Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವರ್ಗಾವಣೆ ಆದೇಶ ಪಾಲಿಸದ ಐಎಎಸ್...

ವರ್ಗಾವಣೆ ಆದೇಶ ಪಾಲಿಸದ ಐಎಎಸ್ ಅಧಿಕಾರಿಗೆ ದಿಲ್ಲಿ ಸರಕಾರದ ನೋಟಿಸ್

16 May 2023 9:11 PM IST
share
ವರ್ಗಾವಣೆ ಆದೇಶ ಪಾಲಿಸದ ಐಎಎಸ್ ಅಧಿಕಾರಿಗೆ ದಿಲ್ಲಿ ಸರಕಾರದ ನೋಟಿಸ್

ಹೊಸದಿಲ್ಲಿ: ಕಳೆದ ವಾರ ಸೇವಾ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ತೆರವುಗೊಳಿಸಲ್ಪಟ್ಟಿದ್ದ ಐಎಎಸ್ ಅಧಿಕಾರಿ ಆಶಿಷ್ ಮೋರೆಯವರಿಗೆ ದಿಲ್ಲಿ ಸರಕಾರವು ಶೋಕಾಸ್ ನೋಟಿಸನ್ನು ಹೊರಡಿಸಿದೆ.

ದಿಲ್ಲಿ ಸರಕಾರವು ಅಧಿಕಾರಿಗಳ ನೇಮಕಾತಿ ಮತ್ತು ವರ್ಗಾವಣೆ ಅಧಿಕಾರವನ್ನು ಹೊಂದಿದೆ ಎಂದು ಸರ್ವೋಚ್ಚ ನ್ಯಾಯಾಲಯವು ತೀರ್ಪು ನೀಡಿದ ಬಳಿಕ ಮೇ 11ರಂದು ಮೋರೆಯವರನ್ನು ಹುದ್ದೆಯಿಂದ ತೆಗೆದುಹಾಕಲಾಗಿತ್ತು.

ಆಪ್ ನೇತೃತ್ವದ ಸರಕಾರವು ಮೋರೆಯವರನ್ನು ಬದಲಿಸುವ ನಿರ್ಧಾರವನ್ನು ಪಾಲಿಸದ್ದಕ್ಕೆ 24 ಗಂಟೆಗಳಲ್ಲಿ ಉತ್ತರಿಸುವಂತೆ ಆಡಳಿತಶಾಹಿಗೆ ಸೂಚಿಸಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಪಾಲಿಸದಿದ್ದಕ್ಕಾಗಿ ಮೋರೆಯವರ ವಿರುದ್ಧ ಶಿಸ್ತು ಕ್ರಮವನ್ನು ಆರಂಭಿಸಲು ಸರಕಾರವು ಉದ್ದೇಶಿಸಿದೆ ಎಂದು ಅನಾಮಿಕ ಅಧಿಕಾರಿಗಳು ಸುದ್ದಿಸಂಸ್ಥೆಗೆ ತಿಳಿಸಿದರು.

ಮೋರೆಯವರನ್ನು ವರ್ಗಾವಣೆಗೊಳಿಸಿದ ಬಳಿಕ ಅವರು ಅನಿರೀಕ್ಷಿತವಾಗಿ ಸಚಿವಾಲಯವನ್ನು ತೊರೆದಿದ್ದು,ತನ್ನ ಫೋನನ್ನು ಸ್ವಿಚ್ ಆಫ್ ಮಾಡಿದ್ದಾರೆ ಎಂದು ಸೇವೆಗಳ ಸಚಿವ ಸೌರಭ್ ಭಾರದ್ವಾಜ್ ಅವರನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯು ವರದಿ ಮಾಡಿದೆ.

