Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂಲಗೇಣಿ ಕಾಯಿದೆ ಸಿಂಧುತ್ವ ಎತ್ತಿಹಿಡಿದ...

ಮೂಲಗೇಣಿ ಕಾಯಿದೆ ಸಿಂಧುತ್ವ ಎತ್ತಿಹಿಡಿದ ಹೈಕೋರ್ಟ್

23 May 2023 10:47 PM IST
share
ಮೂಲಗೇಣಿ ಕಾಯಿದೆ ಸಿಂಧುತ್ವ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು, ಮೇ 23: ಉಡುಪಿ ಮತ್ತು ದಕ್ಷಿಣ ಕನ್ನಡದ ಗೇಣಿದಾರರಿಗೆ ಅನುಕೂಲ ಮಾಡಿಕೊಡಲು ರಾಜ್ಯ ಸರಕಾರ ಜಾರಿಗೆ ತಂದಿರುವ ಕರ್ನಾಟಕ ಮೂಲಗೇಣಿ ಅಥವಾ ಒಳಮೂಲಗೇಣಿ ಗೇಣಿದಾರರಿಗೆ ಮಾಲಕತ್ವ ಪ್ರಧಾನ ಮಾಡುವ ಅಧಿನಿಯಮ-2011ರ ಸಿಂಧುತ್ವವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಉಡುಪಿಯ ಅದಮಾರು ಮಠ, ಗಣೇಶ್ ಪೈ ಮತ್ತಿತರರು ಸಲ್ಲಿಸಿದ್ದ 5 ಪ್ರತ್ಯೇಕ ರಿಟ್ ಅರ್ಜಿಗಳನ್ನು ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪುನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಪ್ರಕಟಿಸಿದೆ. ಪೀಠ ತನ್ನ ತೀರ್ಪಿನಲ್ಲಿ ಸಾಮಾಜಿಕ ಅಸಮತೋಲನ ಸರಿಪಡಿಸುವ ನಿಟ್ಟಿನಲ್ಲಿ ಸರಕಾರದ ಕ್ರಮ ನ್ಯಾಯೋಚಿತವಾದದ್ದು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. 

ಅರ್ಜಿದಾರರ ಪರ ವಾದಿಸಿದ್ದ ವಕೀಲರು, ಸೂಕ್ತ ಬೆಲೆ ಪಾವತಿಸಿ ಜಮೀನು ವಶಪಡಿಸಿಕೊಳ್ಳುವುದಕ್ಕೆ ವಿರುದ್ಧವಾಗಿ ಕನಿಷ್ಠ ಬೆಲೆ ಪಾವತಿಸುವ ಮೂಲಕ ಭೂಮಿ ವಶಕ್ಕೆ ಪಡೆಯುತ್ತಿರುವುದು ಕಾನೂನುಬಾಹಿರ. ಇದರಿಂದ ಮೂಲಗಾರರು ಅಥವಾ ಭೂ ಮಾಲಕರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಪೀಠಕ್ಕೆ ತಿಳಿಸಿದ್ದರು.

ಗೇಣಿದಾರರ ಪರ ವಾದಿಸಿದ್ದ ವಕೀಲರ, ಮೂಲಗೇಣಿದಾರರು ತಲೆಮಾರುಗಳಿಂದ ಭೂಮಿಯನ್ನು ಉಳುಮೆ ಮಾಡುತ್ತಾ ಬಂದಿದ್ದು, ಅವರಿಗೆ ಭೂಮಿಯ ಹಕ್ಕು ನೀಡುವುದು ನ್ಯಾಯೋಚಿತ. ಈ ನಿಟ್ಟಿನಲ್ಲಿ ಸರಕಾರ ಜಾರಿಗೊಳಿಸಿರುವ ಕಾಯಿದೆ ಸಿಂಧುವಾಗಿದೆ ಎಂದು ಪೀಠಕ್ಕೆ ಹೇಳಿದ್ದರು. 

ಪ್ರಕರಣವೇನು?: ಸ್ವಾತಂತ್ರ್ಯ ಪೂರ್ವದಲ್ಲಿ ಭೂಕಂದಾಯ ವಸೂಲಿ ಮಾಡುವ ಅಧಿಕಾರವನ್ನು ಬ್ರಿಟಿಷರು ಸ್ಥಳೀಯ ಶ್ರೀಮಂತರು, ಮಠ, ಮಂದಿರ, ಮಸೀದಿ ಮತ್ತು ಚರ್ಚುಗಳಿಗೆ ನೀಡಿದ್ದರು. ಕಾಲಾನಂತರದಲ್ಲಿ ಆ ಭೂಮಿಯ ಕಂದಾಯ ವಸೂಲಿ ಮಾಡಿ, ಮೇಲುಸ್ತುವಾರಿ ನೋಡಿಕೊಳ್ಳುವವರು ಮೂಲದಾರರು/ಭೂ ಮಾಲಕರು ಎನಿಸಿಕೊಂಡಿದ್ದರು. ಕಾಲಾನಂತರದಲ್ಲಿ ಇದೇ ಭೂಮಿಯನ್ನು ತಲೆಮಾರುಗಳಿಂದ ವಾಸ್ತವಿಕವಾಗಿ ಅನುಭವಿಸಿಕೊಂಡು ಬಂದವರು ಮೂಲಗೇಣಿದಾರರು ಎಂದು ಭೂಮಿಯ ಪ್ರಮಾಣ ಪತ್ರದಲ್ಲಿ ನಮೂದಿಸಲಾಗಿತ್ತು.

ಭೂಮಿ ಸ್ವಾಧೀನದಲ್ಲಿದ್ದರೂ ಒಡೆತನವಿಲ್ಲದ ಕಾರಣ ಜಾಗವನ್ನು ಅಭಿವೃದ್ಧಿಪಡಿಸುವುದು ಮೂಲಗೇಣಿದಾರರಿಗೆ ಕಷ್ಟವಾಗಿತ್ತು. ಬ್ಯಾಂಕ್‍ನಿಂದ ಸಾಲ-ಸೌಲಭ್ಯ ದೊರೆಯುತ್ತಿರಲಲ್ಲ. ಹೀಗಾಗಿ, ಅದನ್ನು ಮಾರಾಟ ಮಾಡುವ ಹಕ್ಕೂ ಮೂಲಗೇಣಿದಾರರಿಗೆ ಇಲ್ಲವಾಗಿತ್ತು. ಸಾಕಷ್ಟು ಹೋರಾಟದ ಬಳಿಕ ಮೂಲಗೇಣಿದಾರರಿಗೆ ಜಮೀನಿನ ಪೂರ್ಣ ಮಾಲಕತ್ವ ಮತ್ತು ಮೂಲದಾರರಿಗೆ ನ್ಯಾಯಯುತ ಪರಿಹಾರ ನೀಡುವ ಸಂಬಂಧ ರಾಜ್ಯ ಸರಕಾರ ಕಾಯಿದೆ ಜಾರಿಗೆ ತಂದಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿಗಳನ್ನು ಈಗ ನ್ಯಾಯಾಲಯ ವಜಾ ಮಾಡಿದೆ. 

share
Next Story
X