Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಿಮ್ಮಿಂದ ರಾಜ್ಯದ ಸರ್ವ ಜನಾಂಗದ ಶಾಂತಿಯ...

ನಿಮ್ಮಿಂದ ರಾಜ್ಯದ ಸರ್ವ ಜನಾಂಗದ ಶಾಂತಿಯ ತೋಟ ಸದಾ ನಳನಳಿಸುತ್ತಾ ಇರಲಿ: ಸಿದ್ದರಾಮಯ್ಯ

ಶಾಲಾರಂಭದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯಿಂದ ವಿದ್ಯಾರ್ಥಿಗಳಿಗೆ ಪತ್ರ

31 May 2023 3:59 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನಿಮ್ಮಿಂದ ರಾಜ್ಯದ ಸರ್ವ ಜನಾಂಗದ ಶಾಂತಿಯ ತೋಟ ಸದಾ ನಳನಳಿಸುತ್ತಾ ಇರಲಿ: ಸಿದ್ದರಾಮಯ್ಯ
ಶಾಲಾರಂಭದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯಿಂದ ವಿದ್ಯಾರ್ಥಿಗಳಿಗೆ ಪತ್ರ

ನನ್ನ ಪ್ರೀತಿಯ ವಿದ್ಯಾರ್ಥಿ-ವಿದ್ಯಾರ್ಥಿನಿಯರೇ,

ರಜಾದಿನಗಳನ್ನು ತಂದೆ-ತಾಯಿ, ಗೆಳೆಯ-ಗೆಳತಿಯರ ಜೊತೆ ಆನಂದದಿಂದ ಕಳೆದ ನಿಮ್ಮನ್ನು ಶಾಲೆಗಳು ಕೈಬೀಸಿ ಕರೆಯುತ್ತಿವೆ. ಕಳೆದ ಎರಡು –ಮೂರು  ವರ್ಷಗಳಲ್ಲಿ ಕೊರೋನ ರೋಗದಿಂದಾಗಿ ನೀವೆಲ್ಲ ವಿದ್ಯಾರ್ಥಿ ಜೀವನವನ್ನು ಸಂಪೂರ್ಣ ಅನುಭವಿಸಲಾಗದೆ ಅನೇಕ ಬಗೆಯ ಸಂಕಟ-ಸಂಕಷ್ಟಕ್ಕೆ ಈಡಾಗಿದ್ದೀರಿ ಎನ್ನುವುದು ಗೊತ್ತು. ಈಗ ನಾವು ಆ ರೋಗವನ್ನು ಗೆದ್ದಿದ್ದೇವೆ, ಆರೋಗ್ಯದ ಪಾಠವನ್ನು ಪ್ರಕೃತಿಯಿಂದ ಒಂದಷ್ಟು ಕಲಿತಿದ್ದೇವೆ.  ರಾಜ್ಯದ ಈ ಬಾರಿಯ ಶೈಕ್ಷಣಿಕ ವರ್ಷ ಇಂತಹ ಬದಲಾವಣೆಯ ತಂಗಾಳಿಯೊಂದಿಗೆ ಪ್ರಾರಂಭವಾಗಿದೆ, ಜ್ಞಾನ ದೇಗುಲಕ್ಕೆ ನಿಮಗೆಲ್ಲರಿಗೂ ಸ್ವಾಗತ ಮತ್ತು ಶುಭಾಶಯಗಳು. ಕೈಮುಗಿದು ಒಳಗೆ ಬನ್ನಿ.

ಶಾಲೆಗಳೆಂದರೆ ಬರೀ ಕಲ್ಲು ಕಟ್ಟಡಗಳಲ್ಲ ಅದೊಂದು ಜ್ಞಾನ ದೇಗುಲ. ಹೆತ್ತ ತಂದೆ-ತಾಯಿಗಳಂತೆ ಕಲಿಸುವ ಗುರುಗುಳು ಕೂಡಾ ವಿದ್ಯಾರ್ಥಿಗಳ ಪಾಲಿನ ದೇವರು. ಈ ಶ್ರದ್ಧೆ ಮತ್ತು ಗೌರವ ಸದಾ ನಿಮ್ಮಲ್ಲಿರಲಿ. “ಪ್ರತಿಯೊಬ್ಬರು ಹುಟ್ಟಿದಾಗ ವಿಶ್ವಮಾನವ, ಬೆಳೆಯುತ್ತಾ ಅಲ್ಪ ಮಾನವನಾಗುತ್ತಾನೆ” ಎಂದು ರಾಷ್ಟ್ರಕವಿ ಕುವೆಂಪು ಎಚ್ಚರಿಸಿದ್ದರು. ಪರೀಕ್ಷೆ-ಫಲಿತಾಂಶ ಎಲ್ಲವೂ ಮುಖ್ಯವಾದರೂ ಶಿಕ್ಷಣ ಎಂದರೆ ಅಷ್ಟೇ ಅಲ್ಲ. ಶಿಕ್ಷಣ ಎನ್ನವುದು ನಮ್ಮಲ್ಲಿ ವೈಜ್ಞಾನಿಕ ಮತ್ತು ವೈಚಾರಿಕ ಅರಿವು ಮೂಡಿಸಬೇಕು, ಸತ್ಯ ಹೇಳುವ ಧೈರ್ಯವನ್ನು, ನ್ಯಾಯದ ಮಾರ್ಗದಲ್ಲಿ ಮುನ್ನಡೆಯುವ ಶಕ್ತಿಯನ್ನು ನೀಡಬೇಕು. ಅಂತಹ ಶಿಕ್ಷಣ ನಿಮ್ಮ ಪಾಲಿಗೆ ಒದಗಿಬಂದು ನೀವೆಲ್ಲರೂ ಮಹಾಮಾನವರಾಗಿ ಎಂದು ಹಾರೈಸುತ್ತೇನೆ.

