Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೋಟ್ಯಾಂತರ ಜನರ ಜೀವಿತಾವಧಿ ಕಸಿದುಕೊಂಡ...

ಕೋಟ್ಯಾಂತರ ಜನರ ಜೀವಿತಾವಧಿ ಕಸಿದುಕೊಂಡ ಕೋವಿಡ್ ಸೋಂಕು : ವಿಶ್ವಸಂಸ್ಥೆ ವರದಿ

19 May 2023 10:06 PM IST
share
ಕೋಟ್ಯಾಂತರ ಜನರ ಜೀವಿತಾವಧಿ ಕಸಿದುಕೊಂಡ ಕೋವಿಡ್ ಸೋಂಕು : ವಿಶ್ವಸಂಸ್ಥೆ ವರದಿ

ಜಿನೆವಾ, ಮೇ 19: ಕೋವಿಡ್-19 ಸಾಂಕ್ರಾಮಿಕದ ಆರಂಭಿಕ 2 ವರ್ಷಗಳಲ್ಲಿ ಕೋಟ್ಯಾಂತರ ಜನತೆ ಅಕಾಲಿಕವಾಗಿ ಸಾವನ್ನಪ್ಪಿದ್ದರಿಂದ ಸುಮಾರು 337 ದಶಲಕ್ಷದಷ್ಟು ಜೀವಿತಾವಧಿ ನಷ್ಟವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಶುಕ್ರವಾರ ಹೇಳಿದೆ.

ವಿಶ್ವ ಆರೋಗ್ಯ ಸಂಸ್ಥೆಯ ವಾರ್ಷಿಕ ಅಂಕಿಅಂಶ ವರದಿಯು ಹೃದ್ರೋಗ, ಕ್ಯಾನ್ಸರ್ ಮತ್ತು ಮಧುಮೇಹದಂತಹ ಸಾಂಕ್ರಾಮಿಕವಲ್ಲದ ಕಾಯಿಲೆಗಳಿಂದ ಬೆದರಿಕೆ ಹೆಚ್ಚುತ್ತಿರುವುದನ್ನು ತೋರಿಸಿದೆ. 2022ರವರೆಗಿನ ಅಂಕಿಅಂಶಗಳ ಆಧಾರದಲ್ಲಿ ಹೇಳುವುದಾದರೆ, ಸಾಂಕ್ರಾಮಿಕವು ಜಾಗತಿಕ ವಿನಾಶಕ್ಕೆ ಕಾರಣವಾಗಿದೆ ಮತ್ತು ಅಧಿಕೃತವಾಗಿ ಸುಮಾರು 7 ದಶಲಕ್ಷ ಜನರನ್ನು ಕೊಂದಿದೆ.  ಆದರೆ ಸಾವನ್ನಪ್ಪಿದವರ ನೈಜ ಸಂಖ್ಯೆ 20 ದಶಲಕ್ಷದಷ್ಟಿರಬಹುದು ಎಂದು ವರದಿ ಹೇಳಿದೆ. ಮಿಲಿಯಾಂತರ ಜನರ ಜೀವಿತಾವಧಿಯನ್ನು ಕೊರೋನ ಸೋಂಕು ಹೇಗೆ ಹಠಾತ್ ಅಂತ್ಯಗೊಳಿಸಿದೆ ಎಂಬ ವಿವರ ಈ ವರದಿಯಲ್ಲಿದೆ.

