Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮನೆ ತೆರವು ನೊಟೀಸ್: ಉಡುಪಿ ಡಿಸಿಗೆ...

ಮನೆ ತೆರವು ನೊಟೀಸ್: ಉಡುಪಿ ಡಿಸಿಗೆ ಅಂಬೇಡ್ಕರ್ ಯುವಸೇನೆ ಮನವಿ

27 May 2023 4:39 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮನೆ ತೆರವು ನೊಟೀಸ್: ಉಡುಪಿ ಡಿಸಿಗೆ ಅಂಬೇಡ್ಕರ್ ಯುವಸೇನೆ ಮನವಿ

ಉಡುಪಿ: ಮಲ್ಪೆ ಕಡಲ ತೀರದ ಪೂರ್ವ ಭಾಗದ ತೀರ ಪ್ರದೇಶದಲ್ಲಿರುವ ಹಲವು ಬಡ ದಲಿತ ಕುಟುಂಬಗಳ ಮನೆ ತೆರವುಗೊಳಿಸಲು ಮಲ್ಪೆ ಅಭಿವೃದ್ಧಿ ಸಮಿತಿಯ ಹೆಸರಿನಲ್ಲಿ ಉಡುಪಿ ನಗರಸಭೆಯ ಪೌರಾಯುಕ್ತರು ನೀಡಿರುವ ನೊಟೀಸಿನ ವಿರುದ್ಧ ಆಕ್ಷೇಪಿಸಿ ಜಿಲ್ಲಾಧಿಕಾರಿಗೆ ಅಂಬೇಡ್ಕರ್ ಯುವಸೇನೆ ಮನವಿ ಸಲ್ಲಿಸಿದೆ.

ಕಳೆದ ಹಲವು ದಶಕಗಳಿಂದ ಸಮುದ್ರತೀರ ಪ್ರದೇಶದಲ್ಲಿ ಮನೆಕಟ್ಟಿಕೊಂಡು ವಾಸವಾಗಿರುವ ದಲಿತ ಕುಟುಂಬ ಗಳಿಗೆ ಏಕಾಎಕಿ ಸಿಆರ್‌ಝಡ್ ಇಲಾಖಾ ನಿಯಮ 2011 ಮತ್ತು 2019ರ ಅನ್ವಯ ಹಾಗೂ ಮುನ್ಸಿಪಲ್ ಆ್ಯಕ್ಟ್ 187ರಂತೆ ಕಾನೂನು ಬಾಹಿರ ಎಂದು ನೊಟೀಸು ಜಾರಿಗೊಳಿಸಿದ್ದು, ಇದೇ ಕರಾವಳಿ ಬಂದರು ಪ್ರದೇಶದ ಸುತ್ತುಮುತ್ತ ಅತಿಕ್ರಮಣ ಮಾಡಿಕೊಂಡು ಮನೆ, ರೆಸಾರ್ಟ್, ಅಂಗಡಿ ಇತ್ಯಾದಿಗಳ ವಿರುದ್ಧ ಯಾವುದೇ ಕಾನೂನುಕ್ರಮ ಕೈಗೊಳ್ಳದೆ ಕೇವಲ ದಲಿತ ಕುಟುಂಬದ ಮೇಲೆ ನೊಟೀಸ್ ನೀಡಿ ದೌರ್ಜನ್ಯ ನೀಡಿರುವುದಕ್ಕೆ ಜನಪರ ಹೋರಾಟಗಾರ ಜಯನ್ ಮಲ್ಪೆ ಆಕ್ಷೇಪಿಸಿದ್ದಾರೆ.

ಇಲ್ಲಿ ಹಲವು ದಶಕಗಳಿಂದ ವಾಸವಾಗಿರುವ ದಲಿತ ಕುಟುಂಬಗಳಿಗೆ ಮನೆನಂಬ್ರ, ಆಧಾರ್ ಕಾರ್ಡ್, ರೇಶನ್ ಕಾರ್ಡ್, ವಿದ್ಯುತ್ ಸಂಪರ್ಕ ಸೇರಿದಂತೆ ಎಲ್ಲವನ್ನೂ ಕಾನೂನುಬದ್ಧವಾಗಿ ಪಡೆದಿದ್ದರೂ, ಅನಧಿಕೃತವೆಂಬ ನಿಯಮ ದಡಿ ಈ ಬಡಪಾಯಿ ದಲಿತ ಕುಟುಂಬಗಳಿಗೆ ತೆರವುಗೊಳಿಸುವ ಭಯದ ನೊಟೀಸ್ ನೀಡಿ ದೌಜನ್ಯ ಎಸಗಿದ್ದಾರೆ ಎಂದು ಜಿಲ್ಲಾಧಿಕಾರಿಗೆ ನೀಡಿದ ಮನವಿಯಲ್ಲಿ ತಿಳಿಸಲಾಗಿದೆ. 

ಮನವಿ ಅರ್ಪಿಸಿದ ನಿಯೋಗದಲ್ಲಿ ಜನಪರ ಹೋರಾಟಗಾರ ಜಯನ್ ಮಲ್ಪೆ, ಅಂಬೇಡ್ಕರ್ ಯುವಸೇನೆಯ ಜಿಲ್ಲಾ ಅಧ್ಯಕ್ಷ ಹರೀಶ್ ಸಾಲ್ಯಾನ್, ಗಣೇಶ್ ನೆರ್ಗಿ, ಸಂತೋಷ್ ಕಪ್ಪೆಟ್ಟು, ಕೃಷ್ಣ ಶ್ರೀಯಾನ್ ಮಲ್ಪೆ, ಗುಣವಂತ ತೊಟ್ಟಂ, ಪ್ರಸಾದ್, ವಿನಯ ಬಲರಾಮನಗರ, ಗೀತಾ, ಸಂಕಿ, ಜಲಜ, ಲಲಿತ, ಸುಂದರಿ ಮುಂತಾದವರು ಭಾಗವಹಿಸಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X