Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 15 ಸರಕಾರಿ ಅಧಿಕಾರಿಗಳ ನಿವಾಸ, ಕಚೇರಿ...

15 ಸರಕಾರಿ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ವಿದೇಶಿ ಮದ್ಯ, ಕೋಟ್ಯಾಂತರ ರೂಪಾಯಿ ಆಸ್ತಿ, ನಗದು ಪತ್ತೆ

31 May 2023 11:42 PM IST
share
15 ಸರಕಾರಿ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
ವಿದೇಶಿ ಮದ್ಯ, ಕೋಟ್ಯಾಂತರ ರೂಪಾಯಿ ಆಸ್ತಿ, ನಗದು ಪತ್ತೆ

ಬೆಂಗಳೂರು: ಆದಾಯಕ್ಕಿಂತ ಅಧಿಕ ಸಂಪಾದನೆ ಆರೋಪ ಕೇಳಿಬಂದ ಬೆನ್ನಲ್ಲೇ ರಾಜ್ಯ 15 ಸರಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ 57 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ನಡೆಸಿದ್ದು, ಈ ವೇಳೆ ವಿದೇಶಿ ಮದ್ಯ, ಮನೆಯ ಲಾಕರ್‍ಗಳಲ್ಲಿ ಕಂತೆ-ಕಂತೆ ನೋಟುಗಳು, ಕೆಜಿಗಟ್ಟಲೆ ಚಿನ್ನ, ಹತ್ತಾರು ನಿವೇಶನಗಳು ಸೇರಿದಂತೆ ಇನ್ನಿತರೆ ದುಬಾರಿ ವಸ್ತುಗಳು ಪತ್ತೆಯಾಗಿವೆ.

ಬುಧವಾರ ಮುಂಜಾನೆ ಬೆಂಗಳೂರು, ಮೈಸೂರು, ಮಂಗಳೂರು, ಹಾವೇರಿ ಸೇರಿದಂತೆ ಒಟ್ಟು 57 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದರು. ಈ ವೇಳೆ ಪತ್ತೆಯಾದ ಅಕ್ರಮ ಸಂಪತ್ತು ಕುರಿತು ಸರಕಾರಿ ಅಧಿಕಾರಿಗಳಿಂದು ಲಿಖಿತ ಮಾಹಿತಿ ಪಡೆದು ಆಯಾ ವ್ಯಾಪ್ತಿಯ ಕೇಂದ್ರಗಳಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಮುಂದುವೆಸಿದ್ದಾರೆ.

ಬೆಂಗಳೂರಿನ ಕೆ.ಆರ್.ವೃತ್ತದಲ್ಲಿರುವ ಬೆಸ್ಕಾಂ ಕಚೇರಿಯ ನಿರ್ದೇಶಕ ಎಚ್.ಜೆ.ರಮೇಶ್ ಅವರಿಗೆ ಸೇರಿದ 10 ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಇದೇ ವೇಳೆ ಬರೋಬ್ಬರಿ 5.6 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪೈಕಿ ಬೈಕ್, ಕಾರು, ಮದ್ಯದ ಬಾಟಲಿಗಳು, ಗೃಹೋಪಯೋಗಿ ಉಪಕರಣಗಳು, ವಿವಿಧ ಶೇರುಗಳು 1.4 ಕೊಟಿ ರೂ. ಮೌಲ್ಯ ಹೊಂದಿರುವುದು ಗೊತ್ತಾಗಿದೆ.
ಅಷ್ಟೇ ಅಲ್ಲದೆ, ದೇವನಹಳ್ಳಿಯ ಹೈಟೆಕ್ ಡಿಫೆನ್‍ಸ್ ಆ್ಯಂಡ್ ಏರೋಸ್ಪೇಸ್ ಪಾರ್ಕ್ ಇಂಡಸ್ಟ್ರಿಟಿಯಲ್ ಏರಿಯಾದಲ್ಲಿ 1 ನಿವೇಶನ, ಡಾಬಸ್‍ಪೇಟೆಯ ಸೋಂಪರದ 2ನೇ ಹಂತದಲ್ಲಿರುವ 0.75 ಎಕರೆ ಭೂಮಿ, ಬಸವೇಶ್ವರ ನಗರದ ಬಿಇಎಂಎಲ್ ಲೇಔಟ್‍ನಲ್ಲಿ ನಿರ್ಮಾಣ ಹಂತದ ಮನೆ ಮೌಲ್ಯಗಳು 4.20 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಬನ್ನೇರುಘಟ್ಟ ರಸ್ತೆಯ ಕಾರ್ಮಿಕ ಭವನದಲ್ಲಿ ಕಾರ್ಖಾನೆಗಳ ಉಪ ನಿರ್ದೇಶಕ ಟಿ.ವಿ.ನಾರಾಯಣಪ್ಪ ಅವರಿಗೆ ಸೇರಿದ 4 ಕಡೆಗಳಿಗೆ ದಾಳಿ ನಡೆಸಿದಾಗ ಎರಡು ಬೈಕ್, ಚಿನ್ನಾಭರಣ, 17 ಸಾವಿರ ರೂ. ನಗದು ಪತ್ತೆಯಾಗಿದೆ. ಹಾಗೇ, 1 ನಿವೇಶನ, 3 ಮನೆ, 10 ಎಕರೆ ಕೃಷಿ ಭೂಮಿಯ ಮೊತ್ತ 2.58 ಕೋಟಿ ರೂ. ಎಂದು ಅಂದಾಜಿಸಲಾಗಿದೆ. 

