Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಕ್ರಮ ಮರಳು ದಂಧೆಕೋರರು ನನ್ನ ಸೋಲಿನಲ್ಲಿ...

ಅಕ್ರಮ ಮರಳು ದಂಧೆಕೋರರು ನನ್ನ ಸೋಲಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ: ರಮಾನಾಥ ರೈ

"ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಪುಟಿದೇಳಲಿದೆ"

19 May 2023 8:43 PM IST
share
ಅಕ್ರಮ ಮರಳು ದಂಧೆಕೋರರು ನನ್ನ ಸೋಲಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ: ರಮಾನಾಥ ರೈ
"ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಪುಟಿದೇಳಲಿದೆ"

ಬಂಟ್ವಾಳ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾಂಗ್ರೆಸ್ ಸೋತಿದೆ ಎಂದು ಪಕ್ಷದ ಕಾರ್ಯಕರ್ತರು ಯಾರೂ ಯಾವುದೇ ಕಾರಣಕ್ಕೂ ದೃತಿಗೆಡಬೇಕಾಗಿಲ್ಲ. ರಾಜ್ಯದಲ್ಲಿ ಬಹುಮತದ ಸರಕಾರ ಬಂದಿದೆ. ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ ಭರವಸೆ ನೀಡಿದರು.

ಶುಕ್ರವಾರ ಬೆಳಿಗ್ಗೆ ಬಿ.ಸಿ. ರೋಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇವೆ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಪುಟಿದೇಳಲಿದೆ ಎಂದರು. 

ಈ ಹಿಂದೆ ಸರಕಾರ ನಡೆಸಿದ್ದ ವೇಳೆ ಪಕ್ಷದ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಶೇ. 99 ಭರವಸೆಗಳನ್ನು ಈಡೇರಿಸಿದ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗುತ್ತಿದ್ದಾರೆ. ಅದೇ ರೀತಿ ರಾಜ್ಯದಲ್ಲಿ ಪಕ್ಷವನ್ನು ಮುನ್ನಡೆಸಿ ಬಹುಮತದ ಗೆಲುವಿಗೆ ಸಹಕರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಪಮುಖ್ಯಂತ್ರಿ ಆಗುತ್ತಿದ್ದಾರೆ, ನಮಗೆ ಇದರಷ್ಟು ಸಂತೋಷದ ವಿಚಾರ ಬೇರೊಂದಿಲ್ಲ. ಇವರಿಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸಮಸ್ತ ಕಾರ್ಯಕರ್ತರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ ಎಂದರು.

ಬಿಜೆಪಿ ಪಕ್ಷ ತನ್ನ ಅಧಿಕಾರದ ಅವಧಿಯಲ್ಲಿ 10 ಶೇಕಡಾ ಕೂಡಾ ಭರವಸೆಗಳನ್ನು ಈಡೇರಿಸಿಲ್ಲ. ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ  ಯಾರಿಗೂ ಸಂದೇಹ ಬೇಡ, ಬಿಜೆಪಿಯ ಹಾಗೆ ಕಾಂಗ್ರೆಸ್ ಯಾವತ್ತೂ  ವಚನಭ್ರಷ್ಟ ಆಗಲಾರದು. ವಚನಭ್ರಷ್ಟ ಖ್ಯಾತಿ ಏನಿದ್ದರೂ ಬಿಜೆಪಿಗೆ ಸಲ್ಲುತ್ತದೆ ಎಂದರು. 

