Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವಾರ್ಷಿಕ 4,220.88 ಕೋ.ರೂ. ಆರ್ಥಿಕ...

ವಾರ್ಷಿಕ 4,220.88 ಕೋ.ರೂ. ಆರ್ಥಿಕ ವೆಚ್ಚ: ಸಾರಿಗೆ ಇಲಾಖೆಯಿಂದ ಪ್ರಸ್ತಾವ ಸಲ್ಲಿಕೆ

13,793 ಸಿಬ್ಬಂದಿ ಹೊಸ ನೇಮಕಾತಿ, 4,028 ಹೊಸ ವಾಹನಗಳು ಅಗತ್ಯ

ಜಿ.ಮಹಾಂತೇಶ್ಜಿ.ಮಹಾಂತೇಶ್31 May 2023 4:48 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ವಾರ್ಷಿಕ 4,220.88 ಕೋ.ರೂ. ಆರ್ಥಿಕ ವೆಚ್ಚ: ಸಾರಿಗೆ ಇಲಾಖೆಯಿಂದ ಪ್ರಸ್ತಾವ ಸಲ್ಲಿಕೆ
13,793 ಸಿಬ್ಬಂದಿ ಹೊಸ ನೇಮಕಾತಿ, 4,028 ಹೊಸ ವಾಹನಗಳು ಅಗತ್ಯ

ಬೆಂಗಳೂರು: ಸರಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆ ಅನುಷ್ಠಾನಕ್ಕಾಗಿ 4,028 ಹೊಸ ವಾಹನಗಳು ಮತ್ತು 13,793 ಸಿಬ್ಬಂದಿಯನ್ನು ಹೊಸದಾಗಿ ನೇಮಕ ಮಾಡಿಕೊಳ್ಳಬೇಕಿದೆ. ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಿದಲ್ಲಿ ಸಾರಿಗೆ ಸೇವಾ ವರ್ಗವಾರು, ನಿಗಮವಾರು ಉಂಟಾಗುವ ಆರ್ಥಿಕ ವೆಚ್ಚವನ್ನು ಪ್ರಸ್ತಕ ಆದಾಯದ ಶೇ.50ರಂತೆ ಅಂದಾಜಿಸಿರುವ (ಎಪ್ರಿಲ್ 2023ರಲ್ಲಿದ್ದಂತೆ) ನಿಗಮವು ವಾರ್ಷಿಕವಾಗಿ ಒಟ್ಟಾರೆ 4,220.88 ಕೋಟಿ ರೂ. ಆರ್ಥಿಕ ವೆಚ್ಚವಾಗಲಿದೆ ಎಂದು ಸಾರಿಗೆ ಇಲಾಖೆಯು ಸಲ್ಲಿಸಿರುವ ಪ್ರಸ್ತಾವನೆಯಲ್ಲಿ ವಿವರಿಸಲಾಗಿದೆ.

ಈ ಸಂಬಂಧ ಸಾರಿಗೆ ಇಲಾಖೆಯು ಸಲ್ಲಿಸಿರುವ ಪ್ರಸ್ತಾವನೆಯು ಪ್ರತಿಯು ‘the-file.in’ಗೆ ಲಭ್ಯವಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 1,823, ವಾಯುವ್ಯ ಕರ್ನಾಟಕ ಸಾರಿಗೆ ನಿಗಮಕ್ಕೆ 1,445, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ 760 ಸೇರಿದಂತೆ ಒಟ್ಟು 4,028 ಹೊಸ ವಾಹನಗಳನ್ನು ಖರೀದಿಸಬೇಕು. ಅದೇ ರೀತಿ ಕರ್ನಾಟಕ ಸಾರಿಗೆ ನಿಗಮಕ್ಕೆ 5,178, ವಾಯುವ್ಯ ಕರ್ನಾಟಕ ಸಾರಿಗೆ ನಿಗಮಕ್ಕೆ 2,415, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 3,775 ಸೇರಿ ಒಟ್ಟಾರೆ 13,793 ಸಿಬ್ಬಂದಿ ನೇಮಕಕ್ಕೆ ಸರಕಾರವು ಸಹಾಯ ಹಸ್ತ ಚಾಚಬೇಕಿದೆ ಎಂಬ ಮಾಹಿತಿಯು ಪ್ರಸ್ತಾವನೆಯಿಂದ ತಿಳಿದು ಬಂದಿದೆ.

