Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದಾನಿ ನಂಟಿನ 2 ವಿದೇಶಿ ಫಂಡ್‌ಗಳು ಮೇಲೆ...

ಅದಾನಿ ನಂಟಿನ 2 ವಿದೇಶಿ ಫಂಡ್‌ಗಳು ಮೇಲೆ 10 ವರ್ಷಗಳಿಂದ ನಿಗಾ: ಯಾವುದೇ ಕ್ರಮವಿಲ್ಲ; ಕಾಂಗ್ರೆಸ್ ಆರೋಪ

30 May 2023 4:47 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅದಾನಿ ನಂಟಿನ 2 ವಿದೇಶಿ ಫಂಡ್‌ಗಳು ಮೇಲೆ 10 ವರ್ಷಗಳಿಂದ ನಿಗಾ: ಯಾವುದೇ ಕ್ರಮವಿಲ್ಲ; ಕಾಂಗ್ರೆಸ್ ಆರೋಪ

ಹೊಸದಿಲ್ಲಿ: ಅದಾನಿ ಗುಂಪಿನೊಂದಿಗೆ ನಂಟು ಹೊಂದಿರುವ ಎರಡು ವಿದೇಶಿ ಫಂಡ್ಗಳ ಮೇಲೆ ಭಾರತೀಯ ತೆರಿಗೆ ಅಧಿಕಾರಿಗಳು ಕನಿಷ್ಠ 2014ರಿಂದಲೂ ನಿಗಾ ಇಟ್ಟಿದ್ದಾರೆ; ಆದರೆ ಒಂದೆರಡು ಸಾಮಾನ್ಯ ನೋಟಿಸ್ ಳನ್ನು ನೀಡಿದ್ದು ಬಿಟ್ಟರೆ ಬೇರೆ ಯಾವುದೇ ಕ್ರಮ ಆಗಿರುವುದು ಕಂಡುಬಂದಿಲ್ಲ ಎಂದು ಕಾಂಗ್ರೆಸ್ ಮಂಗಳವಾರ ಆರೋಪಿಸಿದೆ. ಜಂಟಿ ಸಂಸದೀಯ ಸಮಿತಿ ನಡೆಸುವ ತನಿಖೆ ಮಾತ್ರ ಈ ವಿಷಯದಲ್ಲಿ ಸತ್ಯವನ್ನು ಹೊರತರಬಹುದಾಗಿದೆ ಎಂದು ಅದು ಹೇಳಿದೆ.

ಅದಾನಿ ಗುಂಪಿನ ಕಂಪೆನಿಗಳಲ್ಲಿ ಹೂಡಿಕೆ ಮಾಡಿರುವ ಹಾಗೂ ಅದಾನಿ ಗುಂಪಿನ ಬಗ್ಗೆ ಹಿಂಡನ್‌ಬರ್ಗ್‌ ರಿಸರ್ಚ್‌ ಬಿಡುಗಡೆ ಮಾಡಿರುವ ವರದಿಯಲ್ಲಿ ಪ್ರಸ್ತಾವಗೊಂಡಿರುವ ಎರಡು ಮಾರಿಷಸ್ ಕಂಪೆನಿಗಳ ಮೇಲೆ ಭಾರತೀಯ ತೆರಿಗೆ ಅಧಿಕಾರಿಗಳು ಒಂದು ದಶಕಕ್ಕಿಂತಲೂ ಅಧಿಕ ಕಾಲ ನಿಗಾ ಇಟ್ಟಿದ್ದಾರೆ ಎಂಬ ಮಾಧ್ಯಮ ವರದಿಯೊಂದನ್ನು ಕಾಂಗ್ರೆಸ್ ಉಲ್ಲೇಖಿಸಿದೆ.

