Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅರುಣ್ ಕುಮಾರ್ ಪುತ್ತಿಲ ಬೆಂಬಲಕ್ಕೆ ನಿಂತ...

ಅರುಣ್ ಕುಮಾರ್ ಪುತ್ತಿಲ ಬೆಂಬಲಕ್ಕೆ ನಿಂತ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಅಪಾಯಕಾರಿ: ಮುನೀರ್ ಕಾಟಿಪಳ್ಳ

17 May 2023 10:22 PM IST
share
ಅರುಣ್ ಕುಮಾರ್ ಪುತ್ತಿಲ ಬೆಂಬಲಕ್ಕೆ ನಿಂತ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಅಪಾಯಕಾರಿ: ಮುನೀರ್ ಕಾಟಿಪಳ್ಳ

ಪುತ್ತೂರಿನಲ್ಲಿ ಸಂಘದ ಅಣತಿ ಮೀರಿ ಬಿಜೆಪಿ ವಿರುದ್ಧ ಬಂಡೆದ್ದ ಅರುಣ್ ಕುಮಾರ್ ಪುತ್ತಿಲ ಬೆಂಬಲಕ್ಕೆ ನಿಂತ ಕಾರ್ಯಕರ್ತರ ಮೇಲೆ ಬಿಜೆಪಿ ನಾಯಕತ್ವದ ನಿರ್ದೇಶನದಂತೆ ಪೊಲೀಸರು ನಡೆಸಿದ ದೌರ್ಜನ್ಯ ಅಪಾಯಕಾರಿ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.

ನಳಿನ್ ಕುಮಾರ್ ಕಟೀಲ್‌ ಅವರ ಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಒಂದು ಬ್ಯಾನರ್ ಅಳವಡಿಸಿದ್ದಕ್ಕೆ ಇಷ್ಟು ದೌರ್ಜನ್ಯ ನಡೆಯಲು ಸಾಧ್ಯವಿಲ್ಲ. ಇದು ಬಿಜೆಪಿ, ಸಂಘಪರಿವಾರದ ನಾಯಕತ್ವವನ್ನು ಆಗಾಗ ಪ್ರಶ್ನಿಸುತ್ತಿರುವ ಕಾರ್ಯಕರ್ತರ ಮೇಲೆ ನಾಯಕರುಗಳ ಒಳಗಡೆ ಕುದಿಯುತ್ತಿರುವ ಆಕ್ರೋಶದ ಪ್ರತಿಫಲನ. "ಇನ್ನು ಮುಂದೆ ಬಂಡಾಯ ಎದ್ದರೆ ಹುಷಾರ್" ಎಂಬ ಎಚ್ಚರಿಕೆ. ಮುಸ್ಲಿಂ ಯುವಕರ ಮೇಲಿನ ದೌರ್ಜನ್ಯಕ್ಕಿಂತಲೂ ಕ್ರೂರವಾಗಿ ನಿಮ್ಮನ್ನು ಹತ್ತಿಕ್ಕಲಾಗುವುದು ಎಂಬ ಸಂದೇಶ.

ಅಧಿಕಾರ ಕಳೆದುಕೊಂಡಿರುವ ಬಿಜೆಪಿ‌ ಪರಿವಾರ ಇಷ್ಟೊಂದು ಅಮಾನವೀಯವಾಗಿ ನಡೆದುಕೊಂಡಿರುವಾಗ, ಸರಕಾರ ಮರಳಿ ಬಿಜೆಪಿ‌ ಕೈಗೆ ಹೋಗಿದ್ದರೆ ಪುತ್ತೂರು, ಕಾರ್ಕಳದ ಬಿಜೆಪಿ‌ ಬಂಡಾಯ ಕಾರ್ಯಕರ್ತರ ಪರಿಸ್ಥಿತಿ ಹೇಗಿರುತ್ತಿತ್ತು ? ರಾಜಕೀಯ ಪ್ರೇರಿತ ಧರ್ಮದ ಬಾವುಟ ಹಿಡಿದು ಬೀದಿಗಿಳಿಯುವ ಯುವಕರು ಪಾಠ ಕಲಿಯಬೇಕು. ಬಿಜೆಪಿ ಪರಿವಾರವನ್ನು ಪ್ರಶ್ನಿಸುತ್ತಲೇ ಮತ್ತಷ್ಟು ತೀವ್ರವಾದ ಧರ್ಮಾಂಧತೆಯ ಕಡೆಗೆ ಚಲಿಸುವುದನ್ನು ಕೈ ಬಿಡಬೇಕು. ಮಾನವೀಯ ಚಿಂತನೆಗಳು, ಸ್ವಾಮಿ ವಿವೇಕಾನಂದ, ಭಗತ್ ಸಿಂಗ್ ರ ಆದರ್ಶಗಳತ್ತ ವಾಲಬೇಕು. ಉದ್ಯೋಗ, ಶಿಕ್ಷಣ, ಆರೋಗ್ಯ, ಸಮಾನತೆಯ ಹೋರಾಟದ ಧ್ವಜವನ್ನು ಎತ್ತಿ ಹಿಡಿಯಬೇಕು. ಅದು ಪರ್ಯಾಯ ಆಗಬೇಕು.

ಏನೇ ಇರಲಿ, ಪುತ್ತೂರು ಪುತ್ತಿಲ ಬೆಂಬಲಿಗರ ಮೇಲಿನ ದೌರ್ಜನ್ಯ ಖಂಡನೀಯ. ಪೊಲೀಸರು ಇನ್ನೂ ಬಿಜೆಪಿ ಸರಕಾರದ ಮನಸ್ಥಿತಿಯಲ್ಲೆ ಕರ್ತವ್ಯ ನಿರ್ವಹಿಸುತ್ತಿರುವುದು ಕಂಡು ಬರುತ್ತಿದೆ. ಈ ಪ್ರಕರಣ ಸರಿಯಾದ ತನಿಖೆ ಆಗಬೇಕು. ತಪ್ಪಿತಸ್ಥ ಪೊಲೀಸರನ್ನು ತಕ್ಷಣವೇ ಅಮಾನತುಗೊಳಿಸಬೇಕು. ಶಾಸಕ ಅಶೋಕ್ ರೈ ಮೇಲೆ ನ್ಯಾಯ ಒದಗಿಸುವ ದೊಡ್ಡ ಜವಾಬ್ದಾರಿ ಇದೆ ಎಂದು ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.

share
Next Story
X