ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ: ಶಾಲೆಗಳ ಪ್ರಾರಂಭ 1 ವಾರ ಮುಂದೂಡಿಕೆಗೆ ಶಾಸಕರಿಂದ ಸಿಎಂಗೆ ಮನವಿ

ಉಡುಪಿ, ಮೇ 26: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಸಹಿತ ಕರಾವಳಿ ಪ್ರದೇಶ ಹಾಗೂ ರಾಜ್ಯದ ವಿವಿಧೆಡೆ ಕುಡಿಯುವ ನೀರಿನ ತೀವ್ರ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಆರಂಭವನ್ನು ಒಂದು ವಾರ ಮುಂದೂಡುವಂತೆ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಹಾಗೂ ಸರಕಾರದ ಪ್ರಧಾನ ಕಾರ್ಯದರ್ಶಿ ಯವರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮನವಿ ಮಾಡಿದ್ದಾರೆ.
2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಶಿಕ್ಷಣ ಇಲಾಖೆಯ ಆದೇಶದಂತೆ ಮೇ 31ರಂದು ಆರಂಭ ಗೊಳ್ಳಲಿವೆ.
ಈ ಬಾರಿ ಮುಂಗಾರು ಮಳೆಯ ವಿಳಂಬದಿಂದಾಗಿ ರಾಜ್ಯದ ವಿವಿಧೆಡೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾ ಗಿದೆ. ರಾಜ್ಯದ ಹಲವು ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ಶಾಲಾ ವಿದ್ಯಾರ್ಥಿ ಗಳಿಗೆ ಕುಡಿಯುವ ನೀರಿನ ಪೂರೈಕೆ, ಬಿಸಿಯೂಟ ಹಾಗೂ ಶಾಲೆಯ ಪರಿಸರದ ಶುಚಿತ್ವ ಕಾಪಾಡಲು ಕಷ್ಟ ಸಾಧ್ಯವಾಗುವ ನಿರೀಕ್ಷೆ ಇದೆ.
ಆದ್ದರಿಂದ ಶಾಲಾ ವಿದ್ಯಾರ್ಥಿಗಳ ಆರೋಗ್ಯ ಹಾಗೂ ದೈನಂದಿನ ಚಟುವಟಿಕೆಗೆ ತೊಂದರೆಯಾಗಲಿದೆ. ಹೀಗಾಗಿ ಸಮಸ್ಯೆಯ ಗಂಭೀರತೆಯನ್ನು ಪರಿಗಣಿಸಿ ಶಾಲಾ ಆರಂಭವನ್ನು ಒಂದು ವಾರ ಕಾಲ ಮುಂದೂಡಿಕೆಗೆ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಗಳಿಗೆ ಯಶಪಾಲ್ ಸುವರ್ಣ ಮನವಿ ಮಾಡಿದ್ದಾರೆ.







