Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಿಸಿಬಿ ಮನವೊಲಿಕೆಗೆ ಲಾಹೋರ್‌ಗೆ ಬಂದಿರುವ...

ಪಿಸಿಬಿ ಮನವೊಲಿಕೆಗೆ ಲಾಹೋರ್‌ಗೆ ಬಂದಿರುವ ಐಸಿಸಿ ಮುಖ್ಯಸ್ಥರು

31 May 2023 5:48 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪಿಸಿಬಿ ಮನವೊಲಿಕೆಗೆ ಲಾಹೋರ್‌ಗೆ ಬಂದಿರುವ ಐಸಿಸಿ ಮುಖ್ಯಸ್ಥರು

ಲಾಹೋರ್: ಏಕದಿನ ಕ್ರಿಕೆಟ್ ವಿಶ್ವಕಪ್‌ನ ತನ್ನ ಪಂದ್ಯಗಳಿಗೆ ವಿಶೇಷ ಮಾದರಿಯೊಂದನ್ನು ರೂಪಿಸುವಂತೆ ಒತ್ತಾಯಿಸಬಾರದು ಎಂಬುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ)ಯ ಮನವೊಲಿಸುವುದಕ್ಕಾಗಿ ಅಂತರ್‌ರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಬುಧವಾರ ಲಾಹೋರ್‌ಗೆ ಭೇಟಿ ನೀಡಿದ್ದಾರೆ.

ವಿಶ್ವಕಪ್ ಪಂದ್ಯಾವಳಿಯು ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿದೆ.

ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡವು ಪಾಲ್ಗೊಳ್ಳುವ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯಿಂದ ಭರವಸೆಗಳನ್ನು ಪಡೆಯುವ ನಿರ್ದಿಷ್ಟ ಉದ್ದೇಶದಿಂದ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್‌ಲೇ ಮತ್ತು ಸಿಇಒ ಜೆಫ್ ಆ್ಯಲರ್ಡಿಸ್ ಲಾಹೋರ್‌ಗೆ ಬಂದಿದ್ದಾರೆ ಎನ್ನುವುದನ್ನು ಪಿಸಿಬಿಯ ಮೂಲಗಳು ಖಚಿತಪಡಿಸಿವೆ ಎಂದು ಪಿಟಿಐ ವರದಿ ಮಾಡಿದೆ.

ವಿಶ್ವಕಪ್‌ಗೆ ಮುನ್ನ ನಡೆಯುವ ಏಶ್ಯ ಕಪ್‌ನಲ್ಲಿ ಆಡಲು ಭಾರತೀಯ ಕ್ರಿಕೆಟ್ ತಂಡವು ಪಾಕಿಸ್ತಾನಕ್ಕೆ ಬರದಿದ್ದರೆ, ತನ್ನ ತಂಡವೂ ವಿಶ್ವಕಪ್‌ನಲ್ಲಿ ಆಡಲು ಭಾರತಕ್ಕೆ ಹೋಗುವುದಿಲ್ಲ ಎಂಬುದಾಗಿ ಪಿಸಿಬಿ ಅಧ್ಯಕ್ಷ ನಜಾಮ್ ಸೇಠಿ ಹೇಳಿಕೆ ನೀಡಿದ ಬಳಿಕ ಈ ಬೆಳವಣಿಗೆ ಸಂಭವಿಸಿದೆ.

‘‘ವಿಶೇಷ ಮಾದರಿಯೊಂದನ್ನು ರೂಪಿಸುವಂತೆ ನಜಾಮ್ ಸೇಠಿ ಒತ್ತಾಯಿಸುತ್ತಿರುವುದು ಐಸಿಸಿ ಮತ್ತು ವಿಶ್ವಕಪ್ ಆತಿಥೇಯ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಕಳವಳಕ್ಕೆ ಕಾರಣವಾಗಿದೆ. ವಿಶೇಷ ಮಾದರಿಯೊಂದನ್ನು ರೂಪಿಸುವಂತೆ ಅವರು ಒತ್ತಾಯಿಸುತ್ತಿರುವುದು ಏಶ್ಯ ಕಪ್‌ಗಾಗಿಯಾದರೂ, ಒಮ್ಮೆ ಇದಕ್ಕೆ ಒಪ್ಪಿಗೆ ನೀಡಿದರೆ, ಬಳಿಕ ನಡೆಯಲಿರುವ ವಿಶ್ವಕಪ್‌ಗೂ ಇದೇ ಮಾದರಿಯನ್ನು ಜಾರಿಗೊಳಿಸುವಂತೆ ಪಿಸಿಬಿಯು ಐಸಿಸಿಯನ್ನು ಒತ್ತಾಯಿಸಬಹುದು ಎಂಬ ಕಳವಳವನ್ನು ಐಸಿಸಿ ಹೊಂದಿದೆ’’ ಎಂದು ಮೂಲಗಳು ಹೇಳಿವೆ.

ವಿಶೇಷ ಮಾದರಿ ಎಂದರೆ ತಟಸ್ಥ ಸ್ಥಳಗಳಲ್ಲಿ ಆಡಲು ತಂಡಗಳಿಗೆ ಅವಕಾಶ ನೀಡುವುದು.

ಕ್ರಿಕೆಟ್ ತಂಡವನ್ನು ಭಾರತಕ್ಕೆ ಕಳುಹಿಸಲು ಪಾಕಿಸ್ತಾನ ಅನುಮೋದನೆ ನೀಡದಿದ್ದರೆ ಅಥವಾ ಭದ್ರತಾ ಭೀತಿ ಇದ್ದರೆ, ಪಾಕಿಸ್ತಾನದ ಪಂದ್ಯಗಳನ್ನು ತಟಸ್ಥ ಸ್ಥಳವೊಂದರಲ್ಲಿ ಏರ್ಪಡಿಸುವಂತೆ ಪಿಸಿಬಿಯು ಐಸಿಸಿಯನ್ನು ಕೇಳಬಹುದು ಎಂಬ ಸೂಚನೆಯನ್ನು ಸೇಠಿ ಈಗಾಗಲೇ ನೀಡಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X