Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಂತರಿಕ್ಷ ತಲುಪಿದ ಸೌದಿಯ ಮೊದಲ ಮಹಿಳಾ...

ಅಂತರಿಕ್ಷ ತಲುಪಿದ ಸೌದಿಯ ಮೊದಲ ಮಹಿಳಾ ಗಗನಯಾತ್ರಿ ರಯಾನ್ಹಾ ಅಲ್ ಬರಾವಿ

23 May 2023 11:16 PM IST
share
ಅಂತರಿಕ್ಷ ತಲುಪಿದ ಸೌದಿಯ ಮೊದಲ ಮಹಿಳಾ ಗಗನಯಾತ್ರಿ  ರಯಾನ್ಹಾ ಅಲ್ ಬರಾವಿ

 ಹೊಸದಿಲ್ಲಿ,ಮೇ 23: ಪ್ರಪ್ರಥಮ ಅರಬ್ ಮಹಿಳಾ ಗಗನಯಾತ್ರಿ ರಯಾನ್ಹಾ ಅಲ್ ಬರಾವಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್ಎಸ್) ಕ್ಕೆ ಮಂಗಳವಾರ ತಲುಪಿದ್ದಾರೆ.

ಅಮೆರಿಕದಿಂದ ರವಿವಾರದಂದು ಸ್ಪೇಸ್ಎಕ್ಸ್ ಫಾಲ್ಕನ್ 9 ರಾಕೆಟ್ನಿಂದ ಉಡಾವಣೆಗೊಂಡ ಆ್ಯಕ್ಸಿಯೊಮ್ ಸ್ಪೇಸ್ ನ ಎರಡನೇ ಖಾಸಗಿ ಬಾಹ್ಯಾಕಾಶ ಯಾನದಲ್ಲಿ ಪಾಲ್ಗೊಂಡಿರುವ ಇಬ್ಬರು ಅರಬ್ ಬಾಹ್ಯಾಕಾಶ ಯಾತ್ರಿಕರಲ್ಲಿ ರಯಾನ್ಹಾ ಕೂಡಾ ಒಬ್ಬರು.

ಸೌದಿ ಆರೇಬಿಯದಲ್ಲಿ ಜೀವವೈದ್ಯಶಾಸ್ತ್ರ (ಬಯೋ ಮೆಡಿಕಲ್)ದಲ್ಲಿ ವಿಜ್ಞಾನಿಯಾಗಿರುವ ರಯಾನ್ಹಾ ಅವರು ಕಾಂಡಕೋಶ (ಸ್ಟೆಮ್ ಸೆಲ್) ಹಾಗೂ ಸ್ತನದ ಕ್ಯಾನ್ಸರ್ ಬಗ್ಗೆ ಬಾಹ್ಯಾಕಾಶದಲ್ಲಿ ಸಂಶೋಧನೆ ನಡೆಸಲಿದ್ದಾರೆ. ಸೂಕ್ಷ್ಮ ಗುರುತ್ವಾಕರ್ಷಣೆಯಲ್ಲಿ ಮಾನವನ ಪ್ರತಿರಕ್ಷಕ ಜೀವಕೋಶಗಳ ಬಗ್ಗೆ ಅಧ್ಯಯನ ನಡೆಸಲಿದ್ದಾರೆ.

ರಯಾನ್ಹಾ ಅವರು ರಿಯಾದ್ನ ಕಿಂಗ್ ಫೈಸಲ್ ಸ್ಪೆಶಾಲಿಟಿ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ಕಾಂಡಕೋಶ ಹಾಗೂ ಸಂಶೋಧನಾ ಕೇಂದ್ರದ ಲ್ಲಿ ಸಂಶೋಧನಾ ಪ್ರಯೋಗ ತಂತ್ರಜ್ಞೆಯಾಗಿದ್ದಾರೆ.