ಮೋರೆಯವರನ್ನು ಹುದ್ದೆಯಿಂದ ತೆಗೆದಿರುವ ಬಗ್ಗೆ ಟಿಪ್ಪಣಿಯೊಂದನ್ನು ಅವರ ನಿವಾಸಕ್ಕೆ ರವಾನಿಸಲಾಗಿತ್ತು,ಆದರೆ ಅವರು ಅದನ್ನು ಅಂಗೀಕರಿಸಿರಲಿಲ್ಲ. ಬಳಿಕ ಇನ್ನೊಂದು ಟಿಪ್ಪಣಿಯನ್ನು ಅವರ ಇ-ಮೇಲ್ ಮತ್ತು ವಾಟ್ಸ್ಆ್ಯಪ್ಗೆ ಕಳುಹಿಸಲಾಗಿತ್ತಾದರೂ ಅದಕ್ಕೂ ಅವರು ಪ್ರತಿಕ್ರಿಯಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.

ಮೇ 11ರಂದು ಸರ್ವೋಚ್ಚ ನ್ಯಾಯಾಲಯವು ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಸರಕಾರದ ಕಾರ್ಯಕಾರಿ ಅಧಿಕಾರಗಳ ವ್ಯಾಪ್ತಿ ಮತ್ತು ಆಡಳಿತಾತ್ಮಕ ಸೇವೆಗಳ ಮೇಲೆ ಅದರ ನಿಯಂತ್ರಣ ಕುರಿತು ಅರವಿಂದ ಕೇಜ್ರಿವಾಲ್ ನೇತೃತ್ವದ ದಿಲ್ಲಿ ಸರಕಾರ ಮತ್ತು ಕೇಂದ್ರದ ನಡುವಿನ ವಿವಾದದಲ್ಲಿ ಸರ್ವಾನುಮತದ ತೀರ್ಪನ್ನು ಹೊರಡಿಸಿತ್ತು.

ದಿಲ್ಲಿ ಸರಕಾರವು ಸಾರ್ವಜನಿಕ ಸುವ್ಯವಸ್ಥೆ,ಪೊಲೀಸ್ ಮತ್ತು ಭೂ ಇಲಾಖೆಗಳನ್ನು ಹೊರತುಪಡಿಸಿ ಅಧಿಕಾರಿಗಳ ಮೇಲೆ ಶಾಸಕಾಂಗ ಅಧಿಕಾರವನ್ನು ಹೊಂದಿದೆ ಎಂದು ಸರ್ವೋಚ್ಚ ನ್ಯಾಯಾಲಯವು ತೀರ್ಪಿನಲ್ಲಿ ಸ್ಪಷ್ಟಪಡಿಸಿತ್ತು.

ತೀರ್ಪಿನ ಬೆನ್ನಲ್ಲೇ ದಿಲ್ಲಿ ಸರಕಾರವು ದಿಲ್ಲಿ ಜಲಮಂಡಳಿಯ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ.ಕೆ.ಸಿಂಗ್ ಅವರನ್ನು ಮೋರೆ ಸ್ಥಾನಕ್ಕೆ ನೇಮಕಗೊಳಿಸಿತ್ತು.

ಹಲವಾರು ಹುದ್ದೆಗಳಲ್ಲಿರುವ ಅಧಿಕಾರಿಗಳು ಸಾರ್ವಜನಿಕ ಕಾರ್ಯಗಳಿಗೆ ಅಡ್ಡಿಯನ್ನುಂಟು ಮಾಡುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದ ಕೇಜ್ರಿವಾಲ್, ಅಂತಹ ಹುದ್ದೆಗಳನ್ನು ಗುರುತಿಸಲಾಗುವುದು. ಅವುಗಳನ್ನು ಒಂದೋ ಖಾಲಿ ಬಿಡಲಾಗುವುದು ಅಥವಾ ರದ್ದುಗೊಳಿಸಲಾಗುವುದು. ಅಗತ್ಯವಾದಾಗ ಹೆಚ್ಚುವರಿ ಹುದ್ದೆಗಳನ್ನು ಸೃಷ್ಟಿಸಲಾಗುವುದು ಎಂದು ತಿಳಿಸಿದ್ದರು

share
Next Story
X