Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅತ್ಯಾಚಾರ ಪ್ರಕರಣದಲ್ಲಿ ಸ್ವಿಸ್‌...

ಅತ್ಯಾಚಾರ ಪ್ರಕರಣದಲ್ಲಿ ಸ್ವಿಸ್‌ ನ್ಯಾಯಾಲಯದಿಂದ ದೋಷಮುಕ್ತಗೊಂಡ ಖ್ಯಾತ ಶಿಕ್ಷಣ ತಜ್ಞ ತಾರೀಖ್‌ ರಮದಾನ್‌

25 May 2023 2:24 PM IST
share
ಅತ್ಯಾಚಾರ ಪ್ರಕರಣದಲ್ಲಿ ಸ್ವಿಸ್‌ ನ್ಯಾಯಾಲಯದಿಂದ ದೋಷಮುಕ್ತಗೊಂಡ ಖ್ಯಾತ ಶಿಕ್ಷಣ ತಜ್ಞ ತಾರೀಖ್‌ ರಮದಾನ್‌

ಹೊಸದಿಲ್ಲಿ: ಖ್ಯಾತ ಸ್ವಿಸ್‌ ಶಿಕ್ಷಣ ತಜ್ಞ ಹಾಗೂ ಇಸ್ಲಾಮಿಕ್‌ ವಿದ್ವಾಂಸ ತಾರೀಖ್‌ ರಮದಾನ್‌ ಅವರು ಅತ್ಯಾಚಾರ ಪ್ರಕರಣದಲ್ಲಿ ದೋಷಮುಕ್ತರಾಗಿದ್ದಾರೆ. ಜಿನೇವಾದ ಹೋಟೆಲ್‌ನಲ್ಲಿ 2008ರಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಗೈದ ಆರೋಪ ಅವರ ಮೇಲೆ ಹೊರಿಸಲಾಗಿತ್ತು. ಈಗ ದೋಷಮುಕ್ತಗೊಂಡ ಅವರಿಗೆ 151000 ಸ್ವಿಸ್‌ ಫ್ರಾಂಕ್‌ (167000 ಡಾಲರ್)‌ ಪರಿಹಾರ ನೀಡುವಂತೆ ಸ್ವಿಸ್‌ ಕ್ಯಾಂಟನ್‌ ಆಫ್‌ ಜಿನೀವಾ ಆದೇಶಿಸಿದೆ.

ನ್ಯಾಯಾಲಯದ ಆದೇಶವನ್ನು ಪ್ರಶ್ನಿಸುವುದಾಗಿ ದೂರುದಾರೆ ಪರ ವಕೀಲರು ತಿಳಿಸಿದ್ದಾರೆ.

ಇಸ್ಲಾಂ ಸ್ವೀಕರಿಸಿದ್ದ ಸ್ವಿಸ್‌ ಮಹಿಳೆಯೊಬ್ಬರು ರಮಾದಾನ್‌ ತಮ್ಮ ಮೇಲೆ ಅಕ್ಟೋಬರ್‌ 28, 2008 ರಂದು ಅತ್ಯಾಚಾರಗೈದಿದ್ದಾರೆಂದು ಆರೋಪಿಸಿದ್ದರು.

ಇಸ್ಲಾಂ ಕುರಿತು ವಿವಿಧ ಬ್ರಿಟಿಷ್‌ ಸರಕಾರಗಳಿಗೆ ಸಲಹೆ ನೀಡುತ್ತಿದ್ದ 60 ವರ್ಷದ ರಮದಾನ್‌ ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿಸುತ್ತಲೇ ಬಂದಿದ್ದರಲ್ಲದೆ ತಾವು ಯಾವತ್ತೂ ಯಾರ ಮೇಲೂ ಲೈಂಗಿಕ ಹಲ್ಲೆ ನಡೆಸಿಲ್ಲ ಎಂದಿದ್ದರು.

ಅವರು ಯುನಿವರ್ಸಿಟಿ ಆಫ್‌ ಆಕ್ಸ್‌ಫರ್ಡ್‌ನಲ್ಲಿ ಸಮಕಾಲೀನ ಇಸ್ಲಾಮಿಕ್‌ ಅಧ್ಯಯನದ ಪ್ರೊಫೆಸರ್‌ ಆಗಿ ಸೇವೆ ಸಲ್ಲಿಸುತ್ತಿದ್ದರು. ಅತ್ಯಾಚಾರ ಆರೋಪ ಅವರ ಮೇಲೆ ಹೊರಿಸಲಾದ ನಂತರ ಅವರು 2017ರಿಂದ ಕರ್ತವ್ಯಕ್ಕೆ ಗೈರಾಗಿದ್ದರು. ಆಗ ಅವರ ವಿರುದ್ಧ ಫ್ರೆಂಚ್‌ ಮಹಿಳೆಯರ ಮೇಲೆ ಅತ್ಯಾಚಾರಗೈದ ಆರೋಪ ಹೊರಿಸಲಾಗಿತ್ತು. ಇದು ಫ್ರಾನ್ಸ್‌ನ  'ಮೀಟೂ' ಆಂದೋಲನದ ಪರಿಣಾಮ ಎಂದೇ ತಿಳಿಯಲಾಗಿತ್ತು. ಈ ಆರೋಪಗಳನ್ನೂ ಅವರು ನಿರಾಕರಿಸಿದ್ದರು. ಇದರ ವಿಚಾರಣೆ ಇನ್ನಷ್ಟೇ ನಡೆಯಬೇಕಿದೆ.

ಅನಾರೋಗ್ಯದ ಕಾರಣ ಅವರು 2021ರಲ್ಲಿ ಆಕ್ಸ್‌ಫರ್ಡ್‌ ವಿವಿ ಸೇವೆಯಿಂದ ಹಿಂದೆ ಸರಿದಿದ್ದರು.

ತಾನು ಪುಸ್ತಕ ಸಹಿ ಕಾರ್ಯಕ್ರಮ ಹಾಗೂ ನಂತರ ಬೇರೊಂದು ಸಮ್ಮೇಳನದಲ್ಲಿ ರಮಾದಾನ್‌ ಅವರನ್ನು ಭೇಟಿಯಾಗಿದ್ದಾಗಿ ಅವರ ವಿರುದ್ಧ ಆರೋಪ ಹೊರಿಸಿದ್ದ ಸ್ವಿಸ್‌ ಮಹಿಳೆ ಹೇಳಿದ್ದರು. ಅತ್ಯಾಚಾರದ ಮೂರು ಆರೋಪಗಳು ಹಾಗೂ ಲೈಂಗಿಕ ಸಂಪರ್ಕಕ್ಕಾಗಿ ಬಲವಂತ ಪಡಿಸಿದ್ದ ಒಂದು ಆರೋಪದಿಂದ ಅವರೀಗ ದೋಷಮುಕ್ತಗೊಂಡಿದ್ದಾರೆ.

ಫ್ರೆಂಚ್‌ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಅವರನ್ನು 2018ರಲ್ಲಿ ಬಂಧಿಸಲಾಗಿತ್ತಾದರೂ ಒಂಬತ್ತು ತಿಂಗಳ ನಂತರ ಬಿಡುಗಡೆಗೊಂಡಿದ್ದರು. ಆದರೆ  ದೇಶ ಬಿಟ್ಟು ತೆರಳದಂತೆ ಸೂಚಿಸಲಾಗಿತ್ತು.

share
Next Story
X