Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಂಬಳ ಪರ ಸುಪ್ರೀಂ ಕೋರ್ಟ್ ತೀರ್ಪು;...

ಕಂಬಳ ಪರ ಸುಪ್ರೀಂ ಕೋರ್ಟ್ ತೀರ್ಪು; ಹೋರಾಟಕ್ಕೆ ಸಂದ ಜಯ: ಅಶೋಕ್‌ ಕುಮಾರ್ ರೈ

18 May 2023 10:21 PM IST
share
ಕಂಬಳ ಪರ ಸುಪ್ರೀಂ ಕೋರ್ಟ್ ತೀರ್ಪು; ಹೋರಾಟಕ್ಕೆ ಸಂದ ಜಯ: ಅಶೋಕ್‌ ಕುಮಾರ್ ರೈ

ಪುತ್ತೂರು: ಕಂಬಳ ಪರ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು ಉಪ್ಪಿನಂಗಡಿ ವಿಜಯವಿಕ್ರಮ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷರಾದ ಪ್ರಸ್ತುತ ಶಾಸಕರಾಗಿರುವ ಅಶೋಕ್ ಕುಮಾರ್ ರೈ ಅವರು ಸುದೀರ್ಘ 12 ವರ್ಷಗಳ ಹೋರಾಟಕ್ಕೆ ಕೊನೆಗೂ ಜಯಸಿಕ್ಕಂತಾಗಿದೆ ಎಂದು ತಿಳಿಸಿದ್ದಾರೆ.

ಕಂಬಳಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಹಿಂದಿನ ಕಾಲದಲ್ಲಿ ರಾಜರುಗಳ ಬೆಂಬಲ ಮತ್ತು ಪ್ರೋತ್ಸಾಹದಿಂದ ಈ ಕ್ರೀಡೆ ನಡೆಯುತ್ತಿತ್ತು. ಹೆಚ್ಚಾಗಿ ನವೆಂಬರ್ ಬಳಿಕ ಮಾರ್ಚ್ ತನಕ ಕರಾವಳಿ ಜಿಲ್ಲೆಗಳಲ್ಲಿ ಈ ಕ್ರೀಡೆ ನಡೆಯುತ್ತದೆ. ಕಂಬಳದಲ್ಲಿ ಎರಡು ಬಲಿಷ್ಟ ಕೋಣಗಳ ಕುತ್ತಿಗೆಗೆ ನೊಗ ಕಟ್ಟಿ ಅವುಗಳನ್ನು ಓಡಿಸಲಾಗುತ್ತದೆ. ಈ ಸಮಯದಲ್ಲಿ ಕೋಣಗಳು ಅತೀ ವೇಗವಾಗಿ ಓಡಲಿಕ್ಕಾಗಿ ಓಡಿಸುವ ವ್ಯಕ್ತಿ ಕೋಣಗಳಿಗೆ ಹಿಂಸಾತ್ಮ ರೀತಿಯಲ್ಲಿ ಪೆಟ್ಟು ಕೊಡುತ್ತಾನೆ ಎಂಂದು ಪ್ರಾಣಿ ದಯಾಸಂಘ (ಪೇಟಾ) ನ್ಯಾಯಾಲಯದಲ್ಲಿ ದಾವೆಯನ್ನು ಹೂಡಿ ಕಂಬಳವನ್ನು ನಿಷೇಧಿಸುವಂತೆ ಆಗ್ರಹಿಸಿತ್ತು. ಪೇಟಾ ನ್ಯಾಯಾಲಯದಲ್ಲಿ ಮಾಡಿರುವ ಆರೋಪಗಳಲ್ಲಿ ಕೋಣಗಳನ್ನು ಹಿಂಸಾತ್ಮಕ ರೀತಿಯಲ್ಲಿ ಎಳೆಯುವಿಕೆ, ಕುಣಿಯುವಿಕೆ ಮತ್ತು ಮೂಗಿನ ಹಗ್ಗಗಳ ಒರಟು ನಿರ್ವಹಣೆ ಮೂಲಕ ಪ್ರಾಣಿಗಳಿಗೆ ಹಿಂಸಾತ್ಮಕ ರೀತಿಯಲ್ಲಿ ಕೌರ್ಯವನ್ನು ಮೆರೆಯಲಾಗಿತ್ತು ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ ದಾವೆಯಲ್ಲಿ ತಿಳಿಸಿತ್ತು. ಕಂಬಳದ ಜೊತೆ ತಮಿಳುನಾಡಿನಲ್ಲಿ ಸುಗ್ಗಿಯ ಹಬ್ಬ ಪೊಂಗಲ್ ಬಳಿಕ ಗೂಳಿಯನ್ನು ಪಳಗಿಸುವ ಜಲ್ಲಿಕಟ್ಟು ವಿರುದ್ಧವೂ ಪೇಟಾ ದಾವೆಯನ್ನು ಹೋಡಿತ್ತು. ಎರಡೂ ಪ್ರಕರಣಗಳು ಸುಪ್ರೀಂ ಕೋರ್ಟ್ ನಲ್ಲಿತ್ತು.