ಬೆಂಗಳೂರು ಉತ್ತರ ತಾಲ್ಲೂಕಿನ ಕಿಟ್ಟನಹಳ್ಳಿ ಗ್ರಾಮ ಪಂಚಾಯತಿಯ ಕಾರ್ಯದರ್ಶಿ ಎಸ್.ಡಿ.ರಾಮಸ್ವಾಮಿ ಅವರಿಗೆ ಸೇರಿದ ನಿವಾಸ ಸೇರಿದಂತೆ 3 ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಚಿನ್ನ, ಬಳ್ಳಿ, ನಿವೇಶನ ಸೇರಿದಂತೆ ಬೆಲೆ ಬಾಳುವ ವಸ್ತು ಹೊಂದಿರುವುದು ಗೊತ್ತಾಗಿದೆ.

ಬೊಮ್ಮನಹಳ್ಳಿ ಬಿಬಿಎಂಪಿ ವಲಯದ ಕಾರ್ಯನಿರ್ವಾಹಕ ಅಭಿಯಂತರ ಎನ್.ಜಿ.ಪ್ರಮೋದ್ ಕುಮಾರ್ ಅವರಿಗೆ ಸೇರಿದ ನಿವಾಸದ ಮೇಲೆ ಮಂಡ್ಯ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಶೋಧಿಸಿದರು. 

ಮೈಸೂರಿನ ಮೂಡಾ ಮುಖ್ಯ ಲೆಕ್ಕಾಧಿಕಾರಿ ಎನ್.ಮುತ್ತುಗೆ ಸೇರಿದ 3 ಕಡೆ ಹಾಗೂ ಮೈಸೂರು ಸಿಟಿ ಕಾರ್ಪೋರೇಷನ್‍ನ ಸುಪರಿಟೆಂಡೆಂಟ್ ಇಂಜಿನಿಯರ್‍ಗೆ ಸೇರಿದ 3 ಕಡೆಗಳಲ್ಲಿ ಮೈಸೂರು ಲೋಕಾ ಪೊಲೀಸರು ಕಾರ್ಯಾಚರಣೆ ನಡೆಸಿದರು.

ನಂಜನಗೂಡಿನ ಹಿರಿಯ ಸಬ್ ರಿಜಿಸ್ಟ್ರಾರ್ ಎಂ.ಶಿವಶಂಕರ ಮೂರ್ತಿಗೆ ಸೇರಿದ 4 ಕಡೆ ಚಾಮರಾಜನಗರ ಲೋಕಾ ಪೊಲೀಸರು ದಾಳಿ ನಡೆಸಿದರು.

ಶಿವಮೊಗ್ಗ ಶಿಕಾರಿಪುರದ ಆರ್‍ಡಿಪಿಆರ್ ಇಂಜಿನಿಯರಿಂಗ್ ಸಬ್ ಡಿವಿಜನ್‍ನ ಜೆ.ಇ.ಶಂಕರ ನಾಯಕ್‍ಗೆ ಸೇರಿದ 3 ಕಡೆ ಹಾಗೂ ಶಿವಮೊಗ್ಗ ವಲಯದ ತುಂಗಾ ಯೋಜನೆ ಕರ್ನಾಟಕ ನೀರಾವರಿ ನಿಗಮದ ಎಸ್.ಐ.ಕೆ.ಪ್ರಶಾಂತ್‍ಗೆ ಸೇರಿದ 4 ಕಡೆಗಳಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ.

ರಾಣೇಬೆನ್ನೂರು ಹಾವೇರಿ ವಲಯದ ನಿರ್ಮಿತಿ ಕೇಂದ್ರದ ಯೋಜನಾ ಇಂಜಿನಿಯರ್ ವಾಗೀಶ್‍ಗೆ ಸೇರಿದ 3 ಕಡೆ ಹಾವೇರಿ ಲೋಕಾ ಪೊಲೀಸರು, ಕೊಪ್ಪಳ ಕೆಆರ್‍ಐಡಿಎಲ್‍ಮ ಈಈ ಜರಣಪ್ಪ ಎಂ.ಚಿಂಚೋಳಿಕರ್‍ಗೆ ಸೇರಿದ 4 ಕಡೆ ಕೊಪ್ಪಳ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. 
ಮೈಸೂರಿನ ಕೆಎಡಿಬಿ ಇಇ ಸಿ.ಎನ್.ಮೂರ್ತಿಗೆ ಸೇರಿದ 3 ಕಡೆ ತುಮಕೂರು ಲೋಕಾ ಪೊಲೀಸರು ದಾಳಿ ನಡೆಸಿದ್ದಾರೆ.

ಉಡುಪಿ, ಮಂಗಳೂರಿನಲ್ಲೂ ದಾಳಿ, ಶೋಧ..!
ಬೆಂಗಳೂರಿನ ವಿಕಾಸಸೌಧದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ಭೂ ವಿಜ್ಞಾನಿ ಎ.ಎಂ.ನಿರಂಜನ್ ಅವರಿಗೆ ಸೇರಿದ 4 ಕಡೆಗಳಲ್ಲಿ ಮಂಗಳೂರು ಪೊಲೀಸರು ಶೋಧ ನಡೆಸಿದ್ದಾರೆ. ಉಡುಪಿಯ ಮಣಿಪಾಲದ ಕಾರ್ಮಿಕ ಅಧಿಕಾರಿ ಬಿ.ಆರ್.ಕುಮಾರ್‍ಗೆ ಸೇರಿದ 2 ಕಡೆ ದಾಳಿ ನಡೆಸಿ ಅಘೋಷಿತ ಆಸ್ತಿಗೆ ಸಂಬಂಧಿಸಿದ ಮೌಲ್ಯಯುತ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. 

share
Next Story
X