Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಧ್ವಜದ ಮೇಲೆ ಗೋಹತ್ಯೆ: ವೈರಲ್‌...

ಬಿಜೆಪಿ ಧ್ವಜದ ಮೇಲೆ ಗೋಹತ್ಯೆ: ವೈರಲ್‌ ವೀಡಿಯೊ ಹಿಂದಿನ ಸತ್ಯಾಂಶವೇನು?

18 May 2023 4:13 PM IST
share
ಬಿಜೆಪಿ ಧ್ವಜದ ಮೇಲೆ ಗೋಹತ್ಯೆ: ವೈರಲ್‌ ವೀಡಿಯೊ ಹಿಂದಿನ ಸತ್ಯಾಂಶವೇನು?

 ಹೊಸದಿಲ್ಲಿ: ಬಿಜೆಪಿ ಧ್ವಜದ ಮೇಲೆ ಹತ್ಯೆಗೀಡಾಗಿರುವ ದನವೊಂದು ಇರುವುದನ್ನು ತೋರಿಸುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು ಈ ಘಟನೆ ಇತ್ತೀಚೆಗೆ ಕಾಂಗ್ರೆಸ್‌ ಪಕ್ಷ ಬಹುಮತದಿಂದ ಗೆದ್ದ ವಿಧಾನಸಭಾ ಚುನಾವಣೆ ನಡೆದ ಕರ್ನಾಟಕದಲ್ಲಿ ನಡೆದಿದೆ ಎಂದು ಹೇಳಲಾಗಿದೆ.

“ಖಾನ್-ಗ್ರೇಸ್‌ ವಿಜಯವನ್ನು ಕರ್ನಾಟಕದಲ್ಲಿ ಬಿಜೆಪಿ ಧ್ವಜದ ಮೇಲೆ ದನವೊಂದನ್ನು ಹತ್ಯೆಗೈದು ಆಚರಿಸಲಾಗುತ್ತಿದೆ,” ಎಂಬ ಶೀರ್ಷಿಕೆಯೊಂದಿಗೆ ಈ ವೀಡಿಯೋವನ್ನು ಹಲವಾರು ಮಂದಿ ಶೇರ್‌ ಮಾಡಿದ್ದಾರೆ.

ಈ ವೀಡಿಯೋ ಶೇರ್‌ ಮಾಡಿದ್ದವರೊಬ್ಬರನ್ನು ಕೇಂದ್ರ ಸಚಿವ ಪಿಯುಷ್‌ ಗೋಯಲ್‌ ಅವರ ಕಚೇರಿ ಮತ್ತು ಬಿಜೆಪಿ ನಾಯಕ ಕಪಿಲ್‌ ಮಿಶ್ರಾ ಅವರೂ ಫಾಲೋ ಮಾಡುತ್ತಿದ್ದಾರೆ.

ಅಸಲಿಯತ್ತೇನು?

ಆದರೆ ಈ ವೀಡಿಯೋದ ಅಸಲಿಯತ್ತು ಬೇರೆಯೇ ಆಗಿದೆ. ಆಲ್ಟ್‌ ನ್ಯೂಸ್‌ ಇದರ ಅಸಲಿಯತ್ತನ್ನು ಬಹಿರಂಗಪಡಿಸಿದೆ. ಈ ಕುರಿತಂತೆ ಕೀವರ್ಡ್‌ ಶೋಧ ನಡೆಸಿದಾಗ ಈ ಘಟನೆ ಮಣಿಪುರದಲ್ಲಿ 2022 ವಿಧಾನಸಭಾ ಚುನಾವಣೆ ವೇಳೆ ನಡೆದಿದೆ ಎಂದು ತಿಳಿದು ಬರುತ್ತದೆ.

ಫೆಬ್ರವರಿ 2, 2022ರ ಟೈಮ್ಸ್‌ ಆಫ್‌ ಇಂಡಿಯಾ ವರದಿ ಪ್ರಕಾರ, ಮಣಿಪುರ ವಿಧಾನಸಭಾ ಚುನಾವಣೆಯ 60 ಸೀಟುಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದ ಬೆನ್ನಲ್ಲೇ ಈ ವೀಡಿಯೋ ಅಂತರ್ಜಾಲದಲ್ಲಿ ಕಾಣಿಸಿಕೊಂಡಿತ್ತು. ಕೆಲ ಮಂದಿ ದನವೊಂದನ್ನು ಹತ್ಯೆಗೈದು ಅದರ ತಲೆಯ ಅಡಿಯಲ್ಲಿ ಬಿಜೆಪಿ ಧ್ವಜವಿಟ್ಟಿದ್ದರು. ಹಿನ್ನೆಲೆಯಲ್ಲಿ ಕೆಲ ಜನರು ಮಣಿಪುರದ ಆಗಿನ ಸೀಎಂ ಎನ್‌ ಬಿರೇನ್‌ ಸಿಂಗ್‌ ಮತ್ತು ಮಣಿಪುರ ಬಿಜೆಪಿ ಅಧ್ಯಕ್ಷ ಎ ಶಾರದಾ ದೇವಿ ಅವರನ್ನು ನಿಂದಿಸುವುದೂ ಕಾಣಿಸುತ್ತದೆ.

ಈ ವೀಡಿಯೋವನ್ನು ಹಲವರು ಕಳೆದ ವರ್ಷವೇ ಶೇರ್‌ ಮಾಡಿದ್ದರು. ಒಬ್ಬರು ತಮ್ಮ ಟ್ವೀಟ್‌ ಜೊತೆ ಆಗಿನ ಮುಖ್ಯಮಂತ್ರಿಯನ್ನೂ ಟ್ಯಾಗ್‌ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಆಗಿನ ಸೀಎಂ, ಬಿಜೆಪಿ ಅಭ್ಯರ್ಥಿಗಳ ಪಟ್ಟಿಯ ಮೇಲೆ ದನವನ್ನು ಹತ್ಯೆಗೈದ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದಿದ್ದರು.

ಈಸ್ಟ್‌ ಮೋಜೋ ಡಿಜಿಟಲ್‌ ಸುದ್ದಿ ತಾಣದ ವರದಿ ಪ್ರಕಾರ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನಂತರ ಭುಗಿಲೆದ್ದ ಅಸಮಾಧಾನದಿಂದ ಈ ಘಟನೆ ನಡೆದಿದೆ ಎಂದು ವಿವರಿಸಲಾಗಿತ್ತು.

ಕೃಪೆ: Altnews.in

share
Next Story
X