ಕುಂದಾಪುರ-ಬೈಂದೂರಿನಲ್ಲಿ ಸಿಐಟಿಯು ಸಂಸ್ಥಾಪನ ದಿನಾಚರಣೆ

ಕುಂದಾಪುರ, ಮೇ 30: ಕುಂದಾಪುರದ ಹಂಚು ಕಾರ್ಮಿಕರ ಭವನದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಕೆ ಶಂಕರ್ ಧ್ವಜಾರೋಹಣ ನೆರವೇರಿಸಿದರು.
ಸಿಐಟಿಯು ಮುಖಂಡ ಎಚ್ ನರಸಿಂಹ ಮಾತನಾಡಿದರು. ಮಹಾಬಲ ವಡೇರಹೋಬಳಿ, ಬಲ್ಕೀಸ್, ರಾಜು ದೇವಾಡಿಗ ಉಪಸ್ಥಿತರಿದ್ದರು.
ಕುಂದಾಪುರದ ಎಲ್ಲಾ ಹತ್ತು ಹಂಚು ಕಾರ್ಖಾನೆಗಳಲ್ಲಿ ಕೆಲಸಕ್ಕೂ ಮುನ್ನ ಕಾರ್ಖಾನೆ ಎದುರುಗಡೆ ಧ್ವಜಾರೋಹಣ ಮಾಡಿ ಕಾರ್ಮಿಕರ ಬೇಡಿಕೆಗಳು ಈಡೇರಿಸಬೇಕೆಂದು ಆಗ್ರಹಿಸಿ ಘೋಷಣೆ ಮೊಳಗಿಸಲಾಯಿತು.
ಬೈಂದೂರು ಸಿಐಟಿಯು ಕಚೇರಿಯಲ್ಲಿ ಸಿಐಟಿಯು ಧ್ವಜಾರೋಹಣ ವನ್ನು ಶ್ರೀಧರ ಉಪ್ಪುಂದ ನೆರವೇರಿಸಿ ಮಾತನಾಡಿದರು. ಸಿಐಟಿಯು ಸಂಚಾಲಕ ರೊನಾಲ್ಡ್ ರಾಜೇಶ್ ಕ್ವಾಡ್ರಸ್ ಮಾತನಾಡಿದರು.
Next Story