‘‘ಜಗತ್ತಿನಾದ್ಯಂತದ ಜನತೆಯ ಭವಿಷ್ಯವು ಉಜ್ವಲವಾಗಿದೆ. ನೀವು ದೊಡ್ಡದಾದ ಕನಸೊಂದನ್ನು ಕಾಣುವುದನ್ನು ಇಷ್ಟಪಡುತ್ತೇನೆ. ನಿಮ್ಮ ಮೇಲೆ ನಂಬಿಕೆಯಿರಿಸಿ ಹಾಗೂ ಮಾನವತೆಯಲ್ಲಿ ನಂಬಿಕೆಯಿಡಿ’ ಎಂದು ಬರ್ನಾವಿ ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ಪ್ರವೇಶಿಸುವ ಮುನ್ನ ಪ್ರಸಾರ ಮಾಡಿದ ವಿಡಿಯೋದಲ್ಲಿ ತಿಳಿಸಿದ್ದಾರೆ.

ಸೌದಿಯ ಫೈಟರ್ ಪೈಲಟ್ಆಗಿರುವ ಅಲ್ ಖಾರ್ನಿ ಅವರು ಆ್ಯಕ್ಸಿಯೊಮ್ನ ಬಾಹ್ಯಾಕಾಶಯಾನದಲ್ಲಿ ಪಾಲ್ಗೊಂಡಿರುವ ಇನ್ನೋರ್ವ ಅರಬ್ ಗಗನಯಾತ್ರಿ. ನನಗೆ ಮಾತ್ರವಲ್ಲ ಇಡೀ ಸೌದಿಗೆ ಇದೊಂದು ಐತಿಹಾಸಿಕ ಕ್ಷಣವಾಗಿದೆ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಇಲ್ಲದೆ ಇದ್ದಿದ್ದರೆ ನಾನು ಈ ಸಾಧನೆಯನ್ನು ಮಾಡಲು ಸಾಧ್ಯವಿರುತ್ತಿರಲಿಲ್ಲ’’ ಎಂದು ಅವರು ಹೇಳಿರುವುದಾಗಿ ಅಲ್ ಅರಬಿಯಾ ವರದಿ ಮಾಡಿದೆ.

ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದ ಮಾಜಿ ಗಗನಯಾತ್ರಿ ಪೆಗ್ಗಿ ವಿಟ್ಸನ್, ಅಮೆರಿಕನ್ ಉದ್ಯಮಿ ಜಾನ್ ಶಾಫ್ನರ್ ಅವರು ಆ್ಯಕ್ಸಿಯೊಮ್ನ ಬಾಹ್ಯಾಕಾಶಯಾನದಲ್ಲಿ ಪಾಲ್ಗೊಂಡ ಇತರ ಇಬ್ಬರು ಗನಗಯಾತ್ರಿಕರಾಗಿದ್ದಾರೆ. ಪೆಗ್ಗಿ ವಾಟ್ಸನ್ ಅವರು ನಾಸಾದ ಬಾಹ್ಯಾಕಾಶ ನೌಕೆಗಳ ಮೂಲಕ ಮೂರು ಬಾರಿ ಬಾಹ್ಯಾಕಾಶ ಯಾನ ನಡೆಸಿದ್ದರು.

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಮೂವರು ರಶ್ಯನ್ನರು, ಮೂವರು ಅಮೆರಿಕನ್ನರು ಹಾಗೂ ಓರ್ವ ಯುಎಇನ ಗಗನಯಾತ್ರಿ ಈಗಾಗಲೇ ನೆಲೆಸಿದ್ದಾರೆ.

ಫ್ಲಾರಿಡಾದಲ್ಲಿ ರವಿವಾರ ಸ್ಪೇಸ್ ಎಕ್ಸ್ ರಾಕೆಟ್ ಮೂಲಕ ಉಡಾವಣೆಗೊಂಡ ಆ್ಯಕ್ಸಿಯೊಮ್ ನೌಕೆಯು, 16 ತಾಸುಗಳ ಪ್ರಯಾಣದ ಬಳಿಕ ಭೂಮಿಯಿಂದ 250 ಮೈಲು ಎತ್ತರದ ಕಕ್ಷೆಯಲ್ಲಿ ತಿರುಗುತ್ತಿರವ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣಿಸಿದೆ.

share
Next Story
X