Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದಾನಿ ಗುಂಪು ಶೇರು ಮಾರುಕಟ್ಟೆಯಲ್ಲಿ...

ಅದಾನಿ ಗುಂಪು ಶೇರು ಮಾರುಕಟ್ಟೆಯಲ್ಲಿ ಹಸ್ತಕ್ಷೇಪ ಮಾಡಿರುವುದಕ್ಕೆ ಪುರಾವೆಯಿಲ್ಲ: ಸುಪ್ರೀಂ ಕೋರ್ಟ್ ಸಮಿತಿಯ ವರದಿ

19 May 2023 9:53 PM IST
share
ಅದಾನಿ ಗುಂಪು ಶೇರು ಮಾರುಕಟ್ಟೆಯಲ್ಲಿ ಹಸ್ತಕ್ಷೇಪ ಮಾಡಿರುವುದಕ್ಕೆ ಪುರಾವೆಯಿಲ್ಲ: ಸುಪ್ರೀಂ ಕೋರ್ಟ್ ಸಮಿತಿಯ ವರದಿ

ಹೊಸದಿಲ್ಲಿ, ಮೇ 19: ಅದಾನಿ ಗುಂಪು ಶೇರು ಮಾರುಕಟ್ಟೆಯಲ್ಲಿ ಹಸ್ತಕ್ಷೇಪ ಮಾಡಿ ತನ್ನ ಶೇರುಗಳ ಬೆಲೆಯನ್ನು ಹೆಚ್ಚಿಸಿಕೊಂಡಿದೆ ಎನ್ನುವ ಆರೋಪಕ್ಕೆ ಮೇಲ್ನೋಟಕ್ಕೆ ಕಾಣುವ ಪುರಾವೆಯಿಲ್ಲ ಎಂದು ಅದಾನಿ ಗುಂಪು ನಡೆಸಿದೆಯೆನ್ನಲಾದ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನೇಮಿಸಿರುವ ಸಮಿತಿಯು ಹೇಳಿದೆ.

ಸಮಿತಿಯು ಮೇ 6ರಂದು ತನ್ನ ವರದಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿತ್ತು ಹಾಗೂ ಅದನ್ನು ಶುಕ್ರವಾರ ಬಹಿರಂಗಪಡಿಸಲಾಗಿದೆ.

ಬಿಲಿಯಾಧೀಶ ಗೌತಮ್ ಅದಾನಿಯ ಉದ್ಯಮ ಗುಂಪು ‘‘ಕಾರ್ಪೊರೇಟ್ ಇತಿಹಾಸದಲ್ಲೇ ಅತಿ ದೊಡ್ಡ ವಂಚನೆಯೊಂದನ್ನು ನಡೆಸುತ್ತಿದೆ’’ ಎಂಬುದಾಗಿ ಅಮೆರಿಕದ ಕಂಪೆನಿ ಹಿಂಡನ್‌ಬರ್ಗ್‌ ರಿಸರ್ಚ್‌ ತನ್ನ ಜನವರಿ 24ರ ವರದಿಯಲ್ಲಿ ಆರೋಪಿಸಿತ್ತು. ಅದರ ಆರೋಪಗಳ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಮಾರ್ಚ್ ನಲ್ಲಿ ಈ ಪರಿಣತ ಸಮಿತಿಯನ್ನು ರಚಿಸಿತ್ತು.

ಅದಾನಿ ಗುಂಪು ತನ್ನ ಕಂಪೆನಿಗಳ ಲಾಭದ ಬಗ್ಗೆ ತಪ್ಪು ಲೆಕ್ಕಗಳನ್ನು ನೀಡುತ್ತಿದೆ, ತೆರಿಗೆಮುಕ್ತ ದೇಶಗಳನ್ನು ತೆರಿಗೆ ವಂಚನೆ ಮತ್ತು ಕಪ್ಪುಹಣ ವನ್ನು ಬಿಳುಪು ಮಾಡಲು ಬಳಸುತ್ತಿದೆ ಎಂಬುದಾಗಿ ಹಿಂಡನ್ಬರ್ಗ್ ರಿಸರ್ಚ್ ಆರೋಪಿಸಿತ್ತು. ಈ ಆರೋಪಗಳನ್ನು ಅದಾನಿ ಗುಂಪು ನಿರಾಕರಿಸಿತ್ತು. ಆದರೆ, ಗುಂಪಿನ ಕಂಪೆನಿಗಳ ಶೇರುಗಳ ವೌಲ್ಯವು ಭಾರೀ ಪ್ರಮಾಣದಲ್ಲಿ ಕುಸಿದಿದೆ.

