Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್ ಧ್ವಜಮೆರವಣಿಗೆಯಲ್ಲಿ...

ಇಸ್ರೇಲ್ ಧ್ವಜಮೆರವಣಿಗೆಯಲ್ಲಿ ಫೆಲೆಸ್ತೀನೀಯರ ಮೇಲೆ ದಾಳಿ: ವರದಿ

19 May 2023 10:19 PM IST
share
ಇಸ್ರೇಲ್ ಧ್ವಜಮೆರವಣಿಗೆಯಲ್ಲಿ ಫೆಲೆಸ್ತೀನೀಯರ ಮೇಲೆ ದಾಳಿ: ವರದಿ

ರಮಲ್ಲಾ, ಮೇ 19: ಗುರುವಾರ ಇಸ್ರೇಲಿಯನ್ನರು ನಡೆಸಿದ ಧ್ವಜಮೆರವಣಿಗೆ ಸಂದರ್ಭ ಜೆರುಸಲೇಂನಲ್ಲಿ ಸಾವಿರಾರು ಇಸ್ರೇಲಿ ವಸಾಹತುಗಾರರು ಸೇರಿದ್ದು  ಓಲ್ಡ್ ಸಿಟಿಯಲ್ಲಿ ಫೆಲೆಸ್ತೀನ್ ಪ್ರಜೆಗಳತ್ತ ಕಲ್ಲು ತೂರಾಟ ನಡೆದಿದೆ ಎಂದು ವರದಿಯಾಗಿದೆ.

ಪೂರ್ವ ಜೆರುಸಲೇಂ ನಗರವನ್ನು ಇಸ್ರೇಲ್ ವಶಪಡಿಸಿಕೊಂಡ ದಿನದ ವಾರ್ಷಿಕ ದಿನವಾದ ಮೇ 18ರಂದು ಪೂರ್ವ ಜೆರುಸಲೇಂನಿಂದ ದಮಾಸ್ಕಸ್ ಗೇಟ್ ಪ್ರದೇಶದವರೆಗೆ ಧ್ವಜ ಮೆರವಣಿಗೆ ನಡೆದಿದ್ದು ಇದರಲ್ಲಿ ರಾಷ್ಟ್ರೀಯ ಭದ್ರತಾ ಸಚಿವ ಬೆನ್ಗ್ವಿರ್ ಸೇರಿದಂತೆ ಹಲವು ಸಚಿವರು, ಉನ್ನತ ಅಧಿಕಾರಿಗಳು ಪಾಲ್ಗೊಂಡಿದ್ದರು. ಸುಮಾರು 1,200ಕ್ಕೂ ಅಧಿಕ ಜನರು ಅಲ್-ಅಕ್ಸಾ ಮಸೀದಿಯ ಆವರಣಕ್ಕೆ ನುಗ್ಗಿ ಇಸ್ರೇಲಿ ಧ್ವಜವನ್ನು ಬೀಸಿ ಘೋಷಣೆ ಕೂಗಿದರು.

ಡೋಲು, ವಾದ್ಯಗಳ ಹಿಮ್ಮೇಳದೊಂದಿಗೆ ನೃತ್ಯ ಮಾಡುತ್ತಾ ತೆರಳಿದ ಮೆರವಣಿಗೆಗೆ ಇಸ್ರೇಲ್ ಪೊಲೀಸರು ಭದ್ರತೆ ಒದಗಿಸಿದ್ದರು. ಓಲ್ಡ್ ಸಿಟಿಯಲ್ಲಿ ಫೆಲೆಸ್ತೀನ್ ಪ್ರಜೆಗಳ ಬಗ್ಗೆ ಅವಹೇಳನಕಾರಿ ಘೋಷಣೆ ಕೂಗಿದರಲ್ಲದೆ ಅವರತ್ತ ಕಲ್ಲೆಸೆದರು. ದಮಾಸ್ಕಸ್ ಗೇಟ್ನ ಬಳಿಯಿದ್ದ ಮಾಧ್ಯಮ ಸಿಬಂದಿಗಳತ್ತ ದೊಣ್ಣೆಗಳನ್ನು ಬೀಸಿದರು. ವೆಸ್ಟ್ಬ್ಯಾಂಕ್ ಮತ್ತು ಪೂರ್ವ ಜೆರುಸಲೇಂ ನಗರಗಳ ಮೇಲೆ ಇಸ್ರೇಲ್ ಸಾರ್ವಭೌಮತ್ವ ಸ್ಥಾಪನೆಯಾಗಬೇಕು ಎಂದವರು ಆಗ್ರಹಿಸಿದರು.