ಅದೇ ರೀತಿ ವಾಹನಗಳ ಕಾರ್ಯಾಚರಣೆಗೆ ಅಗತ್ಯವಿರುವ ಚಾಲನಾ ಸಿಬ್ಬಂದಿ ನೇಮಕಾತಿಗೆ ಅನುಮೋದನೆ ಮತ್ತು ಮುಂಬರುವ ದಿನಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ವಿತರಿಸಲಿರುವ ಸ್ಮಾರ್ಟ್ ಕಾರ್ಡ್‌ಗಳಿಗೆ ತಗಲುವ ವೆಚ್ಚವನ್ನು ಸರಕಾರವೇ ಒದಗಿಸಬೇಕು ಎಂದು ನಿಗಮಗಳು ಪ್ರಸ್ತಾವನೆಯಲ್ಲಿ ವಿವರಿಸಿರುವುದು ಗೊತ್ತಾಗಿದೆ.

ಕರ್ನಾಟಕ ಸಾರಿಗೆ ನಿಗಮ, ಬಿಎಂಟಿಸಿ, ವಾಯುವ್ಯ ಕರ್ನಾಟಕ ಸಾರಿಗೆ, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ ಸದ್ಯ 1,079.82 ಕೋಟಿ ರೂ. ಪಾವತಿಯಾಗುತ್ತಿದೆ. ಶಕ್ತಿ ಯೋಜನೆ ಅನುಷ್ಠಾನದಿಂದಾಗಿ ಈ ಮೊತ್ತದಲ್ಲಿ 702.88 ಕೋಟಿ ರೂ. ಕೊರತೆಯಾಗಲಿದೆ.

ಕೆಎಸ್‌ಆರ್‌ಟಿಸಿಯಲ್ಲಿ ಪಾವತಿಯಾಗುತ್ತಿರುವ 386.77 ಕೋಟಿ ರೂ.ನಲ್ಲಿ 221.79 ಕೋಟಿ ರೂ. ಕೊರತೆಯಾಗಲಿದೆ. ಬಿಎಂಟಿಸಿಯಲ್ಲಿ 287.81 ಕೋಟಿ ರೂ.ನಲ್ಲಿ 206.31 ಕೋಟಿ ರೂ., ವಾಯುವ್ಯ ಕರ್ನಾಟಕ ಸಾರಿಗೆ ನಿಗಮದಲ್ಲಿ 213.04 ಕೋಟಿ ರೂ.ನಲ್ಲಿ 146.55 ಕೋಟಿ ರೂ., ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ 192.2 ಕೋಟಿ ರೂ.ನಲ್ಲಿ 128.23 ಕೋಟಿ ರೂ.ಸೇರಿ ಒಟ್ಟಾರೆ 702.88 ಕೋಟಿ ರೂ. ಕೊರತೆಯಾಗಲಿದೆ ಎಂದು ಪ್ರಸ್ತಾವನೆಯಿಂದ ಗೊತ್ತಾಗಿದೆ.

► ಮಾಸಿಕ- ವಾರ್ಷಿಕ ವೆಚ್ಚವೆಷ್ಟು?

ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಿದಲ್ಲಿ ಸಾರಿಗೆ ವರ್ಗವಾರು, ನಿಗಮವಾರು ಉಂಟಾಗುವ ಆರ್ಥಿಕ ವೆಚ್ಚವನ್ನು ಪ್ರಸಕ್ತ ಆದಾಯದ ಶೇ.50ರಂತೆ ಅಂದಾಜಿಸಿದೆ. ಕರ್ನಾಟಕ ರಾಜ್ಯ ಸಾರಿಗೆ ನಿಗಮಗಳಲ್ಲಿ ನಗರ ಸೇವಾ ವರ್ಗದಲ್ಲಿ 4.83 ಕೋಟಿ ರೂ. ಆರ್ಥಿಕ ವೆಚ್ಚವಾಗಲಿದೆ.

