ಗಾಂಜಾ ಸೇವನೆ: ನಾಲ್ವರು ವಶಕ್ಕೆ

ಮಣಿಪಾಲ, ಜೂ.1: ಗಾಂಜಾ ಸೇವನೆಗೆ ಸಂಬಂಧಿಸಿ ನಾಲ್ವರನ್ನು ಮಣಿಪಾಲ ಪೊಲೀಸರು ವಿದ್ಯಾರತ್ನ ನಗರದ ವಿದ್ಯಾರತ್ನ ರೆಸಿಡೆನ್ಸಿ ಮಣಿಪಾಲ ಬಳಿ ಮೇ 28ರಂದು ರಾತ್ರಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಓಡಿಸ್ಸಾದ ಸಾತ್ವಿಕ್ ಸಾಹೂ(21), ಅಸ್ಸಾಮಿನ ರಿಷಿರಾಜ್ ಮೊಮಿನ್(21), ಅಮನ್ ಗೊಗೈ(21), ಬಿಹಾರದ ಅಮನ್ ಕುಮಾರ್(21) ಎಂಬವರನ್ನು ವಶಕ್ಕೆ ಪಡೆದು ಮಣಿಪಾಲ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು, ವರದಿಯಲ್ಲಿ ಇವರೆಲ್ಲರು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story