Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೇ 30ರಿಂದ ಬೆಳ್ಳಿಚುಕ್ಕಿ ಶುಕ್ರ ಗ್ರಹ...

ಮೇ 30ರಿಂದ ಬೆಳ್ಳಿಚುಕ್ಕಿ ಶುಕ್ರ ಗ್ರಹ ಫಳ ಫಳ

29 May 2023 7:26 PM IST
share
ಮೇ 30ರಿಂದ ಬೆಳ್ಳಿಚುಕ್ಕಿ ಶುಕ್ರ ಗ್ರಹ ಫಳ ಫಳ

ಉಡುಪಿ, ಮೇ 29: ಆಕಾಶದ ಬೆಳ್ಳಿ ಚುಕ್ಕಿ ಎನಿಸಿದ ಶುಕ್ರಗ್ರಹ ಮಂಗಳವಾರದಿಂದ ಅತಿಸುಂದರ. ಸುಮಾರು 19 ತಿಂಗಳಿಗೊಮ್ಮೆ ಸಂಜೆಯ ಪಶ್ಚಿಮ ಆಕಾಶದಲ್ಲಿ ವಿಜೃಂಭಿಸುವ ಶುಕ್ರ ಗ್ರಹ, ಮೇ 30ರಂದು ಅತೀ ಎತ್ತರದಲ್ಲಿ ಸುಮಾರು 43 ಡಿಗ್ರಿ ಎತ್ತರದಲ್ಲಿ ಹೊಳೆಯಲಿದೆ. ಮೇ 30ರಿಂದ ಜುಲೈ ಅಂತ್ಯದವರೆಗೂ ಹೊಳೆಯುತ್ತಾ ಆಗಸ್ಟ್ ಪ್ರಾರಂಭದಲ್ಲಿ ಕಣ್ಮರೆಯಾಗುತ್ತದೆ.

ಆಗಸ್ಟ್ 8ರಿಂದ ಆಗಸ್ಟ್ 19ರವರೆಗೆ ಸೂರ್ಯನಿಗೆ ನೇರ ಬಂದು ಕಾಣದಾದಾಗ ‘ಅಸ್ತ’ ಎನ್ನುವರು. ಅನಂತರ ಅದು ಪೂರ್ವ ಆಕಾಶದಲ್ಲಿ ಬೆಳಗಿನ ಜಾವ ಗೋಚರಿಸತೊಡಗುತ್ತದೆ ಎಂದು ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಖಗೋಳ ಶಾಸ್ತ್ರಜ್ಞ ಡಾ.ಎ.ಪಿ.ಭಟ್ ತಿಳಿಸಿದ್ದಾರೆ.

ಈಗ ಮೇ 30ರಿಂದ ಭೂಮಿಗೆ ಸಮೀಪಿಸುತ್ತಿದ್ದಂತೆ ದಿನದಿಂದ ದಿನಕ್ಕೆ ದಿಗಂತದೆಡೆಗೆ ಕೆಳಗಿಳಿಯುತ್ತಾ, ಪ್ರಭೆ ಹೆಚ್ಚಿಸಿ ಕೊಳ್ಳುತ್ತಾ ಜುಲೈ 7ರಂದು ಅತೀ ಹೆಚ್ಚಿನ ಪ್ರಭೆಯಲ್ಲಿ ಕಂಗೊಳಿಸುತ್ತದೆ. ಶುಕ್ರ ಈಗ ಭೂಮಿಯಿಂದ ಸುಮಾರು 15 ಕೋಟಿ ಕಿಮೀ ದೂರದಿಂದ ಆಗಸ್ಟ್ 8ರ ಹೊತ್ತಿಗೆ 4 ಕೋಟಿ ಕಿ.ಮೀ.ನಷ್ಟು ಸಮೀಪ್ಕ್ಕೆ ಬರುತ್ತದೆ.

