Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದಾನಿ ಗ್ರೂಪ್ ಕುರಿತು ಸೆಬಿ ತನಿಖೆ...

ಅದಾನಿ ಗ್ರೂಪ್ ಕುರಿತು ಸೆಬಿ ತನಿಖೆ ನಡೆಸುತ್ತಿದೆ ಎಂಬ ತನ್ನ ಹೇಳಿಕೆಗೆ ಬದ್ಧತೆ ವ್ಯಕ್ತಪಡಿಸಿದ ವಿತ್ತ ಸಚಿವಾಲಯ

16 May 2023 10:20 PM IST
share
ಅದಾನಿ ಗ್ರೂಪ್ ಕುರಿತು ಸೆಬಿ ತನಿಖೆ ನಡೆಸುತ್ತಿದೆ ಎಂಬ ತನ್ನ ಹೇಳಿಕೆಗೆ ಬದ್ಧತೆ ವ್ಯಕ್ತಪಡಿಸಿದ ವಿತ್ತ ಸಚಿವಾಲಯ

ಹೊಸದಿಲ್ಲಿ,ಮೇ 16: ಅದಾನಿ ಗ್ರೂಪ್ನ ಕೆಲವು ಕಂಪನಿಗಳಿಂದ ನಿಯಮಗಳ ಪಾಲನೆಯ ಕುರಿತು ಸೆಬಿ ತನಿಖೆ ನಡೆಸುತ್ತಿದೆ ಎಂಬ ತನ್ನ ಹೇಳಿಕೆಗೆ ತಾನು ಬದ್ಧನಾಗಿರುವುದಾಗಿ ಕೇಂದ್ರ ವಿತ್ತ ಸಚಿವಾಲಯವು ತಿಳಿಸಿದೆ. 

ತಾನು 2016ರಿಂದ ಅದಾನಿ ಗ್ರೂಪ್ ಕುರಿತು ತನಿಖೆ ನಡೆಸುತ್ತಿದ್ದೇನೆ ಎಂಬ ಹೇಳಿಕೆಯು ವಾಸ್ತವದಲ್ಲಿ ಆಧಾರರಹಿತವಾಗಿದೆ ಎಂದು ಸೆಬಿ ಸೋಮವಾರ ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದ ಬಳಿಕ ವಿತ್ತ ಸಚಿವಾಲಯದ ಈ ಹೇಳಿಕೆ ಹೊರಬಿದ್ದಿದೆ. ಅದಾನಿ ಗ್ರೂಪ್ ತನ್ನ ಕಂಪನಿಯ ಶೇರುಗಳ ಬೆಲೆಗಳನ್ನು ಕೃತಕವಾಗಿ ಹೆಚ್ಚಿಸಿತ್ತು ಎಂಬ ಆರೋಪಗಳ ಕುರಿತು ತನಿಖೆಯನ್ನು ಕೋರಿ ಸಲ್ಲಿಸಲಾಗಿರುವ ಎರಡು ಅರ್ಜಿಗಳ ವಿಚಾರಣೆಯನ್ನು ಕೈಗತ್ತಿಕೊಂಡಿದ್ದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠಕ್ಕೆ ಸಲ್ಲಿಸಿರುವ ಅಫಿಡವಿಟ್ನಲ್ಲಿ ಸೆಬಿ ಈ ನಿವೇದನೆಯನ್ನು ಮಾಡಿಕೊಂಡಿತ್ತು.