ಪೇಟಾ ಹೂಡಿರುವ ದಾವೆಯ ವಿರುದ್ಧ ಕಂಬಳದ ಪರವಾಗಿ ಉಪ್ಪಿನಂಗಡಿ ವಿಜಯ ವಿಕ್ರಮ ಜೋಡುಕರೆ ಕಂಬಲ ಸಮಿತಿ ಅಧ್ಯಕ್ಷರಾದ , ಪ್ರಸ್ತುತ ಪುತ್ತೂರು ಶಾಸಕರಾಗಿರುವ ಅಶೋಕ್‍ ಕುಮಾರ್ ರೈಯವರು ಪೇಟಾ ವಿರುದ್ಧ ನ್ಯಾಯಾಲಯದಲ್ಲಿ ದಾವೆಯನ್ನು ಹೂಡಿ ಕಂಬಳ ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾಗಿದ್ದು ಇದರಲ್ಲಿ ಯಾವುದೇ ರೀತಿಯ ಪ್ರಾಣಿ ಹಿಂಸೆಯಾಗುತ್ತಿಲ್ಲ. ಕಂಬಳದ ಬಗ್ಗೆ ಪೇಟಾ ಮಾಡಿರುವ ಆರೋಪಗಳು ನ್ಯಾಯಬದ್ಧತೆಯಿಂದ ಕೂಡಿಲ್ಲ ಎಂದು ಕಂಬಳ ಪರ ವಕೀಲರು ನ್ಯಾಯಾಲಯದಲ್ಲಿ ವಾದಮಂಡಿಸುವ ಮೂಲಕ ಕಂಬಳದಲ್ಲಿ ಪ್ರಾಣಿ ಹಿಂಸೆಯಿಲ್ಲ ಎಂಬುದನ್ನು ಸಾಬೀತುಪಡಿಸುವಲ್ಲಿ ಯಸಶ್ವಿಯಾಗಿದ್ದರು. ಇದೀಗ ಕಂಬಳ ಸಮಿತಿ ಅಧ್ಯಕ್ಷರಾದ ಅಶೋಕ್ ರೈಯವರ ಏಕಾಂಗಿ ಹೋರಾಟಕ್ಕೆ ಜಯ ದೊರಕಿದ್ದು ಕಂಬಳ ಪರವಾಗಿ ದೇಶದ ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿದೆ. ಮುಂದಿನ ದಿನಗಳಲ್ಲಿ ಕಂಬಳ ಯಾವುದೇ ಅಡ್ಡಿ ಆತಂಕಗಳಿಲ್ಲದೆ ನಡೆಸಬಹುದಾಗಿದೆ.

ಹೋರಾಟಕ್ಕೆ ಸಂದ ಜಯ: ಅಶೋಕ್ ರೈ

ಕಂಬಳದ ವಿರುದ್ಧ ಪೇಟಾ ನ್ಯಾಯಾಲಯದಲ್ಲಿ ದಾವೆಯನ್ನು ಹೂಡಿದಾಗ ಅದರ ವಿರುದ್ಧ ನಾನು ಸುಪ್ರೀಂ ಕೋರ್ಟ್ನಲ್ಲಿ ಕಾನೂನು ಹೋರಾಟವನ್ನು ನಡೆಸಿದ್ದೆ. ಕಂಬಳ ಸಮಿತಿಗಳ ಪರವಾಗಿ ತಾನು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದು ಕಂಬಳ ಕೂಟಕ್ಕೆ ಪ್ರಾಚೀನ ಇತಿಹಾಸವಿದೆ. ಧಾರ್ಮಿಕ ಪರಂಪರೆ ಇದೆ, ಕಂಬಳದಲ್ಲಿ ಕೋಣಗಳಿಗೆ ಹಿಂಸೆಯಾಗುವುದಿಲ್ಲ, ಮಕ್ಕಳಂತೆ ಕೋಣಗಳನ್ನು ಸಾಕಿ ಸಲಹಲಾಗುತ್ತಿದೆ ಆದ್ದರಿಂದ ಕಂಬಳ ಕೂಟಕ್ಕೆ ನಿಷೇಧ ಹೇರಬಾರದು. ಎಂದಿನಂತೆ ಕಂಬಳ ಕೂಟ ಆಯೋಜನೆಗೆ ಅವಕಾಶ ಮಾಡಿಕೊಡಬೇಕು ಎಂದು ನ್ಯಾಯಾಲಯದ ಮೂಲಕ ಮನವಿಯನ್ನು ಮಾಡಿದ್ದೆ. ನನ್ನ ಸತತ 12 ವರ್ಷಗಳ ಹೋರಾಟಕ್ಕೆ ತೀರ್ಪು ನಮ್ಮ ಪರ ಬಂದಿದೆ. ಇದು ತನಗೆ ಅತೀವ ಸಂತಸವನ್ನು ತಂದಿದೆ ಎಂದು  ಉಪ್ಪಿನಂಗಡಿ ವಿಜಯವಿಕ್ರಮ ಕಂಬಳ ಸಮಿತಿ ಅಧ್ಯಕ್ಷರೂ, ಶಾಸಕರೂ ಆಗಿರುವ ಅಶೋಕ್ ಕುಮಾರ್ ರೈ ಕೋಡಿಂಬಾಡಿ ತಿಳಿಸಿದ್ದಾರೆ.

share
Next Story
X