ಹೀಗೆ ಶುಕ್ರ ಗ್ರಹ ಕಾಣಿಸಲು ಪ್ರಮುಖ ಕಾರಣ ಶುಕ್ರ, ಬುಧ ಗ್ರಹದಂತೆ ಸೂರ್ಯ-ಭೂಮಿ ದೂರಕ್ಕಿಂತ ಕಡಿಮೆ ದೂರದಲ್ಲಿ ಇರುವುದು. ಸೂರ್ಯ ನಿಂದ ಬುಧ ಸುಮಾರು 6 ಕೋಟಿ, ಶುಕ್ರ 11ಕೋಟಿ ಕಿಮೀಯಾದರೆ ಭೂಮಿ 15 ಕೋಟಿ ಕಿಮೀ ದೂರದಲ್ಲಿದೆ. ಹೀಗಾಗಿ ಸೌರವ್ಯೆಹದಲ್ಲಿ ಭೂಮಿಗಿಂತ ಒಳಗಿರುವ ಈ ಎರಡು ಗ್ರಹಗಳು ರಾತ್ರಿ ಇಡೀ ಕಾಣುವುದಿಲ್ಲ, ಕಾಣುವುದೇ ಪಶ್ಚಿಮ ಆಕಾಶದಲ್ಲಿ ಸಂಜೆ ಹಾಗೂ ಪೂರ್ವ ಆಕಾಶದಲ್ಲಿ ಬೆಳಗಿನ ಜಾವ.

ಸಂಜೆ ಆಕಾಶದಲ್ಲಿ ಸೂರ್ಯಾಸ್ತದ ನಂತರ ಕೆಲ ಗಂಟೆ, ಹೆಚ್ಚೆಂದರೆ ದಿಗಂತದಿಂದ 47 ಡಿಗ್ರಿ ಎತ್ತರದಲ್ಲಿ ಹಾಗೂ ಬುಧ 27 ಡಿಗ್ರಿ ಎತ್ತರದಲ್ಲಿ. ಮತ್ತೆ ಕೆಲ ಸಮಯ ಪೂರ್ವ ಆಕಾಶದಲ್ಲಿ ಸೂರ್ಯೋದಯಕ್ಕಿಂತ ಮೊದಲು. ಸೂರ್ಯನಿಂದ ಶುಕ್ರ ಸುಮಾರು 11 ಕೋಟಿ ಒಂದೇ ದೂರದಲ್ಲಿದೆ ಯಾದರೂ ಭೂಮಿಯಿಂದ ಯಾವಾಗಲೂ ಒಂದೇ ಅಂತರದಲ್ಲಿ ಇರುವುದಿಲ್ಲ. 19 ತಿಂಗಳಿಗೊಮ್ಮೆ ಅತೀ ಸಮೀಪ ದೂರ 4 ಕೋಟಿ ( ಆಗಸ್ಟ್  13 ಇನ್ಫೀರಿಯರ್ ಕಂಜಂಕ್ಷನ್) ನಂತರ ಜನವರಿ 2025ರಲ್ಲಿ ಅತ್ಯಂತ ದೂರ 26 ಕೋಟಿ ಕಿಮೀ (ಸುಪೀರಿಯರ್ ಕಂಜಂಕ್ಷನ್).

ಗ್ರಹಗಳಲ್ಲಿ ಬರೀ ಗಣ್ಣಿಗೆ ಶುಕ್ರನೇ ಚೆಂದ. ಸುಮಾರು ಶೇ.95ರಷ್ಟು ಇಂಗಾಲದ ಆಕ್ಸೈಡುಗಳ ವಾತಾವರಣದಲ್ಲಿ ಸ್ವಲ್ಪ ರಂಜಕದ ಡೈಆಕ್ಸೈಡುಗಳಿಂದ ಅತೀ ಹೆಚ್ಚು ಸೂರ್ಯನ ಬೆಳಕನ್ನು ಪ್ರತಿಫಲಿಸುವುದರಿಂದ ಶುಕ್ರ ಗ್ರಹ ಫಳ ಫಳ ಹೊಳೆಯುತ್ತದೆ.

ದೂರದರ್ಶಕದಲ್ಲಿ ಈಗ ಆಕಾಶಕಾಯ ವೀಕ್ಷಿಸುವವರಿಗೆ ಶುಕ್ರ ಗ್ರಹ ಚೌತಿಯ ಚಂದ್ರನಂತೆ ಕಾಣುತ್ತದೆ. ಜುಲೈ ಕೊನೆಯ ವಾರ ಬಿದಿಗೆ ಚಂದ್ರನಿಗಿಂತ ಕ್ಷೀಣವಾಗಿ ಕಾಣಿಸುತ್ತಾನೆ ಎಂದು ಡಾ.ಎ.ಪಿ.ಭಟ್ ವಿವರಿಸಿದರು.

share
Next Story
X