ನ್ಯಾಯಾಲಯದಲ್ಲಿ ಸೆಬಿ ಹೇಳಿಕೆಯು ಸಂಸತ್ತಿನಲ್ಲಿ ವಿತ್ತ ಸಚಿವಾಲಯದ ಉತ್ತರಕ್ಕೆ ತದ್ವಿರುದ್ಧವಾಗಿದೆ ಎಂದು ಬೆಟ್ಟು ಮಾಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ ರಮೇಶ ಅವರ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಸಚಿವಾಲಯವು,ತನಿಖೆಯ ಕುರಿತು ತಾನು 2021ರಲ್ಲಿ ಲೋಕಸಭೆಯಲ್ಲಿ ನೀಡಿದ್ದ ಹೇಳಿಕೆಯು ಎಲ್ಲ ಸಂಬಂಧಿತ ಏಜೆನ್ಸಿಗಳಿಂದ ಸಮಂಜಸ ಕ್ರಮಗಳು ಮತ್ತು ಮಾಹಿತಿಗಳ ಒಳಹರಿವನ್ನು ಆಧರಿಸಿತ್ತು ಎಂದು ಟ್ವೀಟ್ನಲ್ಲಿ ತಿಳಿಸಿದೆ.

ಕೋರಲಾಗಿರುವ ತನಿಖೆಯು 51 ಭಾರತೀಯ ಕಂಪನಿಗಳಿಂದ ಜಾಗತಿಕ ಠೇವಣಿ ರಸೀದಿಗಳ ಪರಿಶೀಲನೆಯನ್ನು ಒಳಗೊಂಡಿದೆ. ಆದರೆ ಅದಾನಿ ಗ್ರೂಪ್ನ ಲಿಸ್ಟ್ ಆಗಿರುವ ಯಾವುದೇ ಕಂಪನಿಯು ಇವುಗಳಲ್ಲಿ ಸೇರಿಲ್ಲ ಎಂದು ಸೆಬಿ ತನ್ನ ಅಫಿಡವಿಟ್ನಲ್ಲಿ ತಿಳಿಸಿತ್ತು. ಜಾಗತಿಕ ಠೇವಣಿ ರಸೀದಿಗಳು ದೇಶಿಯ ಶೇರು ವಿನಿಮಯ ಕೇಂದ್ರಗಳಲ್ಲಿ ವಹಿವಾಟಾಗುತ್ತಿರುವ ವಿದೇಶಿ ಕಂಪನಿಯಲ್ಲಿನ ಶೇರುಗಳನ್ನು ಪ್ರತಿನಿಧಿಸಲು ಬ್ಯಾಂಕುಗಳು ವಿತರಿಸುವ ಪ್ರಮಾಣಪತ್ರಗಳಾಗಿವೆ.

ಆದರೆ,ನಿಯಮಗಳ ಅನುಸರಣೆಗೆ ಸಂಬಂಧಿಸಿದಂತೆ ಸೆಬಿ ಅದಾನಿ ಗ್ರೂಪ್ನ್ನು ತನಿಖೆಗೊಳಪಡಿಸಿದೆ ಎಂದು 2021ರಲ್ಲಿ ಕೇಂದ್ರ ವಿತ್ತ ಸಚಿವಾಲಯವು ಲೋಕಸಭೆಯಲ್ಲಿ ನೀಡಿದ್ದ ಉತ್ತರದಲ್ಲಿ ತಿಳಿಸಲಾಗಿತ್ತು. ಸೆಬಿ 2016ರಲ್ಲಿ ಜಾಗತಿಕ ಠೇವಣಿ ರಸೀದಿಗಳ ವಿತರಣೆಗೆ ಸಂಬಂಧಿಸಿದಂತೆ ಅಲ್ಬುಲಾ ಇನ್ವೆಸ್ಟ್ಮೆಂಟ್ ಫಂಡ್,ಕ್ರೆಸ್ಟಾ ಫಂಡ್ ಮತ್ತು ಎಪಿಎಂಎಸ್ ಇನ್ವೆಸ್ಟ್ಮೆಂಟ್ ಫಂಡ್ಗಳ ಖಾತೆಗಳ ಸ್ಥಂಭನಕ್ಕೆ ಆದೇಶಿಸಿತ್ತು ಎನ್ನುವುದನ್ನೂ ಉತ್ತರವು ತೋರಿಸಿತ್ತು. ಈ ಫಂಡ್ಗಳು ಅದಾನಿ ಗ್ರೂಪ್ ಕಂಪನಿಗಳ ಶೇರುಗಳನ್ನು ಹೊಂದಿವೆ.

share
Next Story
X