ನಾನು ಹಳ್ಳಿಯ ಸಾಮಾನ್ಯ ರೈತ ಕುಟುಂಬದಿಂದ ಬಂದ ವ್ಯಕ್ತಿ. ಈಗ ನಿಮಗೆ ಇರುವ ಕಲಿಕೆಯ ಅವಕಾಶ ನನ್ನಂತಹವನಿಗೆ ಇರಲಿಲ್ಲ, ಒಂದನೇ ತರಗತಿಯಿಂದಲೇ ಶಾಲೆಗೆ ಹೋಗಲಾಗದೆ ಮರಳ ಮೇಲೆ ಕೈಬೆರಳಗಳನ್ನೊತ್ತಿ ಅಕ್ಷರಾಭ್ಯಾಸ ಮಾಡಿ ನಾಲ್ಕನೇ ತರಗತಿಗೆ ನೇರವಾಗಿ ಸೇರಿದವನು ನಾನು. ಅಲ್ಲಿಂದ ಕಾನೂನು ವ್ಯಾಸಂಗ ಮುಗಿಸುವ ವರೆಗೆ ನನ್ನ ವಿದ್ಯಾರ್ಥಿ ಜೀವನ ಹೂವಿನ ಹಾದಿಯಾಗಿರಲಿಲ್ಲ. ಅಮಾಯಕರಾಗಿದ್ದ ಹೆತ್ತವರ ವಿರೋಧ, ಶೋಷಕರ ಅಡ್ಡಗಾಲು, ಹಣಕಾಸಿನ ಸಮಸ್ಯೆಗಳ ಜೊತೆ ಹೋರಾಡುತ್ತಲೇ ನಾನು ಬಂದವನು. ಕಠಿಣ ಶ್ರಮ ಮತ್ತು ಕಲಿಕೆಯ ಮೇಲೆ ಆಸಕ್ತಿ-ಶ್ರದ್ದೆಗಳಿದ್ದರೆ ಸಾಮಾನ್ಯ ಕುಟುಂಬದಿಂದ ಬಂದ ಒಬ್ಬ ಬಾಲಕ ಕೂಡಾ ಮುಂದೊಂದು ದಿನ ರಾಜ್ಯದ ಮುಖ್ಯಮಂತ್ರಿಯೂ ಆಗಬಹುದು ಎನ್ನುವುದಕ್ಕೆ ನಾನೇ ಸಾಕ್ಷಿ. ಇದೇರೀತಿ ನಿಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ಉನ್ನತ ಸ್ಥಾನಗಳಿಗೇರಬೇಕೆಂದು ನನ್ನ ಕನಸು.

ಇದೇ ಉದ್ದೇಶದಿಂದ ಕಳೆದ ಬಾರಿ ನಾನು ಮುಖ್ಯಮಂತ್ರಿಯಾಗಿದ್ದಾಗ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಧ್ಯಾಹ್ನದ ಬಿಸಿ ಊಟ, ಕ್ಷೀರಭಾಗ್ಯ, ವಿದ್ಯಾಸಿರಿ, ವಿದ್ಯಾರ್ಥಿ ವೇತನ ಶೂ ಮತ್ತು ಸಾಕ್ಸ್ ಮೊದಲಾದ ಯೋಜನೆಗಳನ್ನು ಜಾರಿಗೊಳಿಸಿದ್ದೆ. ವಿದ್ಯಾರ್ಥಿಯಾಗಿ ನಾನು  ಅನುಭವಿಸಿದ ಕಷ್ಟ-ಕೋಟಳೆಗಳು, ಹಣಕಾಸಿನ ಮುಗ್ಗಟ್ಟುಗಳು ನನ್ನ ರಾಜ್ಯದ ಮಕ್ಕಳಿಗೆ ಬರಬಾರದೆನ್ನುವ ಆಶಯದಿಂದ ನನ್ನ ಅನುಭವದ ಆಧಾರದಲ್ಲಿ ಈ ಯೋಜನೆಗಳನ್ನು ರೂಪಿಸಿದ್ದೆ. ಇವುಗಳಿಗೆ ಎದುರಾಗಿರುವ ಸಣ್ಣಪುಟ್ಟ ಅಡ್ಡಿ-ಆತಂಕಗಳನ್ನು ನಿವಾರಿಸಿ ಪುನರ್ ಚಾಲನೆ ನೀಡಲಾಗುವುದು.

ನೀವು ಪಡೆಯುವ ಶಿಕ್ಷಣ ನಿಮ್ಮನ್ನು ತಂದೆ-ತಾಯಿ ಹೆಮ್ಮೆ ಪಡುವಂತಹ ಮಕ್ಕಳನ್ನಾಗಿ ಮತ್ತು ಸಮಾಜ ಪ್ರೀತಿಸುವ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸಲಿ. ಮುಂದಿನ ಜನಾಂಗವಾಗಿರುವ ನಿಮ್ಮಿಂದ ರಾಜ್ಯದ ಸರ್ವಜನಾಂಗದ ಶಾಂತಿಯ ತೋಟ ಸದಾ ನಳನಳಿಸುತ್ತಾ ಇರಲಿ.

ನಿಮಗೆಲ್ಲರಿಗೂ ಹೊಸ ಶೈಕ್ಷಣಿಕ ವರ್ಷಕ್ಕೆ ಮತ್ತೊಮ್ಮೆ ಸ್ವಾಗತ ಮತ್ತು ಶುಭಾಶಯಗಳು

ನಿಮ್ಮೆಲ್ಲರ ಪ್ರೀತಿಯ ಮುಖ್ಯಮಂತ್ರಿ

ಸಿದ್ದರಾಮಯ್ಯ

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X