ಬಿಎಂಟಿಸಿಯಲ್ಲಿ 55.50 ಕೋಟಿ ರೂ., ವಾಯುವ್ಯ ಕರ್ನಾಟಕ ಸಾರಿಗೆ ನಿಗಮದಲ್ಲಿ 5.77 ಕೋಟಿ ರೂ., ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ 0.93 ಕೋಟಿ ರೂ. ಸೇರಿ ಮಾಸಿಕ ಒಟ್ಟಾರೆ 67.03 ಕೋಟಿ ರೂ. ವೆಚ್ಚವಾಗಲಿದೆ. ಸಾಮಾನ್ಯ ವರ್ಗದಲ್ಲಿ ಕೆಎಸ್‌ಆರ್‌ಟಿಸಿಗೆ 31.45 ಕೋಟಿ ರೂ., ಬಿಎಂಟಿಸಿಗೆ 0.00, ವಾಯುವ್ಯ ಕರ್ನಾಟಕ ಸಾರಿಗೆಯಲ್ಲಿ 22.69 ಕೋಟಿ ರೂ., ಕಲ್ಯಾಣ ಕರ್ನಾಟಕ ಸಾರಿಗ ನಿಗಮದಲ್ಲಿ 17.17 ಕೋಟಿ ರೂ., ಸೇರಿ ಒಟ್ಟು 71.31 ಕೋಟಿ ರೂ. ವೆಚ್ಚವಾಗಲಿದೆ.

ರಿಯಾಯಿತಿ ಪಾಸ್‌ಗಳ ವರ್ಗದಲ್ಲಿ ಕೆಎಸ್‌ಆರ್‌ಟಿಸಿಗೆ 19.35 ಕೋಟಿ ರೂ., ಬಿಎಂಟಿಸಿಯಲ್ಲಿ 8.68 ಕೋಟಿ ರೂ., ವಾಯುವ್ಯ ಕರ್ನಾಟಕದಲ್ಲಿ 15.32 ಕೋಟಿ ರೂ., ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ 10.94 ಕೋಟಿ ರೂ. ಸೇರಿ ಒಟ್ಟು 54.29 ಕೋಟಿ ರೂ. ಆಗಲಿದೆ. ಈ ಮೂರೂ ವರ್ಗಗಳಲ್ಲಿ ಕೆಎಸ್‌ಆರ್‌ಟಿಸಿಗೆ ಮಾಸಿಕ 55.63 ಕೋಟಿ ರೂ., ಬಿಎಂಟಿಸಿಗೆ 64.18 ಕೋಟಿ ರೂ., ವಾಯುವ್ಯ ಕರ್ನಾಟಕಕ್ಕೆ 43.78 ಕೋಟಿ ರೂ., ಕಲ್ಯಾಣ ಕರ್ನಾಟಕಕ್ಕೆ 29.04 ಕೋಟಿ ರೂ. ಸೇರಿ ಒಟ್ಟಾರೆ 192.63 ಕೋಟಿ ರೂ. ವೆಚ್ಚವಾಗಲಿದೆ. ಇದೇ ವಾರ್ಷಿಕವಾಗಿ ಈ ಮೂರು ವರ್ಗಗಳಿಗೆ ಲೆಕ್ಕ ಹಾಕಿದರೆ ಕೆಎಸ್‌ಆರ್‌ಟಿಸಿಗೆ 667.56 ಕೋಟಿ ರೂ., ಬಿಎಂಟಿಸಿಗೆ 770.16 ಕೋಟಿ ರೂ., ವಾಯುವ್ಯ ಕರ್ನಾಟಕಕ್ಕೆ 525.36 ಕೋಟಿ ರೂ., ಕಲ್ಯಾಣ ಕರ್ನಾಟಕಕ್ಕೆ 348.48 ಕೋಟಿ ರೂ. ಸೇರಿ ಒಟ್ಟಾರೆ ವಾರ್ಷಿಕವಾಗಿ 2,311.56 ಕೋಟಿ ರೂ. ವೆಚ್ಚವಾಗಲಿದೆ ಎಂದು ಪ್ರಸ್ತಾವನೆಯಲ್ಲಿರುವ ಅಂಕಿ ಅಂಶಗಳಿಂದ ಗೊತ್ತಾಗಿದೆ.ಒಂದೊಮ್ಮೆ ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸಿದಲ್ಲಿ ಕೆಎಸ್‌ಆರ್‌ಟಿಸಿಗೆ ಮಾಸಿಕ 78.39 ಕೋಟಿ ರೂ., ವಾಯುವ್ಯ ಕರ್ನಾಟಕ ಸಾರಿಗೆ ನಿಗಮಕ್ಕೆ 35.73 ಕೋಟಿ ರೂ., ಕಲ್ಯಾಣ ಕರ್ನಾಟಕ ನಿಗಮಕ್ಕೆ 44.99 ಕೋಟಿ ರೂ. ಆರ್ಥಿಕ ವೆಚ್ಚವಾಗಲಿದೆ. ನಗರ, ಸಾಮಾನ್ಯ, ವೇಗದೂತ, ರಿಯಾಯಿತಿ ಪಾಸ್‌ಗಳಿಗೆ ಲೆಕ್ಕ ಹಾಕಿರುವ ನಿಗಮಗಳು ಕೆಎಸ್‌ಆರ್‌ಟಿಸಿಗೆ 134.02 ಕೋಟಿ ರೂ., ಬಿಎಂಟಿಸಿಗೆ 64.18 ಕೋಟಿ ರೂ., ವಾಯುವ್ಯ ಕರ್ನಾಟಕ ನಿಗಮಕ್ಕೆ 79.51 ಕೋಟಿ ರೂ., ಕಲ್ಯಾಣ ಕರ್ನಾಟಕ ನಿಗಮಕ್ಕೆ 74.03 ಕೋಟಿ ರೂ. ಆರ್ಥಿಕ ವೆಚ್ಚವಾಗಲಿದೆ ಎಂದು ವಿವರಿಸಿದೆ.

ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸಿದಲ್ಲಿ ಸಾರಿಗೆ ವರ್ಗಾವಾರು, ನಿಗಮವಾರು ಆರ್ಥಿಕ ವೆಚ್ಚವನ್ನು ಎಪ್ರಿಲ್ 2023ರಲ್ಲಿದ್ದಂತೆ ಲೆಕ್ಕ ಹಾಕಿರುವ ನಿಗಮಗಳು ಒಟ್ಟಾರೆ 4,220.88 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ. ಕೆಎಸ್‌ಆರ್‌ಟಿಸಿಗೆ ವಾರ್ಷಿಕವಾಗಿ 1,608.24 ಕೋಟಿ ರೂ., ಬಿಎಂಟಿಸಿಗೆ 770.16 ಕೋಟಿ ರೂ., ವಾಯುವ್ಯ ಕರ್ನಾಟಕಕ್ಕೆ 954.12 ಕೋಟಿ ರೂ., ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ 888.36 ಕೋಟಿ ರೂ. ಆರ್ಥಿಕ ವೆಚ್ಚವಾಗಲಿದೆ.

► ದರ ಪರಿಷ್ಕರಣೆಯಾಗುವುದೇ?

ಹಿಂದಿನ ಪ್ರಯಾಣ ದರ ಪರಿಷ್ಕರಣೆಗೊಂಡಾಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಡೀಸೆಲ್ ದರ 46.24 ರೂ. ಇದ್ದು ಇತರ ಸಾರಿಗೆ ಸಂಸ್ಥೆಗಳಲ್ಲಿ 60.98 ರೂ. ಇದೆ. ಪ್ರಸಕ್ತ ಅದು 84.84 ರೂ.ಗೆ ಏರಿದೆ. ಹಾಗೂ ಸಿಬ್ಬಂದಿಗೆ ಪಾವತಿಸುವ ತುಟ್ಟಿಭತ್ತೆ ಹೆಚ್ಚಳ ಹಾಗೂ ವೇತನ ಪರಿಷ್ಕರಣೆಯಿಂದಾಗಿ ವೆಚ್ಚದಲ್ಲಿ ತೀವ್ರ ಹೆಚ್ಚಳವಾಗುವುದರಿಂದ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಬೇಕಿದೆ ಎಂದು ನಿಗಮಗಳು ಪ್ರಸ್ತಾವನೆಯಲ್ಲಿ ವಿವರಿಸಿದೆ.

ಯಾವ ರಾಜ್ಯದಲ್ಲಿ ಹೇಗಿದೆ?