ರಮಾನಾಥ ರೈ ಕ್ಷೇತ್ರದಲ್ಲಿ ಗೆದ್ದರೆ ಅಕ್ರಮಗಳಿಗೆ ಅವಕಾಶ ಇಲ್ಲ ಎಂದು ಅಕ್ರಮ ಮರಳು ದಂಧೆಕೋರರು ಗ್ರಾಮ-ಗ್ರಾಮಕ್ಕೆ ಹಣ ಹಂಚುವ ಮೂಲಕ ನನ್ನ ಸೋಲಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದಕ್ಕೆ ಕೆಲವೊಂದು  ಹಿರಿಯ ಅಧಿಕಾರಿಗಳ ಸಹಕಾರ ಕೂಡಾ ಇದೆ ಎಂದು ಆರೋಪಿಸಿದ ರಮಾನಾಥ ರೈ ನಾಮಕಾವಸ್ಥೆ ಪ್ರಗತಿಪರ ಕೃಷಿಕರು ಎಂದೇಳಿಕೊಂಡು ವ್ಯಾಪಾರ ವಹಿವಾಟು ನಡೆಸುವವರು ಅಕ್ರಮ ದುಡ್ಡಿನ ಬಲದಿಂದ ನನ್ನನ್ನು ವಾಮಮಾರ್ಗದಿಂದ ಸೋಲಿಸಿದ್ದಾರೆ, ಸಮಾಜ ಸೇವೆ ನನ್ನ ಕಸುಬು, ಸಮಾಜಕ್ಕಾಗಿಯೇ ನಾನು ಬದುಕಿದ್ದೇನೆ, ನಾನು ಎಲ್ಲಿಂದಲೋ ಬಂದು ಇಲ್ಲಿ ಚುನಾವಣೆಗೆ ನಿಂತು ವ್ಯಾಪಾರ-ಉದ್ದಿಮೆ ಮಾಡಿದವಲ್ಲ, ಆದರೆ ಕೆಲವರು ಸಮಾಜ ಸೇವೆಯ ಹೆಸರಿನಲ್ಲಿ ದಂಧೆ ಮಾಡುವವರಿದ್ದಾರೆ ಎಂದು  ಪರೋಕ್ಷವಾಗಿ ಬಂಟ್ವಾಳ ಶಾಸಕರ ವಿರುದ್ದ ವಾಗ್ದಾಳಿ ನಡೆಸಿದರು. 

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ನಡೆಸಲಿದ್ದು ನನ್ನ ಅವಧಿಯಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ಬಾಕಿಯಾದ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪ್ರಯತ್ನ ಮಾಡುತ್ತೇನೆ. ನಾನು ಯಾವತ್ತೂ, ಯಾವುದೇ ಕಾರಣಕ್ಕೂ ರಾಜಕೀಯ ನಿವೃತ್ತಿ ಮಾಡುವುದೇ ಇಲ್ಲ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದೇನೆ ಎಂಬುದನ್ನು ಕೆಲವರು ರಾಜಕೀಯ ನಿವೃತ್ತಿ ಎಂದು ತಪ್ಪಾಗಿ ಅರ್ಥೈಸಿಕೊಂಡು ನನಗೆ ಅನೇಕ ಕರೆ-ಸಂದೇಶಗಳ ಮೂಲಕ ಸೇವೆ ಮುಂದುವರಿಕೆಗೆ ಆಗ್ರಹಿಸಿದ್ದಾರೆ. ಅವರ ಪ್ರೀತಿಗೆ ನಾನು ಅಭಾರಿಯಾಗಿದ್ದೇನೆ. ನನ್ನ ಬದುಕಿನ ಸಂತೋಷವೇ ಜನರ ಸೇವೆಯಾಗಿದೆ. ಕಾಂಗ್ರೆಸ್ ಪಕ್ಷ ನನಗೆ ತಾಯಿಗೆ ಸಮಾನವಾಗಿದೆ. ಹೀಗಿರುತ್ತಾ ರಾಜಕೀಯದಿಂದ ಹಾಗೂ ಜನರ ಸೇವೆಯಿಂದ ನಾನು ಯಾವತ್ತೂ ನಿವೃತ್ತಿ ಆಗುವುದಿಲ್ಲ. ಪಕ್ಷದ ಕೆಲಸದಿಂದ ಯಾವತ್ತೂ ದೂರ ಆಗುವುದೂ ಇಲ್ಲ. ಪಕ್ಷದ ಹೈಕಮಾಂಡ್ ನ ಆದೇಶ ಪಾಲನೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡು ಬರುತ್ತೇನೆ ಎಂದರು. 