ಜೆರುಸಲೇಂ ಮತ್ತು ದಮಾಸ್ಕಸ್ ಗೇಟ್ ಪ್ರದೇಶದಲ್ಲಿ ಭದ್ರತೆಗೆ ನಿಯೋಜಿತರಾಗಿದ್ದ ಸುಮಾರು 3,200 ಪೊಲೀಸರು ಅಲ್ಲಿನ ಫೆಲೆಸ್ತೀನ್ ನಿವಾಸಿಗಳನ್ನು ಬಲವಂತವಾಗಿ ಸ್ಥಳಾಂತರಿಸಿದರು. ಕೆಲವರನ್ನು ಬಂಧಿಸಿ ಕರೆದೊಯ್ದರು. ಸುಲ್ತಾನ್ ಸುಲೇಮಾನ್, ನಬ್ಲೂಸ್ ಮತ್ತು ಅಲ್-ಮುಸ್ರಾರ ರಸ್ತೆಗಳಲ್ಲಿ ಸಂಚಾರವನ್ನು ನಿರ್ಬಂಧಿಸಿದರು.

ಪೂರ್ವ ಜೆರುಸಲೇಂನಲ್ಲಿ 3,50,000ಕ್ಕೂ ಅಧಿಕ ಪೆಲೆಸ್ತೀನೀಯರು ವಾಸಿಸುತ್ತಿದ್ದು ಇವರನ್ನು ಪ್ರಜೆಗಳು ಎಂದು ಒಪ್ಪಿಕೊಳ್ಳದ ಇಸ್ರೇಲ್, ನಿವಾಸಿಗಳು ಎಂದು ಕರೆಯುತ್ತಿದೆ.

ಅರಬ್ಬರ ವಿರುದ್ಧ ದ್ವೇಷಪೂರಿತ ಘೋಷಣೆಗೆ ಅಮೆರಿಕ ಖಂಡನೆ

ಗುರುವಾರ ಇಸ್ರೇಲಿ ಪ್ರದರ್ಶನಕಾರರು ನಡೆಸಿದ ಧ್ವಜ ಮೆರವಣಿಗೆಯಲ್ಲಿ ಅರಬ್ಬರ ವಿರುದ್ಧ ದ್ವೇಷಪೂರಿತ ಘೋಷಣೆ ಕೂಗಿರುವುದನ್ನು ಅಮೆರಿಕ ಖಂಡಿಸಿದೆ.

ಜೆರುಸಲೇಂನಲ್ಲಿ ನಡೆದ ಮೆರವಣಿಗೆ ಸಂದರ್ಭ ಅರಬ್ಬರ ವಿರುದ್ಧ ದ್ವೇಷಪೂರಿತ ಮತ್ತು ಜನಾಂಗೀಯ ನಿಂದನೆಯ ಪ್ರಕರಣವನ್ನು ಅಮೆರಿಕ ನಿಸ್ಸಂದಿಗ್ಧವಾಗಿ ವಿರೋಧಿಸುತ್ತದೆ' ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲರ್ ಟ್ವೀಟ್ ಮಾಡಿದ್ದಾರೆ.

share
Next Story
X