ಸುಪ್ರೀಂ ಕೋರ್ಟ್ ನೇಮಿತ ಸಮಿತಿಯ ನೇತೃತ್ವವನ್ನು ಸುಪ್ರೀಂ ಕೋರ್ಟ್ ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಎ.ಎಮ್. ಸಪ್ರೆ ವಹಿಸಿದ್ದಾರೆ. ಭಾರತೀಯ ಸ್ಟೇಟ್ ಬ್ಯಾಂಕ್ ನ ಮಾಜಿ ಅಧ್ಯಕ್ಷ ಒ.ಪಿ. ಭಟ್, ನಿವೃತ್ತ ನ್ಯಾಯಾಧೀಶ ಜೆ.ಪಿ. ದೇವದತ್ತ, ಇನ್ಫೋಸಿಸ್ ಅಧ್ಯಕ್ಷ ನಂದನ್ ನೀಲೇಕಣಿ, ಐಸಿಐಸಿಐ ಬ್ಯಾಂಕ್ ನ ಮಾಜಿ ಮುಖ್ಯಸ್ಥ ಕೆ.ವಿ. ಕಾಮತ್ ಹಾಗೂ ವಕೀಲ ಮತ್ತು ಶೇರು ಮತ್ತು ನಿಯಂತ್ರಣ ವ್ಯವಸ್ಥೆ ಪರಿಣತ ಸೋಮಶೇಖರನ್ ಸುಂದರೇಶನ್ ಸಮಿತಿಯ ಸದಸ್ಯರಾಗಿದ್ದಾರೆ.

ತನಿಖೆಯ ವೇಳೆ, ಕೃತಕ ಶೇರು ವ್ಯವಹಾರ (ಆರ್ಟಿಫೀಶಿಯಲ್ ಟ್ರೇಡಿಂಗ್) ಅಥವಾ ಆಕ್ರಮಣಕಾರಿ ಶೇರು ವ್ಯವಹಾರ (ಅಬ್ಯೂಸಿವ್ ಟ್ರೇಡಿಂಗ್)ಕ್ಕೆ ಪುರಾವೆ ಲಭಿಸಿಲ್ಲ ಎಂದು ಸಮಿತಿ ಹೇಳಿದೆ.

ಸೆಬಿ ವಿಫಲವಾಗಿದೆಯೇ ಎಂದು ತೀರ್ಮಾನಿಸಲು ಸಾಧ್ಯವಾಗಿಲ್ಲ: ಸಮಿತಿ

ಶೇರುಗಳ ಬೆಲೆಗಳಲ್ಲಿ ಅದಾನಿ ಗುಂಪು ಮಾಡಿದೆಯೆನ್ನಲಾಗಿರುವ ಹಸ್ತಕ್ಷೇಪವನ್ನು ತಡೆಯುವಲ್ಲಿ ಭಾರತೀಯ ಶೇರು ವಿನಿಮಯ ಮಂಡಳಿ (ಸೆಬಿ)ಯು ವಿಫಲವಾಗಿದೆಯೇ ಎನ್ನುವುದನ್ನು ತೀರ್ಮಾನಿಸಲು ತನಗೆ ಸಾಧ್ಯವಾಗಿಲ್ಲ ಎಂದು ತನ್ನ ವರದಿಯಲ್ಲಿ ಸುಪ್ರಿಂ ಕೋರ್ಟ್ ನೇಮಿತ ಸಮಿತಿ ತಿಳಿಸಿದೆ.

ತನ್ನ ಕಂಪೆನಿಗಳ ಶೇರುಗಳು ಪಾತಾಳಕ್ಕೆ ಕುಸಿದಾಗ ಚಿಲ್ಲರೆ ಹೂಡಿಕೆದಾರರನ್ನು ಸಂತೈಸಲು ಅದಾನಿ ಗುಂಪು ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅದು ಹೇಳಿದೆ.

‘‘ಜನವರಿ 24ರ ಬಳಿಕ, ಅದಾನಿ ಶೇರುಗಳಲ್ಲಿ ಚಿಲ್ಲರೆ ಹೂಡಿಕೆದಾರರ ಹೂಡಿಕೆಯು ಹಲವು ಪಟ್ಟು ಹೆಚ್ಚಿರುವುದನ್ನು ಅಂಕಿಅಂಶಗಳು ತೋರಿಸಿವೆ. ಗುಂಪು ತೆಗೆದುಕೊಂಡ ಪರಿಹಾರ ಕ್ರಮಗಳು ಅದರ ಶೇರುಗಳ ಮೇಲಿನ ಜನರ ವಿಶ್ವಾಸ ವೃದ್ಧಿಗೆ ಸಹಕಾರಿಯಾಗಿವೆ. ಗುಂಪಿನ ಶೇರುಗಳು ಈಗ ಸ್ಥಿರವಾಗಿವೆ’’ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.

share
Next Story
X