Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2,000 ನೋಟು ವಿನಿಮಯ ಹಲವು ರಾಜ್ಯಗಳಲ್ಲಿ...

2,000 ನೋಟು ವಿನಿಮಯ ಹಲವು ರಾಜ್ಯಗಳಲ್ಲಿ ಆರಂಭ

24 May 2023 10:46 PM IST
share
2,000 ನೋಟು ವಿನಿಮಯ ಹಲವು ರಾಜ್ಯಗಳಲ್ಲಿ ಆರಂಭ

ಹೊಸದಿಲ್ಲಿ, ಮೇ 24: ಹೆಚ್ಚಿನ ಬ್ಯಾಂಕ್ಗಳು ಎಂದಿನಂತೆ ಕಾರ್ಯ ನಿರ್ವಹಿಸಿರುವುದರಿಂದ ಹಾಗೂ 2016ರ ನೋಟು ಅಮಾನ್ಯೀಕರಣದ ಬಳಿಕ ಕಂಡುಬಂದಂತೆ ಹೆಚ್ಚಿನ ಜನಸಂದಣಿ ಇಲ್ಲದೇ ಇದ್ದುದರಿಂದ 2000 ರೂ. ನೋಟು ವಿನಿಮಯ ಮೊದಲ ದಿನವಾದ ಮಂಗಳವಾರ ನಿಧಾನಗತಿಯಲ್ಲಿ ಆರಂಭವಾಯಿತು.

ಆಂಧ್ರಪ್ರದೇಶ, ಕರ್ನಾಟಕ, ಕೇರಳ, ಒಡಿಶಾ ಹಾಗೂ ತೆಲಂಗಾಣದಲ್ಲಿ ನೋಟುಗಳ ವಿನಿಮಯ ನಿಧಾನವಾಗಿ ನಡೆಯಿತು. ಇಲ್ಲಿನ ಜನರು ನೋಟನ್ನು ವಿನಿಮಯ ಮಾಡಿಕೊಳ್ಳಲು ಬ್ಯಾಂಕ್ಗೆ ಆಗಮಿಸಲು ಬಯಸಲಿಲ್ಲ. ದಿಲ್ಲಿ, ಚೆನ್ನೈ, ಹೈದರಾಬಾದ್ ಹಾಗೂ ವಿಜಯವಾಡದ ನಿವಾಸಿಗಳು ನೋಟುಗಳನ್ನು ಪೆಟ್ರೋಲ್ ಪಂಪ್, ಸೂಪರ್ ಮಾರ್ಕೆಟ್ ಹಾಗೂ ಇತರ ಉದ್ಯಮ ಸಂಸ್ಥೆಗಳಲ್ಲಿ ವಿಲೇವಾರಿ ಮಾಡಲು ಪ್ರಯತ್ನಿಸಿದರು. ಯಾವುದೇ ರಾಜ್ಯಗಳಲ್ಲಿ ಅಹಿತರಕರ ಘಟನೆಗಳು ನಡೆದಿರುವ ಬಗ್ಗೆ ವರದಿಯಾಗಿಲ್ಲ. 

ದಿಲ್ಲಿ, ಚೆನ್ನೈ ಹಾಗೂ ಭುನೇಶ್ವರದ ಕೆಲವು ಬ್ಯಾಂಕ್ ಶಾಖೆಗಳಲ್ಲಿ ಗೊಂದಲಗಳು ಉಂಟಾಗಿರುವ ಬಗ್ಗೆ ವರದಿಯಾಗಿದೆ. ನೋಟುಗಳ ವಿನಿಮಯಕ್ಕೆ ಯಾವುದೇ ದಾಖಲೆಗಳ ಅಗತ್ಯ ಇಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟನೆ ನೀಡಿದ್ದರೂ ಗುರುತು ದಾಖಲೆ ಇಲ್ಲದೆ ನೋಟುಗಳನ್ನು ಸ್ವೀಕರಿಸಲು ನಿರಾಕರಿಸಿದ ಆರೋಪದಲ್ಲಿ ದಿಲ್ಲಿಯ ಕೆಲವು ಬ್ಯಾಂಕ್ಗಳಲ್ಲಿ ಸಿಬ್ಬಂದಿ ಹಾಗೂ ಗ್ರಾಹಕರ ನಡುವೆ ತೀವ್ರ ವಾಗ್ವಾದ ನಡೆದ ಬಗ್ಗೆ ವರದಿಯಾಗಿದೆ. ಚೆನ್ನೈಯ ಕೆಲವು ಬ್ಯಾಂಕ್ಗಳು ಕೂಡ ನೋಟುಗಳ ವಿನಿಮಯಕ್ಕೆ ಆಗಮಿಸಿದ ಗ್ರಾಹಕರಲ್ಲಿ ಆಧಾರ್ ಕಾರ್ಡ್ ಹಾಗೂ ಮೊಬೈಲ್ ನಂಬರ್ ಕೇಳಿದೆ. ಇಲ್ಲಿನ ಪೆಟ್ರೋಲ್ ಪಂಪ್ಗಳಲ್ಲಿ ನೋಟುಗಳನ್ನು ಸ್ವೀಕರಿಸಲು ನಿರಾಕರಿಸಿದ ಬಗ್ಗೆ ವ್ಯಾಪಕ ದೂರು ಕೇಳಿ ಬಂದಿವೆ. 