ಕ್ಷೇತ್ರದ ಜನರೇ ನನಗೆ ಸರ್ವಸ್ವ, ಕ್ಷೇತ್ರದ ಜನರನ್ನು ನಾನು ನನ್ನ ಕುಟುಂಬದ ಸದಸ್ಯರಂತೆ ಕಂಡಿದ್ದೇನೆ. ರಾಜಕೀಯದ, ಸೇವೆಯ ಹೆಸರಿನಲ್ಲಿ ನಾನು ಯಾವತ್ತೂ ಕಮಿಷನ್ ದಂಧೆ ಮಾಡಿಲ್ಲ. ಆರ್ಥಿಕ ಸಂಪನ್ನನಾಗಿ ನಾನು ರಾಜಕೀಯ ಮಾಡಿಲ್ಲ. ಕಷ್ಟದಿಂದ ರಾಜಕೀಯ ಮಾಡಿದ್ದೇನೆ. ಹದಿಮೂರು ವರ್ಷ ಮಂತ್ರಿಯಾಗಿದ್ದರೂ ಹಣ ಮಾಡುವ ಗೋಜಿಗೆ ನಾನು ಹೋಗಿಲ್ಲ. ಕುಟುಂಬ ನೀಡಿದ ಜಮೀನಿನಲ್ಲಿದ್ದುಕೊಂಡು ಸೇವೆ ಮಾಡಿದ್ದೇನೆ ಎಂದ ರೈ, ದೇಶದಲ್ಲೇ ಕಾಂಗ್ರೆಸ್ ಸೋತಾಗ ದಕ್ಷಿಣ ಕನ್ನಡ ಜಿಲ್ಲೆಯ ಜನ ಕಾಂಗ್ರೆಸ್ ಕೈ ಹಿಡಿದಿದ್ದರು. ಮತ್ತೆ ಇತಿಹಾಸ ಮರುಕಳಿಸಲಿದೆ. ಭೂಮಸೂದೆ ಕಾನೂನು ಸಾಕಷ್ಟು ಪರಿಣಾಮ ಬೀರಿದ್ದು ಜಿಲ್ಲೆಯಲ್ಲಿ. ಹೆಚ್ಚು ನಿವೇಶನ ಕೊಟ್ಟ, ಹಕ್ಕುಪತ್ರ ಕೊಟ್ಟದ್ದು ಎಲ್ಲವೂ ಜಿಲ್ಲೆಯ ಇತಿಹಾಸ. ಹೆಚ್ಚಿನ ಕಾಂಗ್ರೆಸ್ ಯೋಜನೆಗಳ ಫಲಾನುಭವಿಗಳು ಜಿಲ್ಲೆಯಲ್ಲಿದ್ದಾರೆ ಎಂದು ರಮಾನಾಥ ರೈ ಹೇಳಿದರು. 

ಈ ಸಂದರ್ಭ ಕೆಪಿಸಿಸಿ ಸದಸ್ಯರುಗಳಾದ ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪಕ್ಷ ಪ್ರಮುಖರುಗಳಾದ ಬಿ ಪದ್ಮಶೇಖರ ಜೈನ್, ಬಿ.ಎಂ. ಅಬ್ಬಾಸ್ ಅಲಿ, ಮಾಯಿಲಪ್ಪ ಸಾಲ್ಯಾನ್, ಸುದರ್ಶನ್ ಜೈನ್, ಇಬ್ರಾಹಿಂ ನವಾಝ್ ಬಡಕಬೈಲು, ಸುರೇಶ್ ಜೋರಾ, ಸದಾಶಿವ ಬಂಗೇರ, ಸುಭಾಶ್ಚಂದ್ರ ಶೆಟ್ಟಿ, ಬಿ. ಮೋಹನ್, ಜಗದೀಶ್ ಕೊಯಿಲ,  ಮೊದಲಾದವರು ಜೊತೆಗಿದ್ದರು.

share
Next Story
X