‘‘ಮಾರಿಷಸ್ ನಲ್ಲಿ ನೆಲೆ ಹೊಂದಿರುವ ಹಾಗೂ ಅದಾನಿ ಗುಂಪಿನೊಂದಿಗೆ ನಂಟು ಹೊಂದಿರುವ ಎರಡು ಕಂಪೆನಿಗಳ ಮೇಲೆ ಭಾರತೀಯ ತೆರಿಗೆ ಅಧಿಕಾರಿಗಳು 10 ವರ್ಷಗಳಿಗಿಂತಲೂ ಹೆಚ್ಚು ಕಾಲ ನಿಗಾ ಇಟ್ಟಿದ್ದಾರೆ. ಆದರೆ, ಅವುಗಳ ವಿರುದ್ಧ ಯಾವುದೇ ಕ್ರಮ ಆಗಿಲ್ಲ. ಇದು ಈಗ ಸಾಮಾನ್ಯ ಎಂಬಂತಾಗಿದೆ’’ ಎಂದು ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಟ್ವಿಟರ್ ನಲ್ಲಿ ಹೇಳಿದ್ದಾರೆ. ಮಾಧ್ಯಮ ವರದಿಯನ್ನು ಅದರ ಜೊತೆಗೆ ಲಗತ್ತಿಸಿದ್ದಾರೆ.

‘‘ಮಿತ್ರಕಾಲದಲ್ಲಿ, ಸೆಬಿಯಂತೆಯೇ, ಸಾಮಾನ್ಯವಾಗಿ ಅತ್ಯಂತ ಚಟುವಟಿಕೆಯಿಂದ ಕೂಡಿರುವ ಆದಾಯ ತೆರಿಗೆ ಇಲಾಖೆಯನ್ನೂ ನಿದ್ರಿಸುವಂತೆ ಬಲವಂತಪಡಿಸಲಾಗಿದೆ’’ ಎಂದು ಅವರು ಟ್ವೀಟ್ ನಲ್ಲಿ ಹೇಳಿದ್ದಾರೆ.

‘‘ಅದಕ್ಕಾಗಿಯೇ, ಅದಾನಿ ಗುಂಪಿನಲ್ಲಿ ಹೂಡಿಕೆಯಾಗಿರುವ 20,000 ಕೋಟಿ ರೂಪಾಯಿಗೂ ಅಧಿಕ ಲೆಕ್ಕವಿಲ್ಲದ ಹಣ ಎಲ್ಲಿಂದ ಬಂತೆನ್ನುವುದನ್ನು ಪತ್ತೆಹಚ್ಚಲು ಜೆಪಿಸಿ ತನಿಖೆಯಿಂದ ಮಾತ್ರ ಸಾಧ್ಯ ಎಂದು ನಾವು ಪದೇ ಪದೇ ಹೇಳುತ್ತಿರುವುದು’’ ಎಂದರು.

ಅಮೆರಿಕದ ಹಿಂಡನ್‌ಬರ್ಗ್‌ ರಿಸರ್ಚ್‌ ವರದಿಯಲ್ಲಿ ಹೇಳಿರುವಂತೆ, ಅದಾನಿ ಗುಂಪು ‘‘ಹಣಕಾಸು ಅವ್ಯವಹಾರಗಳಲ್ಲಿ’’ ಶಾಮೀಲಾಗಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಾ ಬಂದಿದೆ.

ಇದಕ್ಕೂ ಮೊದಲು, ಕಾಂಗ್ರೆಸ್ ಅದಾನಿ ವಿಷಯದಲ್ಲಿ 100 ಪ್ರಶ್ನೆಗಳನ್ನು ಕೇಳಿತ್ತು ಹಾಗೂ ಅವುಗಳಿಗೆ ಪ್ರಧಾನಿ ನರೇಂದ್ರ ಮೋದಿಯಿಂದ ಉತ್ತರಗಳನ್ನು ಕೋರಿತ್ತು. ಈ ವಿಷಯದಲ್ಲಿ ವೌನ ಮುರಿಯುವಂತೆ ಅದು ಪ್ರಧಾನಿಗೆ ಮನವಿ ಮಾಡಿತ್ತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X