Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೊಬೈಲ್ ಸಂಖ್ಯೆ ನೀಡಲು ಗ್ರಾಹಕರನ್ನು...

ಮೊಬೈಲ್ ಸಂಖ್ಯೆ ನೀಡಲು ಗ್ರಾಹಕರನ್ನು ಒತ್ತಾಯಿಸಬೇಡಿ: ವ್ಯಾಪಾರಿಗಳಿಗೆ ಸರಕಾರ ನಿರ್ದೇಶನ

24 May 2023 3:06 PM IST
share
ಮೊಬೈಲ್ ಸಂಖ್ಯೆ ನೀಡಲು ಗ್ರಾಹಕರನ್ನು ಒತ್ತಾಯಿಸಬೇಡಿ: ವ್ಯಾಪಾರಿಗಳಿಗೆ ಸರಕಾರ ನಿರ್ದೇಶನ

ಹೊಸದಿಲ್ಲಿ, ಮೇ 24: ಕೆಲವು ಸೇವೆಗಳನ್ನು ಒದಗಿಸಲು ತಮ್ಮ ವೈಯಕ್ತಿಕ ಸಂಪರ್ಕ ವಿವರಗಳನ್ನು ನೀಡುವಂತೆ ಗ್ರಾಹಕರನ್ನು ಒತ್ತಾಯಿಸದಂತೆ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯವು ಚಿಲ್ಲರೆ ವ್ಯಾಪಾರಿಗಳಿಗೆ ನಿರ್ದೇಶ ನೀಡಿದೆ.

ಹಲವಾರು ಗ್ರಾಹಕರ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ದೇಶನವನ್ನು ಹೊರಡಿಸಲಾಗಿದೆ. ಅನೇಕ ಚಿಲ್ಲರೆ ವ್ಯಾಪಾರಿಗಳು ತಮ್ಮ ಮೊಬೈಲ್ ಸಂಖ್ಯೆಯನ್ನು ನೀಡಲು ನಿರಾಕರಿಸಿದರೆ ತಮಗೆ ಸೇವೆಗಳನ್ನು ಒದಗಿಸುತ್ತಿಲ್ಲ ಎಂದು ಗ್ರಾಹಕರು ದೂರಿಕೊಂಡಿದ್ದಾರೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತಕುಮಾರ ಸಿಂಗ್ ತಿಳಿಸಿದರು.

ಸುದ್ದಿಗಾರರೊಂದಿಗೆ  ಮಾತನಾಡಿದ ಸಿಂಗ್,ಗ್ರಾಹಕರು ತಮ್ಮ ವೈಯಕ್ತಿಕ ಸಂಪರ್ಕ ವಿವರಗಳನ್ನು ಒದಗಿಸುವವರೆಗೆ ಬಿಲ್ಗಳನ್ನು ಸೃಷ್ಟಿಸಲು ತಮಗೆ ಸಾಧ್ಯವಿಲ್ಲ ಎಂದು ಮಾರಾಟಗಾರರು ಹೇಳುತ್ತಾರೆ. ಇದು ಗ್ರಾಹಕರ ರಕ್ಷಣಾ ಕಾಯ್ದೆಯಡಿ ನ್ಯಾಯಯುತವಲ್ಲದ ಮತ್ತು ನಿರ್ಬಂಧಿತ ವ್ಯಾಪಾರ ಪದ್ಧತಿಯಾಗಿದೆ ಮತ್ತು ಗ್ರಾಹಕರ ಮಾಹಿತಿಗಳನ್ನು ಸಂಗ್ರಹಿಸುವುದರ ಹಿಂದೆ ಯಾವುದೇ ತರ್ಕಬದ್ಧತೆಯಿಲ್ಲ ಎಂದು ಹೇಳಿದರು.

ಖಾಸಗಿತನದ ಕಳವಳವೂ ಇದೆ. ಆದ್ದರಿಂದ ಗ್ರಾಹಕರ ಹಿತಾಸಕ್ತಿ ದೃಷ್ಟಿಯಿಂದ ಈ ಸಮಸ್ಯೆಯನ್ನು ಪರಿಹರಿಸಲು ಚಿಲ್ಲರೆ ಉದ್ಯಮ ಹಾಗೂ ಸಿಐಐ ಮತ್ತು ಫಿಕ್ಕಿಗೆ ಸೂಚಿಸಲಾಗಿದೆ ಎಂದರು.

ಬಿಲ್ ಸೃಷ್ಟಿಸಲು ಗ್ರಾಹಕರು ಚಿಲ್ಲರೆ ವ್ಯಾಪಾರಿಗೆ ತಮ್ಮ ಮೊಬೈಲ್ ಸಂಖ್ಯೆ ನೀಡುವುದು ಭಾರತದಲ್ಲಿ ಕಡ್ಡಾಯವಲ್ಲ. ಆದಾಗ್ಯೂ ವಹಿವಾಟುಗಳನ್ನು ಪೂರ್ಣಗೊಳಿಸಲು ಮೊಬೈಲ್ ಸಂಖ್ಯೆಯನ್ನು ನೀಡುವಂತೆ ಒತ್ತಾಯಿಸುವ ಮೂಲಕ ಚಿಲ್ಲರೆ ವ್ಯಾಪಾರಿಗಳು ಗ್ರಾಹಕರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಹೆಚ್ಚಿನ ಸಂದರ್ಭಗಳಲ್ಲಿ ಮೊಬೈಲ್ ಸಂಖ್ಯೆಯನ್ನು ನೀಡದಿರುವ ಆಯ್ಕೆಯನ್ನು ಗ್ರಾಹಕರಿಗೆ ಒದಗಿಸಲಾಗುತ್ತಿಲ್ಲ.

share
Next Story
X