Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. 179 ಪಂಚಾಯತ್‌ಗಳಲ್ಲಿ ಸ್ಥಾಯಿ...

179 ಪಂಚಾಯತ್‌ಗಳಲ್ಲಿ ಸ್ಥಾಯಿ ಸಮಿತಿಗಳನ್ನೇ ರಚನೆ ಮಾಡಿಲ್ಲ

ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ವರದಿ

ಜಿ.ಮಹಾಂತೇಶ್ಜಿ.ಮಹಾಂತೇಶ್17 May 2023 8:32 AM IST
share
179 ಪಂಚಾಯತ್‌ಗಳಲ್ಲಿ ಸ್ಥಾಯಿ ಸಮಿತಿಗಳನ್ನೇ ರಚನೆ ಮಾಡಿಲ್ಲ
ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ವರದಿ

ಬೆಂಗಳೂರು: ರಾಜ್ಯದ ಒಟ್ಟು ಗ್ರಾಮ ಪಂಚಾಯತ್‌ಗಳ ಪೈಕಿ 179 ಪಂಚಾಯತ್‌ಗಳಲ್ಲಿ ಸಾಮಾಜಿಕ ನ್ಯಾಯ ಸಮಿತಿಯೂ ಸೇರಿದಂತೆ ಸ್ಥಾಯಿ ಸಮಿತಿಗಳನ್ನೇ ರಚನೆ ಮಾಡಿಲ್ಲ ಎಂದು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು 2020-21ನೇ ಸಾಲಿನ ಕಾರ್ಯಕ್ಷಮತೆಯ ಕ್ರೋಡೀಕೃತ ಲೆಕ್ಕಪರಿಶೋಧನಾ ವರದಿಯು ಪತ್ತೆ ಹಚ್ಚಿದೆ.

 ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ಅಧಿನಿಯಮ 1993ರ ಪ್ರಕರಣ 246(1) ಮತ್ತು ಗ್ರಾಮ ಪಂಚಾಯತ್‌ಗಳ ಆಯವ್ಯಯ ಮತ್ತು ಲೆಕ್ಕಪತ್ರಗಳ ನಿಯಮಗಳು 2006ರ ನಿಯಮ 112(1) ಅನ್ವಯ ರಾಜ್ಯದ ಗ್ರಾಮ ಪಂಚಾಯತ್‌ಗಳ 2020-21ನೇ ಸಾಲಿನ ಆರ್ಥಿಕ ವ್ಯವಹಾರಗಳ ಲೆಕ್ಕಪರಿಶೋಧನೆ ನಡೆಸಿ ಈ ಸಂಬಂಧ ಸರ್ಕಾರಕ್ಕೆ ವರದಿಯನ್ನೂ ಸಲ್ಲಿಸಿದೆ. ಈ ವರದಿಯ ಪ್ರತಿಯು ‘ದಿ ಫೈಲ್’ಗೆ ಲಭ್ಯವಾಗಿದೆ.

ರಾಜ್ಯದ 4 ಪ್ರಾಂತೀಯ ಕಚೇರಿ ವಿಭಾಗಗಳ ಎಲ್ಲಾ 30 ಜಿಲ್ಲೆಗಳ ಸ್ಥಳೀಯ ಲೆಕ್ಕಪರಿಶೋಧನೆ ನಡೆಸಿರುವ ಲೆಕ್ಕಪರಿಶೋಧಕರು ಶೇ.10ರಷ್ಟು ಅಂದಾಜು 559 ಗ್ರಾಮ ಪಂಚಾಯತ್‌ಗಳ ಕಾರ್ಯಕ್ಷಮತೆಯ ಲೆಕ್ಕ ಪರಿಶೋಧನೆ ಕೈಗೊಂಡಿತ್ತು.

 ಒಟ್ಟು  ಲೆಕ್ಕ ಪರಿಶೋಧನೆ ಕೈಗೊಂಡ 559 ಪಂಚಾಯತ್‌ಗಳ ಪೈಕಿ 183 ಗ್ರಾಮ ಪಂಚಾಯತ್‌ಗಳು ಸಾಮಾನ್ಯ ಸ್ಥಾಯಿ ಸಮಿತಿ, 185 ಪಂಚಾಯತ್‌ಗಳು ಹಣಕಾಸು ಲೆಕ್ಕಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿ ಹಾಗೂ 179 ಗ್ರಾಮ ಪಂಚಾಯತ್‌ಗಳು ಸಾಮಾಜಿಕ ನ್ಯಾಯ ಸಮಿತಿಯನ್ನೇ ರಚನೆ ಮಾಡಿಲ್ಲ ಎಂಬ ಅಂಶವನ್ನು ಲೆಕ್ಕಪರಿಶೋಧನೆ ವರದಿಯು ಬಹಿರಂಗಗೊಳಿಸಿದೆ.

