Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸರಕಾರಕ್ಕೆ 9 ವರ್ಷ: ದೇಶ...

ಕೇಂದ್ರ ಸರಕಾರಕ್ಕೆ 9 ವರ್ಷ: ದೇಶ ವೈಫಲ್ಯದಿಂದ ತುಂಬಿ ಹೋಗಿದೆ ಎಂದು ಕಾಂಗ್ರೆಸ್ ವಾಗ್ದಾಳಿ

'ಈಗ ಜನರು ಬೇಸತ್ತಿದ್ದಾರೆ. ಇದಕ್ಕೆ ಕರ್ನಾಟಕ ಚುನಾವಣೆಯೇ ಸಾಕ್ಷಿ'

26 May 2023 12:50 PM IST
share
ಕೇಂದ್ರ ಸರಕಾರಕ್ಕೆ 9 ವರ್ಷ: ದೇಶ ವೈಫಲ್ಯದಿಂದ ತುಂಬಿ ಹೋಗಿದೆ ಎಂದು ಕಾಂಗ್ರೆಸ್ ವಾಗ್ದಾಳಿ
'ಈಗ ಜನರು ಬೇಸತ್ತಿದ್ದಾರೆ. ಇದಕ್ಕೆ ಕರ್ನಾಟಕ ಚುನಾವಣೆಯೇ ಸಾಕ್ಷಿ'

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಒಂಬತ್ತು ವರ್ಷಗಳ ಆಡಳಿತದಿಂದ ದೇಶವು  ವೈಫಲ್ಯ ಹಾಗೂ  ದುಃಖದಿಂದ ತುಂಬಿ ಹೋಗಿದೆ ಎಂದು ಕಾಂಗ್ರೆಸ್ ಪಕ್ಷ ಇಂದು ವಾಗ್ದಾಳಿ ನಡೆಸಿದೆ.

ಸರಕಾರವು ತನ್ನ ಭರವಸೆಗಳನ್ನು ಈಡೇರಿಸಲಿಲ್ಲ.  ಈ ಒಂಬತ್ತು ವರ್ಷಗಳಲ್ಲಿ ಹಣದುಬ್ಬರ, ನಿರುದ್ಯೋಗ ಹಾಗೂ "ಸರ್ವಾಧಿಕಾರಿ" ನಿರ್ಧಾರಗಳ ಭಾರವನ್ನು ಜನರು ಅನುಭವಿಸಬೇಕಾಯಿತು.  ಜನರು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ), ನೋಟು ಅಮಾನ್ಯೀಕರಣದ ಹೊರೆಗಳನ್ನು ಅನುಭವಿಸಬೇಕಾಯಿತು ಎಂದು ಕಾಂಗ್ರೆಸ್  ಆರೋಪಿಸಿದೆ.

"ಇಂದು ಮೋದಿ ಸರಕಾರ 9 ವರ್ಷಗಳನ್ನು ಪೂರೈಸಿದೆ. ಇದು '9 ವರ್ಷಗಳ ವೈಫಲ್ಯ'. ಮೋದಿ ಸರಕಾರ, ಜುಮ್ಲಾಗಳ ಆಧಾರದ ಮೇಲೆ ಅಧಿಕಾರಕ್ಕೆ ಬಂದಿದೆ. ಅದು ಒಂದೇ ಒಂದು ಭರವಸೆಯನ್ನು ಸಹ ಈಡೇರಿಸಲಿಲ್ಲ.   2022 ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆ. 2022 ರ ವೇಳೆಗೆ ಎಲ್ಲರಿಗೂ ಮನೆ ನೀಡುವ ಭರವಸೆ. ಕಪ್ಪು ಹಣ ತರುವ ಮೂಲಕ 15 ಲಕ್ಷ ರೂ. ನೀಡುವುದಾಗಿ ಭರವಸೆ. ಪ್ರತಿ ವರ್ಷ 2 ಕೋಟಿ ಉದ್ಯೋಗಗಳ ಭರವಸೆ" ನೀಡಿತ್ತು. ಒಂದನ್ನೂ ಈಡೇರಿಸದೆ ದಿನ ದೂಡುತ್ತಿದೆ’’  ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

