Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜನಪ್ರಿಯತೆ ಕುಸಿದರೂ ಅಗ್ರಸ್ಥಾನ...

ಜನಪ್ರಿಯತೆ ಕುಸಿದರೂ ಅಗ್ರಸ್ಥಾನ ಕಳೆದುಕೊಳ್ಳದ ಪ್ರಧಾನಿ ಮೋದಿ; ಹೆಚ್ಚಿದ ರಾಹುಲ್ ಜನಪ್ರಿಯತೆ: NDTV ಸಮೀಕ್ಷೆ

24 May 2023 10:33 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಜನಪ್ರಿಯತೆ ಕುಸಿದರೂ ಅಗ್ರಸ್ಥಾನ ಕಳೆದುಕೊಳ್ಳದ ಪ್ರಧಾನಿ ಮೋದಿ; ಹೆಚ್ಚಿದ ರಾಹುಲ್ ಜನಪ್ರಿಯತೆ: NDTV ಸಮೀಕ್ಷೆ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರು ದೇಶದ ಅತ್ಯುನ್ನತ ಹುದ್ದೆಗೆ ಸೂಕ್ತ ಜನಪ್ರಿಯ ನಾಯಕರಾಗಿ ಮುಂದುವರಿದಿದ್ದಾರೆ. ಆದರೆ ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿಯವರ ಜನಪ್ರಿಯತೆ ಹೆಚ್ಚುತ್ತಿರುವುದು ಲೋಕನೀತಿ ಸೆಂಟರ್ ಫಾರ್ ದ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟೀಸ್ (ಸಿಎಸ್‌ಡಿಎಸ್) ಸಹಯೋಗದಲ್ಲಿ ಎನ್‌ಡಿಟಿವಿ ನಡೆಸಿದ ವಿಶೇಷ ಸಮೀಕ್ಷೆಯಿಂದ ದೃಢಪಟ್ಟಿದೆ.

2019 ರಿಂದ 2023ರ ಅವಧಿಯಲ್ಲಿ ಮೋದಿಯವರ ಜನಪ್ರಿಯತೆ ಶೇಕಡ 44 ರಿಂದ 43ಕ್ಕೆ ಇಳಿದಿದ್ದರೆ, ರಾಹುಲ್‌ಗಾಂಧಿಯವರ ಜನಪ್ರಿಯತೆ ಶೇಕಡ 24 ರಿಂದ 27ಕ್ಕೇರಿದೆ.

ಪ್ರಧಾನಿ ಮೋದಿ ಒಂಬತ್ತು ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಮತ್ತು ಮುಂದಿನ ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಈ ಸಮೀಕ್ಷೆ ನಡೆಸಲಾಗಿತ್ತು. ಕಾಂಗ್ರೆಸ್ ವಿರುದ್ಧ ಬಿಜೆಪಿ ಪರಾಭವಗೊಂಡ ಕರ್ನಾಟಕ ವಿಧಾನಸಭಾ ಚುನಾವಣೆ ಬಳಿಕ ಮೇ 10 ರಿಂದ 19ರ ನಡುವೆ 19 ರಾಜ್ಯಗಳಲ್ಲಿ ಸಮೀಕ್ಷೆ ನಡೆದಿತ್ತು.

ಕರ್ನಾಟಕದ ಸೋಲಿನ ಹೊರತಾಗಿಯೂ ಬಿಜೆಪಿ ನೇತೃತ್ವದ ಎನ್‌ಡಿಎ ಕೇಂದ್ರದಲ್ಲಿ ಮೂರನೇ ಬಾರಿ ಅಧಿಕಾರದ ಸೂತ್ರ ಹಿಡಿಯಬೇಕು ಎನ್ನುವುದು ಶೇಕಡ 43ರಷ್ಟು ಮಂದಿಯ ಬಯಕೆ. ಇದನ್ನು ಶೇಕಡ 38ರಷ್ಟು ಮಂದಿ ಒಪ್ಪುವುದಿಲ್ಲ. ಇಂದೇ ಮತದಾನ ನಡೆದರೆ ಬಿಜೆಪಿಯನ್ನು ಬೆಂಬಲಿಸುವುದಾಗಿ ಶೇಕಡ 40ರಷ್ಟು ಮಂದಿ ಹೇಳಿದ್ದರೆ, ಕಾಂಗ್ರೆಸ್ ಪಕ್ಷಕ್ಕೆ ಶೇಕಡ 29ರಷ್ಟು ಮಂದಿ ಒಲವು ತೋರಿದ್ದಾರೆ.

ಬಿಜೆಪಿಯ ಮತಪ್ರಮಾಣ 2019ರಲ್ಲಿ ಶೇಕಡ 37 ಇದ್ದುದು ಶೇಕಡ 39ಕ್ಕೆ ಏರಿದ್ದರೆ, ಕಾಂಗ್ರೆಸ್‌ನ ಜನಪ್ರಿಯತೆ ಈ ಅವಧಿಯಲ್ಲಿ ಶೇಕಡ 19 ರಿಂದ 29ಕ್ಕೇರಿದೆ. ಮೋದಿಯವರನ್ನು ದೇಶದ ಅತ್ಯುನ್ನತ ಹುದ್ದೆಗೆ ಸೂಕ್ತ ವ್ಯಕ್ತಿ ಎಂದು ಶೇಕಡ 43ರಷ್ಟು ಮಂದಿ ಅಭಿಪ್ರಾಯಪಟ್ಟಿದ್ದರೆ, ಅವರ ಎದುರಾಳಿ ರಾಹುಲ್‌ ಗಾಂಧಿ 27ರಷ್ಟು ಜನರ ಒಲವು ಸಂಪಾದಿಸಿದ್ದಾರೆ.

ಉಳಿದಂತೆ ಮಮತಾ ಬ್ಯಾನರ್ಜಿ ಹಾಗೂ ಅರವಿಂದ್ ಕೇಜ್ರಿವಾಲ್ ಶೇಕಡ 4ರಷ್ಟು ಜನರ ಬೆಂಬಲ ಪಡೆದಿದ್ದರೆ, ಅಖಿಲೇಶ್ ಯಾದವ್ ಹಾಗೂ ನಿತೀಶ್ ಕುಮಾರ್ ಪರ ಕ್ರಮವಾಗಿ ಶೇಕಡಾ 3 ಮತ್ತು ಶೇಕಡ 1ರಷ್ಟು ಮಂದಿ ಒಲವು ವ್ಯಕ್ತಪಡಿಸಿದ್ದಾರೆ. ಶೇಕಡ 18ರಷ್ಟು ಮಂದಿ ಇತರರ ಬಗ್ಗೆ ಒಲವು ಹೊಂದಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X