 ಹಣಕಾಸು ಸ್ಥಾಯಿ ಸಮಿತಿ ರಚನೆ ಸಂಬಂಧ ಪರಿಶೀಲಿಸಿರುವ ಲೆಕ್ಕಪರಿಶೋಧಕರು ಶೇ.33ರಷ್ಟು ಗ್ರಾಮ ಪಂಚಾಯತ್‌ಗಳು ನಿಗದಿತ ಅವಧಿಯಲ್ಲಿ ಸಮಿತಿಯನ್ನು ರಚಿಸಿ ಕಾರ್ಯಾರಂಭಿಸಿರುವುದಿಲ್ಲ ಎಂಬುದು ವರದಿಯಿಂದ ಗೊತ್ತಾಗಿದೆ.

ಕಲಬುರಗಿ ವಿಭಾಗದಲ್ಲಿ ಶೇ.50ರಷ್ಟು, ಬೆಳಗಾವಿ ವಿಭಾಗದಲ್ಲಿ ಶೇ. 40, ಮೈಸೂರು ವಿಭಾಗದಲ್ಲಿ ಶೇ.27ರಷ್ಟು ಮತ್ತು ಬೆಂಗಳೂರು ವಿಭಾಗದಲ್ಲಿ ಶೇ. 21ರಷ್ಟು ಗ್ರಾಮ ಪಂಚಾಯತ್‌ಗಳಲ್ಲಿ ಸ್ಥಾಯಿ ಸಮಿತಿಗಳೇ ರಚನೆಯಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿದೆ. ‘ಸಮಿತಿಗಳು ಸಕಾಲದಲ್ಲಿ ರಚನೆಯಾಗದಿರುವುದು, ವಿಳಂಬ ರಚನೆಯಿಂದಾಗಿ ಆಡಳಿತ ವ್ಯವಸ್ಥೆಯಲ್ಲಿ ಸ್ಥಾಯಿ ಸಮಿತಿಗಳು ವಹಿಸಬೇಕಾಗಿದ್ದ ಕಾರ್ಯದಲ್ಲಿ ಲೋಪ ಉಂಟಾಗಿರುತ್ತದೆ’ ಎಂದು ಲೆಕ್ಕ ಪರಿಶೋಧನೆ ವರದಿಯಲ್ಲಿ ವಿವರಿಸಲಾಗಿದೆ.

 ಅದೇ ರೀತಿ 157 ಗ್ರಾಮ ಪಂಚಾಯತ್‌ಗಳಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹೆಚ್ಚುವರಿ ಕಾರ್ಯಭಾರವನ್ನು ಹೊಂದಿದ್ದಾರೆ. 128 ಗ್ರಾಮ ಪಂಚಾಯತ್‌ಗಳಲ್ಲಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಒಂದಕ್ಕಿಂತ ಹೆಚ್ಚು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕಾರ್ಯನಿರ್ವಹಿಸಿದ್ದಾರೆ. ಶೇ.28ರಷ್ಟು ಗ್ರಾಮ ಪಂಚಾಯತ್‌ಗಳಲ್ಲಿ ಅಧಿಕ ಪ್ರಭಾರ ನಿರ್ವಹಣೆ ಪ್ರಕರಣಗಳಿವೆ. ಶೇ. 23ರಷ್ಟು ಗ್ರಾಮ ಪಂಚಾಯತ್‌ಗಳಲ್ಲಿ ತ್ವರಿತ ವರ್ಗಾವಣೆ ಪ್ರಕರಣಗಳಿವೆ ಎಂದು ಲೆಕ್ಕ ಪರಿಶೋಧನೆ ವೇಳೆಯಲ್ಲಿ ಪತ್ತೆ ಹಚ್ಚಿರುವುದು ವರದಿಯಿಂದ ಗೊತ್ತಾಗಿದೆ.

ಬೆಂಗಳೂರು ವಿಭಾಗದ ಒಟ್ಟು 171 ಗ್ರಾಮ ಪಂಚಾಯತ್‌ಗಳಲ್ಲಿ 35 ಮಂದಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹೆಚ್ಚುವರಿ ಪ್ರಭಾರ ಹೊಂದಿದ್ದಾರೆ. ಬೆಳಗಾವಿ ವಿಭಾಗದಲ್ಲಿ 62, ಕಲಬುರಗಿ ವಿಭಾಗದಲ್ಲಿ 36, ಮೈಸೂರು ವಿಭಾಗದಲ್ಲಿ 24 ಸೇರಿ ಒಟ್ಟು 157 ಮಂದಿ ಪಿಡಿಒಗಳು ಹೆಚ್ಚುವರಿ ಪ್ರಭಾರ ಹೊಂದಿರುವುದು ವರದಿಯಿಂದ ಗೊತ್ತಾಗಿದೆ.  ‘ಈ ಕ್ರಮವು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೇಲೆ ತೀವ್ರ ಒತ್ತಡ ಮತ್ತು ಅವರು ಕಾರ್ಯವೈಖರಿ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರಿಂದಾಗ ಆಡಳಿತ ವ್ಯವಸ್ಥೆಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲು ಮತ್ತು ಗ್ರಾಮ ಪಂಚಾಯತ್‌ನ ಕಾರ್ಯನಿರ್ವಹಣೆ ಮೇಲೆ ವ್ಯತ್ಯಯ ಉಂಟಾಗಿರುತ್ತದೆ,’ ಎಂದು ವರದಿಯಲ್ಲಿ ವಿವರಿಸಲಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X