ಆಭರಣ ಅಂಗಡಿಗಳಲ್ಲಿ ಜನಸಂದಣಿ ಕಂಡು ಬರಲಿಲ್ಲ. ಹೆಚ್ಚಿನ ಆಭರಣದ ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ಕೆಲವರು ಹಣವನ್ನು 2000 ರೂ. ನೋಟಿನಲ್ಲಿ ಪಾವತಿಸಿದರು ಎಂದು ತೆಲಂಗಾಣ ಹಾಗೂ ಕರ್ನಾಟಕದ ಕೆಲವು ವಜ್ರೋದ್ಯಮಿಗಳು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಬ್ಯಾಂಕ್ಗಳಿಗಿಂತ ಪೆಟ್ರೋಲ್ ಸ್ಟೇಷನ್, ಜುವೆಲ್ಲರಿ, ಮಾಲ್ ಹಾಗೂ ಸ್ಟೋರ್ಗಳಲ್ಲಿ ನೋಟುಗಳನ್ನು ವಿಲೇವಾರಿ ಮಾಡಿಕೊಳ್ಳಲು ಜನಸಂದಣಿ ಕಂಡು ಬಂತು. ಕೇರಳದಲ್ಲಿ ನೋಟುಗಳ ವಿನಿಮಯ ನಿಧಾನವಾಗಿ ಆರಂಭವಾಯಿತು. 

ಕೆಲವರು ಮಾತ್ರ ಬ್ಯಾಂಕ್ಗಳಿಗೆ ಆಗಮಿಸಿ ನೋಟಗಳನ್ನು ವಿನಿಮಯ ಮಾಡಿಕೊಂಡರು. ಚೆನ್ನೈಯ ಜನವಸತಿ ಪ್ರದೇಶದಲ್ಲಿರುವ ಬ್ಯಾಂಕ್ ಶಾಖೆಗಳಲ್ಲಿ ನೋಟು ವಿನಿಮಯ ಮಾಡಿಕೊಳ್ಳಲು ಕೆಲವೇ ಕೆಲವು ಜನರು ಆಗಮಿಸಿರುವುದರಿಂದ ನಿರ್ಜನವಾಗಿತ್ತು. ಪುರುಸವಲ್ಕಂ,, ವೆಪೆರಿ ಹಾಗೂ ಇತರ ವಾಣಿಜ್ಯ ಪ್ರದೇಶಗಳಲ್ಲಿ ಕಡಿಮೆ ಸಂಖ್ಯೆಯ ಜನರು ಬ್ಯಾಂಕ್ ಶಾಖೆಗಳಿಗೆ ನೋಟು ವಿನಿಮಯ ಹಾಗೂ ಠೇವಣಿ ಮಾಡಲು ಆಗಮಿಸಿದರು. 10ಕ್ಕಿಂತ ಕಡಿಮೆ ಜನರು ಮಾತ್ರ ನೋಟು ವಿನಿಮಯ ಮಾಡಿಕೊಳ್ಳಲು ಬ್ಯಾಂಕ್ಗೆ ಆಗಮಿಸಿದ್ದಾರೆ. 

ಬ್ಯಾಂಕ್ನವರು ಅವರ ಆಧಾರ್ ಕಾರ್ಡ್ ಹಾಗೂ ಗುರುತು ಚೀಟಿಯನ್ನು ಸಂಗ್ರಹಿಸಿದರು. ಇತರ ನಗರಗಳಿಗಿಂತ ಭಿನ್ನವಾಗಿ ದಿಲ್ಲಿಯ ಬ್ಯಾಂಕ್ಗಳಲ್ಲಿ ನೋಟು ವಿನಿಮಯ ಮಾಡಿಕೊಳ್ಳಲು ಹೆಚ್ಚಿನ ಜನರು ಆಗಮಿಸಿದರು. ನೋಟು ವಿನಿಮಯ ಹಾಗೂ ಠೇವಣಿ ಕುರಿತು ಗ್ರಾಹಕರಲ್ಲಿ ಗೊಂದಲಗಳು ಇದ್ದುವು. ಸರಿಯಾದ ಮಾಹಿತಿ ನೀಡದ ಹಾಗೂ ಗುರುತು ಚೀಟಿ ಆಗ್ರಹಿಸಿದ ಹಿನ್ನೆಲೆಯಲ್ಲಿ ಕೆಲವು ಶಾಖೆಗಳಲ್ಲಿ ಗ್ರಾಹಕರು ಹಾಗೂ ಸಿಬ್ಬಂದಿ ನಡುವೆ ಘರ್ಷಣೆ ನಡೆಯಿತು. ಆಂಧ್ರಪ್ರದೇಶದಲ್ಲಿ ನೋಟು ವಿನಿಮಯ ಮಾಡಿಕೊಳ್ಳಲು ಜನ ನಿಬಿಡತೆ ಕಂಡು ಬರಲಿಲ್ಲ. ಜನರು ಪೆಟ್ರೋಲ್ ಪಂಪ್, ಆಭರಣದ ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ನೋಟುಗಳನ್ನು ವಿಲೇವಾರಿ ಮಾಡಲು ಪ್ರಯತ್ನಿಸಿದರು.

share
Next Story
X