Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುತ್ತಿಗೆ ರಾಷ್ಟ್ರಪತಿಗಳ ಹೆಸರಿನಲ್ಲಿದೆ...

ಗುತ್ತಿಗೆ ರಾಷ್ಟ್ರಪತಿಗಳ ಹೆಸರಿನಲ್ಲಿದೆ ಎಂಬ ಮಾತ್ರಕ್ಕೆ ಕೇಂದ್ರವು ಕಾನೂನಿಂದ ವಿನಾಯಿತಿ ಪಡೆಯುವಂತಿಲ್ಲ: ಸುಪ್ರೀಂ

21 May 2023 9:09 PM IST
share
ಗುತ್ತಿಗೆ ರಾಷ್ಟ್ರಪತಿಗಳ ಹೆಸರಿನಲ್ಲಿದೆ ಎಂಬ ಮಾತ್ರಕ್ಕೆ ಕೇಂದ್ರವು ಕಾನೂನಿಂದ ವಿನಾಯಿತಿ ಪಡೆಯುವಂತಿಲ್ಲ: ಸುಪ್ರೀಂ

ಹೊಸದಿಲ್ಲಿ,ಮೇ 21: ಗುತ್ತಿಗೆಯು ರಾಷ್ಟ್ರಪತಿಗಳ ಹೆಸರಿನಲ್ಲಿದೆ ಎಂಬ ಮಾತ್ರಕ್ಕೆ ಅದಕ್ಕೆ ಸಂಬಂಧಿಸಿದ ಕಾನೂನು ನಿಬಂಧನೆಗಳಿಂದ ಕೇಂದ್ರ ಸರಕಾರವು ವಿನಾಯಿತಿಯನ್ನು ಪಡೆಯಲು ಸಾಧ್ಯವಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ಸ್ಪಷ್ಟಪಡಿಸಿದೆ.

ಟೆಂಡರ್ ಗೆ ಸಂಬಂಧಿಸಿದ ವಿವಾದದಲ್ಲಿ ಸಂಸ್ಥೆಯಿಂದ ಮಧ್ಯಸ್ಥಗಾರರ ನೇಮಕ ಕುರಿತು ಕೇಂದ್ರದ ವಿರುದ್ಧ ಗ್ಲೋಕ್-ಏಶ್ಯಾ ಪೆಸಿಫಿಕ್ ಲಿ.ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಕೈಗೆತ್ತಿಕೊಂಡಿದ್ದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಸಂವಿಧಾನ ಪೀಠವು ಈ ತೀರ್ಪನ್ನು ನೀಡಿದೆ.

ಗ್ಲೋಕ್-ಏಶ್ಯಾ ಪೆಸಿಫಿಕ್ ಲಿ.ಪಿಸ್ತೂಲುಗಳ ಪೂರೈಕೆಗಾಗಿ ಕೇಂದ್ರ ಗೃಹ ಸಚಿವಾಲಯದೊಂದಿಗೆ ಒಪ್ಪಂದವನ್ನು ಮಾಡಿಕೊಂಡಿತ್ತು. ಆದರೆ ಬ್ಯಾಂಕ್ ಗ್ಯಾರಂಟಿಯನ್ನು ಅನುಷ್ಠಾನಗೊಳಿಸುವ ಕುರಿತು ವಿವಾದವುಂಟಾದ ಬಳಿಕ ಕಂಪನಿಯು ಜುಲೈನಲ್ಲಿ ಮಧ್ಯಸ್ಥಿಕೆಯನ್ನು ಕೋರಿ ನೋಟಿಸ್ ಅನ್ನು ನೀಡಿತ್ತು.

