶಾಲೆಗಳಲ್ಲಿ ಸುಮಾರು 36,000 ಪ್ರಾಥಮಿಕ ಶಿಕ್ಷಕರ ಉದ್ಯೋಗಗಳನ್ನು ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ತಮ್ಮ ಸರಕಾರ ಪ್ರಶ್ನಿಸಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಸೋಮವಾರ ಹೇಳಿದ್ದಾರೆ.
ಕೆಲಸ ಕಳೆದುಕೊಂಡ ಶಿಕ್ಷಕರು ಹಾಗೂ ಅವರ ಕುಟುಂಬ ಸದಸ್ಯರು ಖಿನ್ನತೆಗೆ ಒಳಗಾಗಬಾರದು, ಸರಕಾರ ಅವರೊಂದಿಗಿದೆ ಎಂದು ಅವರು ಹೇಳಿದರು.
"ಕೆಲಸ ಕಳೆದುಕೊಂಡ ಈ 36,000 (ಶಿಕ್ಷಕರು) ಕುಟುಂಬಗಳಿಂದ ನಾವು ಮನವಿಗಳನ್ನು ಸ್ವೀಕರಿಸುತ್ತಿದ್ದೇವೆ. ಇದರಿಂದ ನನಗೆ ಬೇಸರವಾಗಿದೆ. ನಾವು ವಿಭಾಗೀಯ ಪೀಠಕ್ಕೆ ಮೊರೆ ಹೋಗಲು ನಿರ್ಧರಿಸಿದ್ದೇವೆ" ಎಂದು ಬ್ಯಾನರ್ಜಿ ರಾಜ್ಯ ಸಚಿವಾಲಯದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ನೇಮಕಾತಿ ಪ್ರಕ್ರಿಯೆಯಲ್ಲಿ ಸರಿಯಾದ ವಿಧಾನವನ್ನು ಅನುಸರಿಸದ ಕಾರಣ ರಾಜ್ಯ ಪ್ರಾಯೋಜಿತ ಮತ್ತು ಅನುದಾನಿತ ಶಾಲೆಗಳಲ್ಲಿ 36,000 ಪ್ರಾಥಮಿಕ ಶಿಕ್ಷಕರ ನೇಮಕಾತಿಗಳನ್ನು ರದ್ದುಗೊಳಿಸುವಂತೆ ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