‘’ಪ್ರಧಾನಿ ಮೋದಿಯವರು ತಮ್ಮ ಭರವಸೆಗಳನ್ನು ಈಡೇರಿಸಿಲ್ಲ, ಆದರೆ ಅವರ ಅಜ್ಞಾನದಿಂದ ದೇಶವನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ.  ನೋಟು ಅಮಾನ್ಯೀಕರಣವು ಆರ್ಥಿಕತೆಯನ್ನು ನಾಶಪಡಿಸಿತು, ಜನರು ಬ್ಯಾಂಕ್  ಮುಂದೆ ಸರದಿ ಸಾಲಲ್ಲಿ ನಿಂತು  ಸತ್ತರು. ಆ ಭಯಾನಕ ದೃಶ್ಯವನ್ನು ಯಾರು ಮರೆಯಲು ಸಾಧ್ಯ?" ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಗಬ್ಬರ್ ಸಿಂಗ್ ಟ್ಯಾಕ್ಸ್ (ಜಿಎಸ್‌ಟಿ) ಯಿಂದ ವ್ಯಾಪಾರಿಗಳು ನಾಶಗೊಂಡಿದ್ದಾರೆ. ಕೇಂದ್ರದ ಅಗ್ನಿವೀರ್ ಯೋಜನೆಯು ಈ ದೇಶದ ಯುವಕರ ಕನಸುಗಳನ್ನು ನುಚ್ಚುನೂರು ಮಾಡಿದೆ ಎಂದೂ ಕಾಂಗ್ರೆಸ್ ಆರೋಪಿಸಿದೆ.

ಮೋದಿ ನೇತೃತ್ವದ ಬಿಜೆಪಿ ಸರಕಾರವು ವಿಪಕ್ಷ ನಾಯಕರ ಮೇಲೆ ಫೆಡರಲ್ ಏಜೆನ್ಸಿಗಳನ್ನು ಛೂ ಬಿಡುತ್ತಿದೆ. ದನಿ ಎತ್ತುವವರನ್ನು ದಮನ ಮಾಡಿ, ತುಳಿದು, ಜೈಲಿಗೆ ಹಾಕಿ, ಬುಲ್ಡೋಝ್ ಮಾಡುತ್ತದೆ. ಈಡಿ, ಸಿಬಿಐ ಭಯ ತೋರಿಸಿ. ತನ್ನ ಸರಕಾರ ಇಲ್ಲದಿದ್ದರೆ ಹಣದ ಆಧಾರದಲ್ಲಿ ಅಧಿಕಾರ ಖರೀದಿಸಿ ಪ್ರಜಾಪ್ರಭುತ್ವವನ್ನು ಕೊಂದು ಹಾಕಿದೆ ಎಂದು ಕಾಂಗ್ರೆಸ್ ಆರೋಪಿಸಿದೆ..

"ಇವು 9 ವರ್ಷಗಳ ವೈಫಲ್ಯ. ಈಗ ಜನರು ಬೇಸತ್ತಿದ್ದಾರೆ. ಇದಕ್ಕೆ ಕರ್ನಾಟಕ ಚುನಾವಣೆಯೇ ಸಾಕ್ಷಿಯಾಗಿದೆ, ಅಲ್ಲಿ ಸಾರ್ವಜನಿಕರು ನೇರವಾಗಿ ಪ್ರಧಾನಿ ಮೋದಿ ಹಾಗೂ  ಅವರ ಭ್ರಷ್ಟ ಸರ್ಕಾರವನ್ನು ತಿರಸ್ಕರಿಸಿದರು. ಈ ಅಸಮಾಧಾನದ ಅಲೆಯು ದಕ್ಷಿಣದಿಂದ ಆರಂಭವಾಗಿದೆ.  ಅದು ಇಡೀ ದೇಶ ನುಂಗಿ ಹಾಕುತ್ತದೆ. ಸಾರ್ವಜನಿಕರು ಕಾಯುತ್ತಿದ್ದಾರೆ, ಅದಕ್ಕೆ ತಕ್ಕ ಉತ್ತರವನ್ನು ನೀಡುತ್ತಾರೆ" ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ನರೇಂದ್ರ ಮೋದಿ ಅವರು ಮೇ 26, 2014 ರಂದು ಮೊದಲ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು ಹಾಗೂ  ಮೇ 30, 2019 ರಂದು ಎರಡನೇ ಅವಧಿಗೆ ಪ್ರಧಾನಿ ಹುದ್ದೆಗೆ ಏರಿದರು.

share
Next Story
X