ವಿಶ್ವ ಆರೋಗ್ಯ ಸಂಸ್ಥೆಯು 2020 ಮತ್ತು 2021ರಲ್ಲಿ 5.4 ದಶಲಕ್ಷ ಕೋವಿಡ್ ಸಾವುಗಳನ್ನು ಅಧಿಕೃತವಾಗಿ ದಾಖಲಿಸಿದ್ದರೆ, ವಿಶ್ವದಾದ್ಯಂತದ ಮಾಹಿತಿಯ ಪ್ರಕಾರ ಸುಮಾರು 14.9 ದಶಲಕ್ಷ ಜನತೆ ಈ ಅವಧಿಯಲ್ಲಿ ಕೋವಿಡ್ನಿಂದಾಗಿ ಮೃತಪಟ್ಟಿದ್ದಾರೆ.  ಈ ಎರಡು ವರ್ಷ ಕೋವಿಡ್ ಸಾಂಕ್ರಾಮಿಕದ ಸಮಸ್ಯೆಯಿಂದ ಜಾಗತಿಕವಾಗಿ ಸುಮಾರು 336.8 ದಶಲಕ್ಷ ವರ್ಷಗಳಷ್ಟು ಜೀವಿತಾವಧಿ ನಷ್ಟವಾಗಿದೆ. ಇದು ಪ್ರತೀ ಹೆಚ್ಚುವರಿ ಸಾವಿಗೆ 22 ವರ್ಷಗಳ ಜೀವಿತಾವಧಿ ಕಳೆದುಕೊಂಡಂತೆ ಆಗುತ್ತದೆ' ಎಂದು  ವಿಶ್ವ ಆರೋಗ್ಯಸಂಸ್ಥೆಯ ಅಂಕಿಅಂಶ ಮತ್ತು ವಿಶ್ಲೇಷಣೆ ವಿಭಾಗದ ಸಹಾಯಕ ಮುಖ್ಯಸ್ಥೆ ಸಮೀರಾ ಆಸ್ಮ ಹೇಳಿದ್ದಾರೆ.

ಹಲವು ವರ್ಷಗಳಿಂದ ಸುಧಾರಣೆಯ ಹಾದಿಯಲ್ಲಿದ್ದ ಹಲವು ಆರೋಗ್ಯ ಸಂಬಂಧಿ ಸೂಚಕಗಳನ್ನು ಹಳಿತಪ್ಪಿಸುವಲ್ಲಿ ಸಾಂಕ್ರಾಮಿಕ ಪ್ರಮುಖ ಪಾತ್ರ ವಹಿಸಿದೆ ಎಂದು ವರದಿ ಎಚ್ಚರಿಸಿದೆ. ಈ ಶತಮಾನದ ಆರಂಭದ ಎರಡು ದಶಕಗಳಲ್ಲಿ ಜಾಗತಿಕ ಮಟ್ಟದಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯದಲ್ಲಿ ಗಮನಾರ್ಹ ಸುಧಾರಣೆ ಕಂಡುಬಂದಿದ್ದು ತಾಯಿ ಮತ್ತು ಶಿಶುವಿನ ಸಾವಿನ ಪ್ರಮಾಣ ಅನುಕ್ರಮವಾಗಿ ಮೂರನೇ ಒಂದು ಮತ್ತು ಅರ್ಧದಷ್ಟು ಕಡಿಮೆಯಾಗಿತ್ತು. ಎಚ್ಐವಿ, ಕ್ಷಯ ಮತ್ತು ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳ ಪ್ರಮಾಣ, ಸಾಂಕ್ರಾಮಿಕವಲ್ಲದ ರೋಗಗಳಿಂದ ಅಕಾಲಿಕ ಮರಣದ ಪ್ರಕರಣವೂ ಗಮನಾರ್ಹವಾಗಿ ಕಡಿಮೆಯಾಗಿತ್ತು.