ತಮಿಳುನಾಡು

ನಗರ ಸಾರಿಗೆ ಹಾಗೂ ಸಾಮಾನ್ಯ ಬಸ್‌ಗಳಲ್ಲಿ ಮಾತ್ರ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯವಿದೆ. ಅಂದಾಜು 5,000 ಬಸ್‌ಗಳಲ್ಲಿ ಮಹಿಳೆಯರು ಪ್ರಯಾಣಿಸುತ್ತಾರೆ. ನಿರ್ವಾಹಕರು ಪ್ರತೀ ಮಹಿಳಾ ಪ್ರಯಾಣಿಕರಿಗೆ ಝೀರೋ ಮೊತ್ತದ ಮಹಿಳಾ ಟಿಕೆಟ್ ವಿತರಿಸುತ್ತಾರೆ. ಪ್ರತೀ ಮಹಿಳೆಗೆ ಪ್ರತೀ ಪ್ರಯಾಣಕ್ಕೆ 16 ರೂ.ನಂತೆ ಪ್ರಯಾಣ ದರ ಮೊತ್ತವನ್ನು ಸಾರಿಗೆ ಸಂಸ್ಥೆಗಳಿಗೆ ತಮಿಳುನಾಡು ಸರಕಾರವು ಮರು ಪಾವತಿಸುತ್ತದೆ.

ಮಹಾರಾಷ್ಟ್ರ

ಎಲ್ಲಾ ರೀತಿಯ ಸಾರಿಗೆಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಶೇ.50 ರಿಯಾಯಿತಿ ಪ್ರಯಾಣ ಸೌಲಭ್ಯವಿದೆ. ಮಹಿಳಾ ಸಮ್ಮಾನ ಯೋಜನೆ ಹೆಸರಿನಲ್ಲಿ ಟಿಕೆಟ್‌ಗಳನ್ನು ಇಟಿಎಂ ಮೂಲಕ ವಿತರಿಸುತ್ತಾರೆ. ಇಲ್ಲಿಯೂ ಶೇ.50ರಷ್ಟು ರಿಯಾಯಿತಿ ಮೊತ್ತವನ್ನು ಮಹಾರಾಷ್ಟ್ರ ಸಾರಿಗೆ ಸಂಸ್ಥೆಗೆ ಮರುಪಾವತಿಸುತ್ತದೆ.

ದಿಲ್ಲಿ

ನಗರ ಸಾರಿಗೆಯ ಎಲ್ಲಾ ವರ್ಗದ ಬಸ್‌ಗಳಲ್ಲಿ ಉಚಿತ (ಎಸಿ/ನಾನ್ ಎಸಿ ಬಸ್‌ಗಳಲ್ಲಿ)ವಾಗಿ ಅಂದಾಜು 4,060 ಬಸ್‌ಗಳಲ್ಲಿ ಮಹಿ ಳೆಯರು ಪ್ರಯಾಣಿಸುತ್ತಿದ್ದಾರೆ. ಪ್ರತೀ ಮಹಿಳೆಗೆ ಪ್ರತೀ ಪ್ರಯಾಣಕ್ಕೆ 10 ರೂ.ನಂತೆ ಪ್ರಯಾಣ ದರ ಮೊತ್ತವನ್ನು ಸಾರಿಗೆ ಸಂಸ್ಥೆಗೆ ದಿಲ್ಲಿ ಸರಕಾರವು ಮರುಪಾವತಿಸುತ್ತದೆ.

ಪಂಜಾಬ್

ನಗರ ಮತ್ತು ಸಾಮಾನ್ಯ ಸಾರಿಗೆಯಲ್ಲಿ ಪಂಜಾಬ್ ಹಾಗೂ ಚಂಡಿಗಡದಲ್ಲಿರುವ ಎಲ್ಲ ಮಹಿಳೆಯರಿಗೆ ಉಚಿತ ಪ್ರಯಾಣ. ಸಾರಿಗೆ ಸಂಸ್ಥೆಯು ಉಚಿತ ಪ್ರಯಾಣದ ಮೊತ್ತವನ್ನು ಮರು ಪಾವತಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತದೆ. ಅದರಂತೆ ಸರಕಾರವು ಮರು ಪಾವತಿಸುತ್ತದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X