Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾನೂನು ಸುವ್ಯವಸ್ಥೆ ಹದಗೆಡುವ ಕಾರಣಕ್ಕೆ...

ಕಾನೂನು ಸುವ್ಯವಸ್ಥೆ ಹದಗೆಡುವ ಕಾರಣಕ್ಕೆ ಮುಸ್ಲಿಂ ಯುವಕ ಹಾಗೂ ಬಿಜೆಪಿ ನಾಯಕನ ಪುತ್ರಿಯ ವಿವಾಹ ಮುಂದೂಡಿಕೆ

22 May 2023 1:42 PM IST
share
ಕಾನೂನು ಸುವ್ಯವಸ್ಥೆ ಹದಗೆಡುವ ಕಾರಣಕ್ಕೆ ಮುಸ್ಲಿಂ ಯುವಕ ಹಾಗೂ ಬಿಜೆಪಿ ನಾಯಕನ ಪುತ್ರಿಯ ವಿವಾಹ ಮುಂದೂಡಿಕೆ

ಡೆಹ್ರಾಡೂನ್: ಬಿಜೆಪಿ ನಾಯಕರು ಹಾಗೂ ಸ್ಥಳೀಯ ಹಿಂದೂ ಸಂಘಟನೆಗಳ ವಿರೋಧ ವ್ಯಕ್ತವಾಗಿರುವುದರಿಂದ ಮುಂದಿನ ವಾರ ನಡೆಯಬೇಕಿದ್ದ ಮುಸ್ಲಿಂ ಯುವಕನೊಂದಿಗೆ ನಡೆಯಬೇಕಿದ್ದ ಉತ್ತರಾಖಂಡ ಬಿಜೆಪಿ ಪಕ್ಷದ ಹಿಂದೂ ನಾಯಕನ ಪುತ್ರಿಯ ವಿವಾಹವನ್ನು ಮುಂದೂಡಲಾಗಿದೆ ಎಂದು The Telegraph ವರದಿ ಮಾಡಿದೆ.

ಶನಿವಾರ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿರುವ ಪೌರಿ ನಗರ ಪಾಲಿಕೆ ಅಧ್ಯಕ್ಷರಾಗಿರುವ ಯಶ್‌ಪಾಲ್ ಬೇನಂ ಈ ಕುರಿತು ಪ್ರಕಟಿಸಿದ್ದಾರೆ.

ಇದೇ ಮೇ 28ರಂದು ಬೇನಂ ಅವರ ಪುತ್ರಿ ಮೋನಿಕಾ ಮುಸ್ಲಿಂ ಯುವಕ ಮೋನಿಸ್ ಎಂಬುವವರೊಂದಿಗೆ ವಿವಾಹವಾಗಬೇಕಿತ್ತು.

ಆದರೆ, ಈ ವಿವಾಹ ಆಮಂತ್ರಣವು ಅಂತರ್ಜಾಲ ತಾಣದಲ್ಲಿ ಹಂಚಿಕೆಯಾದ ನಂತರ ತೀವ್ರ ಟೀಕೆ ಹಾಗೂ ನಿಂದನೆಗೆ ಗುರಿಯಾಗಿತ್ತು. ಕೆಲವು ಮಂದಿ ಈ ವಿವಾಹವನ್ನು ಲವ್ ಜಿಹಾದ್ ಎಂದೂ ಕಿಡಿ ಕಾರಿದ್ದರು. ಹೀಗಾಗಿ, ವಿವಾಹದ ಕಾರಣಕ್ಕೆ ಸ್ಥಳೀಯ ಆಡಳಿತ ಹಾಗೂ ಪೊಲೀಸರು ಸಮಸ್ಯೆ ಎದುರಿಸುವುದು ನನಗೆ ಬೇಡವಾಗಿದೆ ಎಂದು ಶನಿವಾರ ಬೇನಂ ತಿಳಿಸಿದ್ದರು.

"ನಮ್ಮ ಪಕ್ಷದ ಸದಸ್ಯರೇ ವಿವಾಹದ ಕುರಿತು ವಿವಾದ ಸೃಷ್ಟಿಸಿರುವುದರಿಂದ ನಾನು ವರನ ಪೋಷಕರೊಂದಿಗೆ ಈ ಕುರಿತು ಚರ್ಚಿಸಿದ್ದು, ತಾತ್ಕಾಲಿಕವಾಗಿ ಎಲ್ಲ ವೈವಾಹಿಕ ಕಾರ್ಯಕ್ರಮಗಳನ್ನು ರದ್ದು ಮಾಡಲು ಒಟ್ಟಾಗಿ ತೀರ್ಮಾನಿಸಿದ್ದೇವೆ" ಎಂದು ಅವರು ಹೇಳಿದ್ದಾರೆ.

ಕೆಲವು ಸ್ಥಳೀಯ ಹಿಂದೂ ಸಂಘಟನೆಗಳು ವಿವಾಹದ ದಿನದಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ ಎಂಬ ಸಂಗತಿ ನನಗೆ ತಿಳಿದು ಬಂದಿದೆ ಎಂದೂ ಅವರು ಬಹಿರಂಗಗೊಳಿಸಿದ್ದಾರೆ.

"ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಎರಡೂ ಕುಟುಂಬದವರು ಮೇ 26, 27 ಹಾಗೂ 28ರಂದು ನಡೆಸಲು ಉದ್ದೇಶಿಸಲಾಗಿದ್ದ ವಿವಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳದಿರಲು ನಿರ್ಧರಿಸಿದ್ದೇವೆ. ಮುಂದೇನು ಮಾಡಬೇಕು ಎಂದು ಕೂಡಲೇ ನಿರ್ಧರಿಸುತ್ತೇವೆ" ಎಂದು ಬೇನಂ ತಿಳಿಸಿದ್ದಾರೆ.

share
Next Story
X