ಗೃಹ ಕಾರ್ಯದರ್ಶಿಗಳು ನೇಮಕಗೊಳಿಸುವ ಕಾನೂನು ಸಚಿವಾಲಯದ ಅಧಿಕಾರಿಯೋರ್ವರ ಮಧ್ಯಸ್ಥಿಕೆಗೆ ಮಾತ್ರ ವಿವಾದವನ್ನು ಒಪ್ಪಿಸಬೇಕು ಎನ್ನುವುದನ್ನು ಕಡ್ಡಾಯಗೊಳಿಸಿರುವ ಗುತ್ತಿಗೆಯ ಷರತ್ತನ್ನು ಕೇಂದ್ರವು ಉಲ್ಲೇಖಿಸಿತ್ತು. ಕಾನೂನು ಸಚಿವಾಲಯದ ಅಧಿಕಾರಿಯನ್ನು ಮಧ್ಯಸ್ಥಗಾರರನ್ನಾಗಿ ನೇಮಕಗೊಳಿಸಬೇಕೇಬ ಒಪ್ಪಂದದಲ್ಲಿನ ನಿಬಂಧನೆಯನ್ನು ಗ್ಲೋಕ್ ಪ್ರಶ್ನಿಸಿತ್ತು.

ಸರಕಾರವು ಮಧ್ಯಸ್ಥಗಾರನಾಗಿ ಆಯ್ಕೆ ಮಾಡುವ ವ್ಯಕ್ತಿಯು ‘ನಿಷ್ಪಕ್ಷಪಾತ ಮತ್ತು ಸ್ವತಂತ್ರ’ ಆಗಿರಬೇಕು ಹಾಗೂ ಸರಕಾರದೊಂದಿಗೆ ಹಿಂದೆ ಅಥವಾ ಪ್ರಸ್ತುತ ಯಾವುದೇ ವೃತ್ತಿಪರ ಸಂಬಂಧಗಳನ್ನು ಹೊಂದಿರಬಾರದು ಎಂದು ಸರ್ವೋಚ್ಚ ನ್ಯಾಯಾಲಯವು ಶುಕ್ರವಾರ ವಿಚಾರಣೆ ಸಂದರ್ಭ ತಿಳಿಸಿತು.

ಗ್ಲೋಕ್ ರಾಷ್ಟ್ರಪತಿಗಳೊಂದಿಗೆ ಗುತ್ತಿಗೆ ಒಪ್ಪಂದವನ್ನು ಮಾಡಿಕೊಂಡಿರುವುದರಿಂದ ಇದು ಇತರ ಪ್ರಕರಣಗಳಿಗಿಂತ ಭಿನ್ನವಾಗಿದೆ ಎಂದು ಸರಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ವಾದಿಸಿದರು. ಆದರೆ ಪೀಠವು ಈ ವಾದವನ್ನು ಒಪ್ಪಿಕೊಳ್ಳಲಿಲ್ಲ.

ಸಂವಿಧಾನದ ವಿಧಿ 299 (ರಾಷ್ಟ್ರಪತಿಗಳು ಅಥವಾ ರಾಜ್ಯಪಾಲರ ಹೆಸರಿನಲ್ಲಿ ಕೇಂದ್ರ ಅಥವಾ ರಾಜ್ಯ ಮಾಡಿಕೊಂಡಿರುವ ಒಪ್ಪಂದಗಳು) ಶಾಸನಬದ್ಧ ಕಾನೂನುಗಳನ್ನು ಉಲ್ಲಂಘಿಸುವ ಅಧಿಕಾರವನ್ನು ಸರಕಾರಕ್ಕೆ ನೀಡುವುದಿಲ್ಲ ಎಂದೂ ಸರ್ವೋಚ್ಚ ನ್ಯಾಯಾಲಯವು ಹೇಳಿತು.

ನ್ಯಾಯಾಲಯವು ವಿವಾದವನ್ನು ಇತ್ಯರ್ಥಗೊಳಿಸಲು ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಾಧೀಶರಾದ ನ್ಯಾ.ಇಂದು ಮಲೋತ್ರಾ ಅವರನ್ನು ಏಕೈಕ ಮಧ್ಯಸ್ಥಗಾರರನ್ನಾಗಿ ನೇಮಕಗೊಳಿಸಿತು.

share
Next Story
X