2000ನೇ ಇಸವಿಯಲ್ಲಿ ಜಾಗತಿಕ ಜೀವಿತಾವಧಿ 67 ವರ್ಷವಿದ್ದರೆ 2019ಕ್ಕೆ 73 ವರ್ಷಕ್ಕೆ ಏರಿಕೆಯಾಗಿತ್ತು. ಆದರೆ ಸಾಂಕ್ರಾಮಿಕದ ಆಘಾತ ಈ ಎಲ್ಲಾ ಸಾಧನೆಗಳನ್ನೂ ಮಣ್ಣುಗೂಡಿಸಿದೆ. ಉತ್ತಮ ಗುಣಮಟ್ಟದ ಆರೋಗ್ಯ ರಕ್ಷಣೆ, ದಿನನಿತ್ಯದ ಪ್ರತಿರಕ್ಷಣೆಗಳು ಮತ್ತು ಆರ್ಥಿಕ ರಕ್ಷಣೆಯ ಲಭ್ಯತೆಯಲ್ಲಿ ಇದ್ದ ಅಸಮಾನತೆ ಮತ್ತಷ್ಟು ವ್ಯಾಪಕಗೊಂಡಿತು ಮತ್ತು ಮಲೇರಿಯಾ ಮತ್ತು ಕ್ಷಯರೋಗದ ಪ್ರಕರಣ ಕ್ರಮೇಣ ಹೆಚ್ಚಲು ಕಾರಣವಾಯಿತು ಎಂದು ವರದಿ ಹೇಳಿದೆ.

ಜಾಗತಿಕ ಮಟ್ಟದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ ಕಂಡುಬಂದರೂ, ಪ್ರತೀ ವರ್ಷ ಸಾಂಕ್ರಾಮಿಕವಲ್ಲದ ರೋಗಗಳಿಂದ ಸಾವನ್ನಪ್ಪುವವರ ಪ್ರಮಾಣ ಹೆಚ್ಚುತ್ತಾ ಹೋಗುತ್ತಿದೆ. 2000ನೇ ಇಸವಿಯಲ್ಲಿ ಜಾಗತಿಕವಾಗಿ ಸಾಂಕ್ರಾಮಿಕವಲ್ಲದ ರೋಗಗಳಿಂದ ಆದ ಸಾವಿನ ಪ್ರಮಾಣ ಸುಮಾರು 61% ಇದ್ದರೆ, 2019ರ ವೇಳೆ ಇದು 74%ಕ್ಕೆ ತಲುಪಿದೆ. ಈ ಪ್ರವೃತ್ತಿ ಹೀಗೆಯೇ ಮುಂದುವರಿದರೆ, ಶತಮಾನದ ಮಧ್ಯಭಾಗದ ವೇಳೆಗೆ 90 ದಶಲಕ್ಷ ವಾರ್ಷಿಕ ಸಾವುಗಳಲ್ಲಿ ಸುಮಾರು 86%ದಷ್ಟು ಸಾಂಕ್ರಾಮಿಕವಲ್ಲದ ರೋಗಗಳಿಂದ ಸಂಭವಿಸುವ ಸಾಧ್ಯತೆಯಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವರದಿ ಎಚ್ಚರಿಸಿದೆ.

`ವರದಿಯು ಸಾಂಕ್ರಾಮಿಕವಲ್ಲದ ರೋಗಗಳ ಅಪಾಯಗಳ ಬಗ್ಗೆ ಸ್ಪಷ್ಟ ಸಂದೇಶ ರವಾನಿಸಿದೆ. ಈ ಆವಿಷ್ಕಾರಗಳು ಸುಸ್ಥಿರ ಅಭಿವೃದ್ಧಿಯ ಗುರಿಗಳ ಕಡೆಗೆ ಹಿಂತಿರುಗಲು ಆರೋಗ್ಯ ಮತ್ತು ಆರೋಗ್ಯ ವ್ಯವಸ್ಥೆಗಳ ಹೂಡಿಕೆಯಲ್ಲಿ ಗಣನೀಯ ಹೆಚ್ಚಳದ ಅಗತ್ಯವನ್ನು ತೋರಿಸುತ್ತದೆ' ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೋಸ್ ಅಧನಾಮ್ ಘೆಬ್ರಯೇಸಸ್ ಹೇಳಿದ್ದಾರೆ.

share
Next Story
X