Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾತಿ ತಿಳಿದ ಬಳಿಕ ಸಹಪಾಠಿಗಳ ನಡವಳಿಕೆ...

ಜಾತಿ ತಿಳಿದ ಬಳಿಕ ಸಹಪಾಠಿಗಳ ನಡವಳಿಕೆ ಬದಲಾವಣೆ: ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದ ಚಾರ್ಚ್‌ಶೀಟ್‌ನಲ್ಲಿ ಉಲ್ಲೇಖ

1 Jun 2023 1:07 PM IST
share
ಜಾತಿ ತಿಳಿದ ಬಳಿಕ ಸಹಪಾಠಿಗಳ ನಡವಳಿಕೆ ಬದಲಾವಣೆ: ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣದ ಚಾರ್ಚ್‌ಶೀಟ್‌ನಲ್ಲಿ ಉಲ್ಲೇಖ

ಮುಂಬೈ: ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಬಾಂಬೆ ಇಲ್ಲಿನ ಕ್ಯಾಂಪಸ್ಸಿನಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ಸಂಸ್ಥೆಯ ವಿದ್ಯಾರ್ಥಿ ದರ್ಶನ್‌ ಸೋಳಂಕಿ ತನ್ನ ತಾಯಿಗೆ ಮೊದಲೇ ತಿಳಿಸಿದ್ದನೆಂಬ ವಿಚಾರ ಪೊಲೀಸರು ಸಲ್ಲಿಸಿದ್ದ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಗೊಂಡಿದೆ.

ತನ್ನ ಜಾತಿಯ ಬಗ್ಗೆ ತಿಳಿಯುತ್ತಲೇ ಸಹಪಾಠಿಗಳ ನಡವಳಿಕೆ ಬದಲಾಗಿತ್ತು ಎಂದು ತಾಯಿಯ ಜೊತೆಗಿನ ದೂರವಾಣಿ ಸಂಭಾಷಣೆಗಳಲ್ಲಿ ಆತ ಹೇಳಿದ್ದ ಎಂದೂ ಅದರಲ್ಲಿ ಉಲ್ಲೇಖವಾಗಿದೆ.

ಮಂಗಳವಾರ ಪೊಲೀಸರು ಪರಿಶಿಷ್ಟ ಜಾತಿ, ಪಂಗಡಗಳ ದೌರ್ಜನ್ಯ ತಡೆ ಕಾಯಿದೆಯಡಿಯ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಸೋಳಂಕಿಯ ತಾಯಿಯ ಹೇಳಿಕೆಯನ್ನೂ ಸೇರಿಸಲಾಗಿದೆ.

ಆತ್ಮಹತ್ಯೆಗೆ ಪ್ರಚೋದನೆ ಆರೋಪದ ಮೇಲೆ ಬಂಧಿಸಲ್ಪಟ್ಟು ನಂತರ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಸೋಳಂಕಿಯ ಸಹಪಾಠಿ ಅರ್ಮಾನ್‌ ಖತ್ರಿ ಹೆಸರು ಕೂಡ ಚಾರ್ಚ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಅಹ್ಮದಾಬಾದ್‌ ಮೂಲದ ಸೋಳಂಕಿ ಐಐಟಿ ಬಾಂಬೆಯಲ್ಲಿ ಪ್ರಥಮ ವರ್ಷದ ಬಿಟೆಕ್‌ ವಿದ್ಯಾರ್ಥಿಯಾಗಿದ್ದ. ಫೆಬ್ರವರಿ 12, 2023 ರಲ್ಲಿ ಆತ ಮುಂಬೈಯ ಪೊವೈ ಪ್ರದೇಶದ ಐಐಟಿಬಿ ಕ್ಯಾಂಪಸ್ಸಿನಲ್ಲಿರುವ ಹಾಸ್ಟೆಲ್‌ ಕಟ್ಟಡದ ಏಳನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ಹೇಳಲಾಗಿತ್ತು. ಸೆಮಿಸ್ಟರ್‌ ಪರೀಕ್ಷೆ ಅಂತ್ಯಗೊಂಡ ಮರುದಿನವೇ ಈ ಘಟನೆ ನಡೆದಿತ್ತು.

ಸೋಳಂಕಿ ಧರ್ಮದ ಬಗ್ಗೆ ನಿಂದನಾತ್ಮಕವಾಗಿ ಮಾತನಾಡಿದ ನಂತರ ಆತನನ್ನು ಕೊಲ್ಲುವ ಬೆದರಿಕೆಯನ್ನು ಖತ್ರಿ ಒಡ್ಡಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಐಐಟಿಯಲ್ಲಿ ಜಾತಿ ಆಧರಿತ ತಾರತಮ್ಯವಿದೆ ಎಂದು ಸೋಳಂಕಿ ತನ್ನ ಸಹೋದರಿ ಜೊತೆ ದೂರವಾಣಿ ಸಂಭಾಷಣೆಯಲ್ಲಿ ಡಿಸೆಂಬರ್‌ 2022 ರಲ್ಲಿ ಹೇಳಿದ್ದನೆಂದು ಸೋಳಂಕಿ ತಾಯಿಯ ಹೇಳಿಕೆ ತಿಳಿಸಿದೆ.

ಫೆಬ್ರವರಿ 12ರಂದು ಸೋಳಂಕಿ ತಾಯಿಗೆ ಕರೆ ಮಾಡಿ ತಾನು ಫೆಬ್ರವರಿ 14ರಂದು ವಾಪಸ್‌ ಬರುವುದಾಗಿ ಹಾಗೂ ಸೌಹಾರ್ದಕೂಟಕ್ಕೆ ಎಲ್ಲರನ್ನೂ ಆಹ್ವಾನಿಸಬೇಕೆಂದು ತಿಳಿಸಿದ್ದ.

ಇದಾದ ಎರಡೇ ಗಂಟೆಗಳಲ್ಲಿ ಆತನ ತಂದೆಗೆ ಕರೆಯೊಂದು ಬಂದು ಆತ ಮಹಡಿಯಿಂದ ಬಿದ್ದಿರುವ ಮಾಹಿತಿ ದೊರಕಿತ್ತು.

share
Next Story
X